ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕ ಮತ್ತು ಕಿಂಚಿತ್ತೂ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಕಾರ್ಯನಿರ್ಹಸುವ ಜನಸ್ನೇಹಿ ಸೇವೆ ನೀಡುವ ಉದ್ದೇಶದಿಂದ ಕಾವೇರಿ 2.0 ತಂತ್ರಾಂಶ ಅಭಿವೃದ್ದಿಪಡಿಸಲಾಗಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖಾ ಐಜಿಆರ್ ಡಾ.ಬಿ.ಆರ್.ಮಮತಾ ತಿಳಿಸಿದರು.
ನಗರದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ನೂತನ ತಂತ್ರಾಂಶ ಕಾವೇರಿ 2.0 ತಂತ್ರಜ್ಞಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇದರಿಂದ ನಕಲಿ ದಾಖಲೆ ನೀಡಿ ನೋಂದಣಿ ಪ್ರಕ್ರಿಯೆಗೆ ಕಡಿವಾಣ ಬೀಳಲಿದ್ದು, ಕಚೇರಿಗೆ ಬಂದು ದಿನವಿಡಿ ಕಾಯುವುದು ತಪ್ಪುತ್ತದೆ. ಮನೆಯಲ್ಲೇ ಕುಳಿತು ಸಂಬಂಧಿಸಿದ ದಾಖಲೆಗಳನ್ನು ಆನ್ಲೈನ್ ಮೂಲಕ ಸಲ್ಲಿಸಿ ನಿಗದಿಪಡಿಸಿದ ದಿನದಂದು ಕಚೇರಿಗೆ ಬಂದು ಭಾವಚಿತ್ರ ಹೆಬ್ಬಟ್ಟಿನ ಗುರುತು ನೀಡಿದ ನಂತರ ನೋಂದಣಿ ಮಾಡಲಾಗುವುದು. 10 ನಿಮಿಷದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.
ನಾಗರೀಕರು ನೋಂದಣಿ ಕಚೇರಿಗೆ ಬರುವಾಗ ಮೊದಲು ಎಲ್ಲಾ ಡೇಟಾ ಮತ್ತು ದಾಖಲೆಗಳನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡಿ ಕಚೇರಿಗೆ ಸಲ್ಲಿಸಬೇಕು. ಇವುಗಳನ್ನು ಪರಿಶೀಲಿಸಿ ನಿಗದಿತ ಶುಲ್ಕ ಪಾವತಿಸಲು ತಿಳಿಸಲಾಗುತ್ತದೆ.
ನಾಗರಿಕರು ತಮ್ಮ ಅನುಕೂಲಕ್ಕೆ ಅನುಗುಣವಾಗಿ ನೋಂದಣಿ ಪ್ರಕ್ರಿಯೆ ದಿನಾಂಕ ಮತ್ತು ಸಮಯ ನಿಗದಿಪಡಿಸಬಹುದಾಗಿದೆ. ತಮ್ಮ ಭಾವಚಿತ್ರ ಹೆಬ್ಬೆರಳು ಗುರುತು ಸೆರೆಹಿಡಿಯುವ ಸಂದರ್ಭದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಡಿಜಿಟಲ್ ಸಹಿ ಮಾಡಿರುವ ದಸ್ತಾವೇಜನ್ನು ನಾಗರಿಕರ ಲಾಗಿನ್ ಗೆ ಮತ್ತು ಅವರ ಡಿಜಿ ಲಾಕರ್ ಖಾತೆಗೆ ಕಳುಹಿಸಲಾಗುವುದು. ದಸ್ತಾವೇಜಿನ ಮಾಹಿತಿಯನ್ನು ಸಂಬಂಧಿತ ಇಲಾಖೆಯ ಖಾತಾ ಬದಲಾವಣೆಗೆ ಕಳುಹಿಸಲಾಗುತ್ತದೆ ಎಂದರು.
ಈ ವೇಳೆ ಡಿ.ಆರ್ ಮಹಮ್ಮದ್ ಯೂಸುಫ್, ಸಂಯೋಜಕಿ ಶ್ರೀದೇವಿ,ಉಪನೋಂದಣಾಧಿಕಾರಿಗಳಾದ ಸತೀಶ್, ಡಾ. ಬಿ.ಆರ್ ಅನುಪಮಾ ಇದ್ದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…