ಕಾವೇರಿ 2.0 ತಂತ್ರಾಂಶಕ್ಕೆ ಚಾಲನೆ; ದೊಡ್ಡಬಳ್ಳಾಪುರ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಲೋಕಾರ್ಪಣೆ

ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕ ಮತ್ತು ಕಿಂಚಿತ್ತೂ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಕಾರ್ಯನಿರ್ಹಸುವ ಜನಸ್ನೇಹಿ ಸೇವೆ ನೀಡುವ ಉದ್ದೇಶದಿಂದ ಕಾವೇರಿ 2.0 ತಂತ್ರಾಂಶ ಅಭಿವೃದ್ದಿಪಡಿಸಲಾಗಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖಾ ಐಜಿಆರ್ ಡಾ.ಬಿ.ಆರ್.ಮಮತಾ ತಿಳಿಸಿದರು.

ನಗರದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ನೂತನ ತಂತ್ರಾಂಶ ಕಾವೇರಿ 2.0 ತಂತ್ರಜ್ಞಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇದರಿಂದ ನಕಲಿ ದಾಖಲೆ ನೀಡಿ ನೋಂದಣಿ ಪ್ರಕ್ರಿಯೆಗೆ ಕಡಿವಾಣ ಬೀಳಲಿದ್ದು, ಕಚೇರಿಗೆ ಬಂದು ದಿನವಿಡಿ ಕಾಯುವುದು ತಪ್ಪುತ್ತದೆ. ಮನೆಯಲ್ಲೇ ಕುಳಿತು ಸಂಬಂಧಿಸಿದ ದಾಖಲೆಗಳನ್ನು ಆನ್ಲೈನ್ ಮೂಲಕ ಸಲ್ಲಿಸಿ ನಿಗದಿಪಡಿಸಿದ ದಿನದಂದು ಕಚೇರಿಗೆ ಬಂದು ಭಾವಚಿತ್ರ ಹೆಬ್ಬಟ್ಟಿನ ಗುರುತು ನೀಡಿದ ನಂತರ ನೋಂದಣಿ ಮಾಡಲಾಗುವುದು. 10 ನಿಮಿಷದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ನಾಗರೀಕರು ನೋಂದಣಿ ಕಚೇರಿಗೆ ಬರುವಾಗ ಮೊದಲು ಎಲ್ಲಾ ಡೇಟಾ ಮತ್ತು ದಾಖಲೆಗಳನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡಿ ಕಚೇರಿಗೆ ಸಲ್ಲಿಸಬೇಕು. ಇವುಗಳನ್ನು ಪರಿಶೀಲಿಸಿ ನಿಗದಿತ ಶುಲ್ಕ ಪಾವತಿಸಲು ತಿಳಿಸಲಾಗುತ್ತದೆ.

ನಾಗರಿಕರು ತಮ್ಮ ಅನುಕೂಲಕ್ಕೆ ಅನುಗುಣವಾಗಿ ನೋಂದಣಿ ಪ್ರಕ್ರಿಯೆ ದಿನಾಂಕ ಮತ್ತು ಸಮಯ ನಿಗದಿಪಡಿಸಬಹುದಾಗಿದೆ. ತಮ್ಮ ಭಾವಚಿತ್ರ ಹೆಬ್ಬೆರಳು ಗುರುತು ಸೆರೆಹಿಡಿಯುವ ಸಂದರ್ಭದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಡಿಜಿಟಲ್ ಸಹಿ ಮಾಡಿರುವ ದಸ್ತಾವೇಜನ್ನು ನಾಗರಿಕರ ಲಾಗಿನ್ ಗೆ ಮತ್ತು ಅವರ ಡಿಜಿ ಲಾಕರ್ ಖಾತೆಗೆ ಕಳುಹಿಸಲಾಗುವುದು. ದಸ್ತಾವೇಜಿನ ಮಾಹಿತಿಯನ್ನು ಸಂಬಂಧಿತ ಇಲಾಖೆಯ ಖಾತಾ ಬದಲಾವಣೆಗೆ ಕಳುಹಿಸಲಾಗುತ್ತದೆ ಎಂದರು.

ಈ ವೇಳೆ ಡಿ‌.ಆರ್ ಮಹಮ್ಮದ್ ಯೂಸುಫ್, ಸಂಯೋಜಕಿ ಶ್ರೀದೇವಿ,ಉಪನೋಂದಣಾಧಿಕಾರಿಗಳಾದ ಸತೀಶ್, ಡಾ. ಬಿ.ಆರ್ ಅನುಪಮಾ ಇದ್ದರು.

Ramesh Babu

Journalist

Share
Published by
Ramesh Babu

Recent Posts

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

31 minutes ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

56 minutes ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

14 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

15 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

18 hours ago