ಕಾವೇರಿ ನೀರಿಗಾಗಿ ಕರ್ನಾಟಕ ಬಂದ್: ದೊಡ್ಡಬಳ್ಳಾಪುರ ನಗರ ಸಂಪೂರ್ಣ ಸ್ತಬ್ಧ: ರಸ್ತೆಗಿಳಿದು ಪ್ರತಿಭಟಿಸುತ್ತಿರುವ ವಿವಿಧ ಸಂಘಟನೆಗಳು

ವಿವಿಧ ಕನ್ನಡಪರ, ರೈತ, ದಲಿತ, ಪ್ರಗತಿ, ಕಾರ್ಮಿಕಪರ ಸಂಘಟನೆಗಳ ಒಕ್ಕೂಟದಿಂದ ಬಂದ್ ಗೆ ಬೆಂಬಲ ನೀಡಿ ಕಾವೇರಿ ನೀರನ್ನ ತಮಿಳುನಾಡಿಗೆ ಬಿಡದಂತೆ ಸರ್ಕಾರಕ್ಕೆ ಒತ್ತಾಯ ಮಾಡಿದರು.

ನಗರದಾದ್ಯಂತ ಮೆಡಿಕಲ್, ನಂದಿನಿ ಪಾರ್ಲರ್ ಹೊರತುಪಡಿಸಿ ಎಲ್ಲಾ ಅಂಗಡಿಗಳಿಗೆ ಬೀಗ ಹಾಕಲಾಗಿದೆ. ಜನರಿಲ್ಲದೆ ಬಣಗುಡುತ್ತಿರುವ ಎಪಿಎಎಂಸಿ, ಕೆಆರ್ ಮಾರುಕಟ್ಟೆ, ಬಸ್ ನಿಲ್ದಾಣ, ಡಿ.ಕ್ರಾಸ್, ಅಂಬೇಡ್ಕರ್ ಸರ್ಕಲ್, ಜಿ.ರಾಮೇಗೌಡ ಸರ್ಕಲ್, ತಾಲ್ಲೂಕು ಆಫೀಸ್ ಸರ್ಕಲ್ ಸೇರಿದಂತೆ ನಗರ ಸಂಪೂರ್ಣ ಸ್ತಬ್ಧವಾಗಿದೆ.

ಚಿತ್ರಮಂದಿರಗಳಿಂದಳಿಂದಲೂ ಬಂದ್ ಗೆ ಬೆಂಬಲ, ಸೌಂದರ್ಯಮಹಲ್, ವೈಭವ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ರದ್ದು ಮಾಡಲಾಗಿದೆ.

ಉಪನೋಂದಾಣಾಧಿಕಾರಿಗಳ ಕಚೇರಿ ಹೊರತುಪಡಿಸಿ ತಹಸೀಲ್ದಾರ್, ತಾಲ್ಲೂಕು ಪಂಚಾಯಿತಿ ಸೇರಿದಂತೆ ಬಹುತೇಕ ಎಲ್ಲಾ ಸರ್ಕಾರಿ ಕಚೇರಿಗಳು ಸಹ ಬಂದ್ ಆಗಿವೆ.

ಶಾಲಾ-ಕಾಲೇಜುಗಳ ರಜೆ ಘೋಷಣೆ ಹಿನ್ನೆಲೆ, ಮೈದಾನದತ್ತ ಹೆಜ್ಜೆಹಾಕಿರುವ ವಿದ್ಯಾರ್ಥಿಗಳು.

Ramesh Babu

Journalist

Recent Posts

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

7 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

8 hours ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

19 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago