ಕಾವೇರಿ ನದಿ‌ ನೀರು ವಿವಾದ: ಮಾರಸಂದ್ರ ಟೋಲ್ ಬಳಿ ರಸ್ತೆ ತಡೆ ಮಾಡಿ ಪ್ರತಿಭಟಿಸಿದ ಕರವೇ ಬಿ.ಎಸ್. ಚಂದ್ರಶೇಖರ್ ಬಣ

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ವಿಚಾರದಲ್ಲಿ ಉದ್ಭವವಾಗಿರುವ ವಿವಾದ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನದಂತೆ ನೆರೆ ರಾಜ್ಯಕ್ಕೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಇಂದು ಹಲವು ಸಂಘಟನೆಗಳಿಂದ ಬೆಂಗಳೂರು ಬಂದ್ ಘೋಷಣೆ ಮಾಡಿ ಪ್ರತಿಭಟನೆ ನಡೆಸಲಾಯಿತು.

ಅದೇರೀತಿ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷರಾದ ಬಿಎಸ್ ಚಂದ್ರಶೇಖರ್ ರವರ ನೇತೃತ್ವದಲ್ಲಿಂದು ಬೆಂಗಳೂರು ಬಂದ್ ಕರೆ ಬೆಂಬಲಿಸಿ ಮಾರಸಂದ್ರ ಟೋಲ್ ಬಳಿ ರಸ್ತೆ ತಡೆ ಮಾಡಿ ಕಾವೇರಿ ಹೋರಾಟಕ್ಕೆ ಸಂಘಟನೆಯಿಂದ ಬೆಂಬಲವನ್ನು ಸೂಚಿಸಲಾಯಿತು.

ಕಾರ್ಯಕ್ರಮದಲ್ಲಿ ಬಿ.ಎಸ್.ಚಂದ್ರಶೇಖರ್ ಅವರು ಮಾತನಾಡಿ, ಕಾವೇರಿ ಹೋರಾಟದ ಬಗ್ಗೆ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳದೆ ಇದ್ದ ಪಕ್ಷದಲ್ಲಿ ನಮ್ಮ ಸಂಘಟನೆ ನಿರಂತರವಾಗಿ ಉಗ್ರವಾದ ಹೋರಾಟ ಮಾಡುತ್ತದೆ ಎಂದು ಎಚ್ಚರಿ ನೀಡಿದರು.

ಈ ವೇಳೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ರಮೇಶ್, ಉಪಾಧ್ಯಕ್ಷ ಆರಾಧ್ಯ, ರಾಜ್ಯ ಘಟಕದ ದೊಡ್ಡೇಗೌಡ, ಖಜಾಂಚಿ ಚೇತನ್ ಗೌಡ, ನಾಗೇಶ್, ನರೇಂದ್ರ, ವಾಸು, ಚಂದ್ರು, ಪುನೀತ್, ಭುವನ್, ತಾಲೂಕು ಯುವ ಘಟಕದ ಅಧ್ಯಕ್ಷರಾದ ರಂಜಿತ್ ಕುಮಾರ್, ಬಸವರಾಜ್, ಅಂಬರೀಶ್, ಲಕ್ಷ್ಮಿಕಾಂತ್, ಆಟೋ ಘಟಕದ ತನ್ವೀರ್ ಹಾಗೂ ಪದಾಧಿಕಾರಿಗಳು, ಮಹಿಳಾ ಘಟಕದ ಅಧ್ಯಕ್ಷರಾದ ರಾಧಮ್ಮ, ಗಂಗಮ್ಮ ಹಾಗೂ ಹೊಸಹಳ್ಳಿ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

11 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

2 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

3 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago