ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕ ಮತ್ತು ಕಿಂಚಿತ್ತೂ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಕಾರ್ಯನಿರ್ಹಸುವ ಜನಸ್ನೇಹಿ ಸೇವೆ ನೀಡುವ ಉದ್ದೇಶದಿಂದ ಕಾವೇರಿ 2.0 ತಂತ್ರಾಂಶ ಅಭಿವೃದ್ದಿಪಡಿಸಲಾಗಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖಾ ಐಜಿಆರ್ ಡಾ.ಬಿ.ಆರ್.ಮಮತಾ ತಿಳಿಸಿದರು.
ನಗರದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ನೂತನ ತಂತ್ರಾಂಶ ಕಾವೇರಿ 2.0 ತಂತ್ರಜ್ಞಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇದರಿಂದ ನಕಲಿ ದಾಖಲೆ ನೀಡಿ ನೋಂದಣಿ ಪ್ರಕ್ರಿಯೆಗೆ ಕಡಿವಾಣ ಬೀಳಲಿದ್ದು, ಕಚೇರಿಗೆ ಬಂದು ದಿನವಿಡಿ ಕಾಯುವುದು ತಪ್ಪುತ್ತದೆ. ಮನೆಯಲ್ಲೇ ಕುಳಿತು ಸಂಬಂಧಿಸಿದ ದಾಖಲೆಗಳನ್ನು ಆನ್ಲೈನ್ ಮೂಲಕ ಸಲ್ಲಿಸಿ ನಿಗದಿಪಡಿಸಿದ ದಿನದಂದು ಕಚೇರಿಗೆ ಬಂದು ಭಾವಚಿತ್ರ ಹೆಬ್ಬಟ್ಟಿನ ಗುರುತು ನೀಡಿದ ನಂತರ ನೋಂದಣಿ ಮಾಡಲಾಗುವುದು. 10 ನಿಮಿಷದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.
ನಾಗರೀಕರು ನೋಂದಣಿ ಕಚೇರಿಗೆ ಬರುವಾಗ ಮೊದಲು ಎಲ್ಲಾ ಡೇಟಾ ಮತ್ತು ದಾಖಲೆಗಳನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡಿ ಕಚೇರಿಗೆ ಸಲ್ಲಿಸಬೇಕು. ಇವುಗಳನ್ನು ಪರಿಶೀಲಿಸಿ ನಿಗದಿತ ಶುಲ್ಕ ಪಾವತಿಸಲು ತಿಳಿಸಲಾಗುತ್ತದೆ.
ನಾಗರಿಕರು ತಮ್ಮ ಅನುಕೂಲಕ್ಕೆ ಅನುಗುಣವಾಗಿ ನೋಂದಣಿ ಪ್ರಕ್ರಿಯೆ ದಿನಾಂಕ ಮತ್ತು ಸಮಯ ನಿಗದಿಪಡಿಸಬಹುದಾಗಿದೆ. ತಮ್ಮ ಭಾವಚಿತ್ರ ಹೆಬ್ಬೆರಳು ಗುರುತು ಸೆರೆಹಿಡಿಯುವ ಸಂದರ್ಭದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಡಿಜಿಟಲ್ ಸಹಿ ಮಾಡಿರುವ ದಸ್ತಾವೇಜನ್ನು ನಾಗರಿಕರ ಲಾಗಿನ್ ಗೆ ಮತ್ತು ಅವರ ಡಿಜಿ ಲಾಕರ್ ಖಾತೆಗೆ ಕಳುಹಿಸಲಾಗುವುದು. ದಸ್ತಾವೇಜಿನ ಮಾಹಿತಿಯನ್ನು ಸಂಬಂಧಿತ ಇಲಾಖೆಯ ಖಾತಾ ಬದಲಾವಣೆಗೆ ಕಳುಹಿಸಲಾಗುತ್ತದೆ ಎಂದರು.
ಈ ವೇಳೆ ಡಿ.ಆರ್ ಮಹಮ್ಮದ್ ಯೂಸುಫ್, ಸಂಯೋಜಕಿ ಶ್ರೀದೇವಿ,ಉಪನೋಂದಣಾಧಿಕಾರಿಗಳಾದ ಸತೀಶ್, ಡಾ. ಬಿ.ಆರ್ ಅನುಪಮಾ ಇದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…