ಕಾವೇರಿ 2.0 ತಂತ್ರಾಂಶಕ್ಕೆ ಚಾಲನೆ; ದೊಡ್ಡಬಳ್ಳಾಪುರ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಲೋಕಾರ್ಪಣೆ

ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕ ಮತ್ತು ಕಿಂಚಿತ್ತೂ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಕಾರ್ಯನಿರ್ಹಸುವ ಜನಸ್ನೇಹಿ ಸೇವೆ ನೀಡುವ ಉದ್ದೇಶದಿಂದ ಕಾವೇರಿ 2.0 ತಂತ್ರಾಂಶ ಅಭಿವೃದ್ದಿಪಡಿಸಲಾಗಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖಾ ಐಜಿಆರ್ ಡಾ.ಬಿ.ಆರ್.ಮಮತಾ ತಿಳಿಸಿದರು.

ನಗರದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ನೂತನ ತಂತ್ರಾಂಶ ಕಾವೇರಿ 2.0 ತಂತ್ರಜ್ಞಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇದರಿಂದ ನಕಲಿ ದಾಖಲೆ ನೀಡಿ ನೋಂದಣಿ ಪ್ರಕ್ರಿಯೆಗೆ ಕಡಿವಾಣ ಬೀಳಲಿದ್ದು, ಕಚೇರಿಗೆ ಬಂದು ದಿನವಿಡಿ ಕಾಯುವುದು ತಪ್ಪುತ್ತದೆ. ಮನೆಯಲ್ಲೇ ಕುಳಿತು ಸಂಬಂಧಿಸಿದ ದಾಖಲೆಗಳನ್ನು ಆನ್ಲೈನ್ ಮೂಲಕ ಸಲ್ಲಿಸಿ ನಿಗದಿಪಡಿಸಿದ ದಿನದಂದು ಕಚೇರಿಗೆ ಬಂದು ಭಾವಚಿತ್ರ ಹೆಬ್ಬಟ್ಟಿನ ಗುರುತು ನೀಡಿದ ನಂತರ ನೋಂದಣಿ ಮಾಡಲಾಗುವುದು. 10 ನಿಮಿಷದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ನಾಗರೀಕರು ನೋಂದಣಿ ಕಚೇರಿಗೆ ಬರುವಾಗ ಮೊದಲು ಎಲ್ಲಾ ಡೇಟಾ ಮತ್ತು ದಾಖಲೆಗಳನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡಿ ಕಚೇರಿಗೆ ಸಲ್ಲಿಸಬೇಕು. ಇವುಗಳನ್ನು ಪರಿಶೀಲಿಸಿ ನಿಗದಿತ ಶುಲ್ಕ ಪಾವತಿಸಲು ತಿಳಿಸಲಾಗುತ್ತದೆ.

ನಾಗರಿಕರು ತಮ್ಮ ಅನುಕೂಲಕ್ಕೆ ಅನುಗುಣವಾಗಿ ನೋಂದಣಿ ಪ್ರಕ್ರಿಯೆ ದಿನಾಂಕ ಮತ್ತು ಸಮಯ ನಿಗದಿಪಡಿಸಬಹುದಾಗಿದೆ. ತಮ್ಮ ಭಾವಚಿತ್ರ ಹೆಬ್ಬೆರಳು ಗುರುತು ಸೆರೆಹಿಡಿಯುವ ಸಂದರ್ಭದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಡಿಜಿಟಲ್ ಸಹಿ ಮಾಡಿರುವ ದಸ್ತಾವೇಜನ್ನು ನಾಗರಿಕರ ಲಾಗಿನ್ ಗೆ ಮತ್ತು ಅವರ ಡಿಜಿ ಲಾಕರ್ ಖಾತೆಗೆ ಕಳುಹಿಸಲಾಗುವುದು. ದಸ್ತಾವೇಜಿನ ಮಾಹಿತಿಯನ್ನು ಸಂಬಂಧಿತ ಇಲಾಖೆಯ ಖಾತಾ ಬದಲಾವಣೆಗೆ ಕಳುಹಿಸಲಾಗುತ್ತದೆ ಎಂದರು.

ಈ ವೇಳೆ ಡಿ‌.ಆರ್ ಮಹಮ್ಮದ್ ಯೂಸುಫ್, ಸಂಯೋಜಕಿ ಶ್ರೀದೇವಿ,ಉಪನೋಂದಣಾಧಿಕಾರಿಗಳಾದ ಸತೀಶ್, ಡಾ. ಬಿ.ಆರ್ ಅನುಪಮಾ ಇದ್ದರು.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

3 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

4 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

4 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

11 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

12 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

15 hours ago