ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕ ಮತ್ತು ಕಿಂಚಿತ್ತೂ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಕಾರ್ಯನಿರ್ಹಸುವ ಜನಸ್ನೇಹಿ ಸೇವೆ ನೀಡುವ ಉದ್ದೇಶದಿಂದ ಕಾವೇರಿ 2.0 ತಂತ್ರಾಂಶ ಅಭಿವೃದ್ದಿಪಡಿಸಲಾಗಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖಾ ಐಜಿಆರ್ ಡಾ.ಬಿ.ಆರ್.ಮಮತಾ ತಿಳಿಸಿದರು.
ನಗರದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ನೂತನ ತಂತ್ರಾಂಶ ಕಾವೇರಿ 2.0 ತಂತ್ರಜ್ಞಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇದರಿಂದ ನಕಲಿ ದಾಖಲೆ ನೀಡಿ ನೋಂದಣಿ ಪ್ರಕ್ರಿಯೆಗೆ ಕಡಿವಾಣ ಬೀಳಲಿದ್ದು, ಕಚೇರಿಗೆ ಬಂದು ದಿನವಿಡಿ ಕಾಯುವುದು ತಪ್ಪುತ್ತದೆ. ಮನೆಯಲ್ಲೇ ಕುಳಿತು ಸಂಬಂಧಿಸಿದ ದಾಖಲೆಗಳನ್ನು ಆನ್ಲೈನ್ ಮೂಲಕ ಸಲ್ಲಿಸಿ ನಿಗದಿಪಡಿಸಿದ ದಿನದಂದು ಕಚೇರಿಗೆ ಬಂದು ಭಾವಚಿತ್ರ ಹೆಬ್ಬಟ್ಟಿನ ಗುರುತು ನೀಡಿದ ನಂತರ ನೋಂದಣಿ ಮಾಡಲಾಗುವುದು. 10 ನಿಮಿಷದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.
ನಾಗರೀಕರು ನೋಂದಣಿ ಕಚೇರಿಗೆ ಬರುವಾಗ ಮೊದಲು ಎಲ್ಲಾ ಡೇಟಾ ಮತ್ತು ದಾಖಲೆಗಳನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡಿ ಕಚೇರಿಗೆ ಸಲ್ಲಿಸಬೇಕು. ಇವುಗಳನ್ನು ಪರಿಶೀಲಿಸಿ ನಿಗದಿತ ಶುಲ್ಕ ಪಾವತಿಸಲು ತಿಳಿಸಲಾಗುತ್ತದೆ.
ನಾಗರಿಕರು ತಮ್ಮ ಅನುಕೂಲಕ್ಕೆ ಅನುಗುಣವಾಗಿ ನೋಂದಣಿ ಪ್ರಕ್ರಿಯೆ ದಿನಾಂಕ ಮತ್ತು ಸಮಯ ನಿಗದಿಪಡಿಸಬಹುದಾಗಿದೆ. ತಮ್ಮ ಭಾವಚಿತ್ರ ಹೆಬ್ಬೆರಳು ಗುರುತು ಸೆರೆಹಿಡಿಯುವ ಸಂದರ್ಭದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಡಿಜಿಟಲ್ ಸಹಿ ಮಾಡಿರುವ ದಸ್ತಾವೇಜನ್ನು ನಾಗರಿಕರ ಲಾಗಿನ್ ಗೆ ಮತ್ತು ಅವರ ಡಿಜಿ ಲಾಕರ್ ಖಾತೆಗೆ ಕಳುಹಿಸಲಾಗುವುದು. ದಸ್ತಾವೇಜಿನ ಮಾಹಿತಿಯನ್ನು ಸಂಬಂಧಿತ ಇಲಾಖೆಯ ಖಾತಾ ಬದಲಾವಣೆಗೆ ಕಳುಹಿಸಲಾಗುತ್ತದೆ ಎಂದರು.
ಈ ವೇಳೆ ಡಿ.ಆರ್ ಮಹಮ್ಮದ್ ಯೂಸುಫ್, ಸಂಯೋಜಕಿ ಶ್ರೀದೇವಿ,ಉಪನೋಂದಣಾಧಿಕಾರಿಗಳಾದ ಸತೀಶ್, ಡಾ. ಬಿ.ಆರ್ ಅನುಪಮಾ ಇದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…