ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕ ಮತ್ತು ಕಿಂಚಿತ್ತೂ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಕಾರ್ಯನಿರ್ಹಸುವ ಜನಸ್ನೇಹಿ ಸೇವೆ ನೀಡುವ ಉದ್ದೇಶದಿಂದ ಕಾವೇರಿ 2.0 ತಂತ್ರಾಂಶ ಅಭಿವೃದ್ದಿಪಡಿಸಲಾಗಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖಾ ಐಜಿಆರ್ ಡಾ.ಬಿ.ಆರ್.ಮಮತಾ ತಿಳಿಸಿದರು.
ನಗರದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ನೂತನ ತಂತ್ರಾಂಶ ಕಾವೇರಿ 2.0 ತಂತ್ರಜ್ಞಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇದರಿಂದ ನಕಲಿ ದಾಖಲೆ ನೀಡಿ ನೋಂದಣಿ ಪ್ರಕ್ರಿಯೆಗೆ ಕಡಿವಾಣ ಬೀಳಲಿದ್ದು, ಕಚೇರಿಗೆ ಬಂದು ದಿನವಿಡಿ ಕಾಯುವುದು ತಪ್ಪುತ್ತದೆ. ಮನೆಯಲ್ಲೇ ಕುಳಿತು ಸಂಬಂಧಿಸಿದ ದಾಖಲೆಗಳನ್ನು ಆನ್ಲೈನ್ ಮೂಲಕ ಸಲ್ಲಿಸಿ ನಿಗದಿಪಡಿಸಿದ ದಿನದಂದು ಕಚೇರಿಗೆ ಬಂದು ಭಾವಚಿತ್ರ ಹೆಬ್ಬಟ್ಟಿನ ಗುರುತು ನೀಡಿದ ನಂತರ ನೋಂದಣಿ ಮಾಡಲಾಗುವುದು. 10 ನಿಮಿಷದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.
ನಾಗರೀಕರು ನೋಂದಣಿ ಕಚೇರಿಗೆ ಬರುವಾಗ ಮೊದಲು ಎಲ್ಲಾ ಡೇಟಾ ಮತ್ತು ದಾಖಲೆಗಳನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡಿ ಕಚೇರಿಗೆ ಸಲ್ಲಿಸಬೇಕು. ಇವುಗಳನ್ನು ಪರಿಶೀಲಿಸಿ ನಿಗದಿತ ಶುಲ್ಕ ಪಾವತಿಸಲು ತಿಳಿಸಲಾಗುತ್ತದೆ.
ನಾಗರಿಕರು ತಮ್ಮ ಅನುಕೂಲಕ್ಕೆ ಅನುಗುಣವಾಗಿ ನೋಂದಣಿ ಪ್ರಕ್ರಿಯೆ ದಿನಾಂಕ ಮತ್ತು ಸಮಯ ನಿಗದಿಪಡಿಸಬಹುದಾಗಿದೆ. ತಮ್ಮ ಭಾವಚಿತ್ರ ಹೆಬ್ಬೆರಳು ಗುರುತು ಸೆರೆಹಿಡಿಯುವ ಸಂದರ್ಭದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಡಿಜಿಟಲ್ ಸಹಿ ಮಾಡಿರುವ ದಸ್ತಾವೇಜನ್ನು ನಾಗರಿಕರ ಲಾಗಿನ್ ಗೆ ಮತ್ತು ಅವರ ಡಿಜಿ ಲಾಕರ್ ಖಾತೆಗೆ ಕಳುಹಿಸಲಾಗುವುದು. ದಸ್ತಾವೇಜಿನ ಮಾಹಿತಿಯನ್ನು ಸಂಬಂಧಿತ ಇಲಾಖೆಯ ಖಾತಾ ಬದಲಾವಣೆಗೆ ಕಳುಹಿಸಲಾಗುತ್ತದೆ ಎಂದರು.
ಈ ವೇಳೆ ಡಿ.ಆರ್ ಮಹಮ್ಮದ್ ಯೂಸುಫ್, ಸಂಯೋಜಕಿ ಶ್ರೀದೇವಿ,ಉಪನೋಂದಣಾಧಿಕಾರಿಗಳಾದ ಸತೀಶ್, ಡಾ. ಬಿ.ಆರ್ ಅನುಪಮಾ ಇದ್ದರು.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…