ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕ ಮತ್ತು ಕಿಂಚಿತ್ತೂ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಕಾರ್ಯನಿರ್ಹಸುವ ಜನಸ್ನೇಹಿ ಸೇವೆ ನೀಡುವ ಉದ್ದೇಶದಿಂದ ಕಾವೇರಿ 2.0 ತಂತ್ರಾಂಶ ಅಭಿವೃದ್ದಿಪಡಿಸಲಾಗಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖಾ ಐಜಿಆರ್ ಡಾ.ಬಿ.ಆರ್.ಮಮತಾ ತಿಳಿಸಿದರು.
ನಗರದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ನೂತನ ತಂತ್ರಾಂಶ ಕಾವೇರಿ 2.0 ತಂತ್ರಜ್ಞಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇದರಿಂದ ನಕಲಿ ದಾಖಲೆ ನೀಡಿ ನೋಂದಣಿ ಪ್ರಕ್ರಿಯೆಗೆ ಕಡಿವಾಣ ಬೀಳಲಿದ್ದು, ಕಚೇರಿಗೆ ಬಂದು ದಿನವಿಡಿ ಕಾಯುವುದು ತಪ್ಪುತ್ತದೆ. ಮನೆಯಲ್ಲೇ ಕುಳಿತು ಸಂಬಂಧಿಸಿದ ದಾಖಲೆಗಳನ್ನು ಆನ್ಲೈನ್ ಮೂಲಕ ಸಲ್ಲಿಸಿ ನಿಗದಿಪಡಿಸಿದ ದಿನದಂದು ಕಚೇರಿಗೆ ಬಂದು ಭಾವಚಿತ್ರ ಹೆಬ್ಬಟ್ಟಿನ ಗುರುತು ನೀಡಿದ ನಂತರ ನೋಂದಣಿ ಮಾಡಲಾಗುವುದು. 10 ನಿಮಿಷದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.
ನಾಗರೀಕರು ನೋಂದಣಿ ಕಚೇರಿಗೆ ಬರುವಾಗ ಮೊದಲು ಎಲ್ಲಾ ಡೇಟಾ ಮತ್ತು ದಾಖಲೆಗಳನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡಿ ಕಚೇರಿಗೆ ಸಲ್ಲಿಸಬೇಕು. ಇವುಗಳನ್ನು ಪರಿಶೀಲಿಸಿ ನಿಗದಿತ ಶುಲ್ಕ ಪಾವತಿಸಲು ತಿಳಿಸಲಾಗುತ್ತದೆ.
ನಾಗರಿಕರು ತಮ್ಮ ಅನುಕೂಲಕ್ಕೆ ಅನುಗುಣವಾಗಿ ನೋಂದಣಿ ಪ್ರಕ್ರಿಯೆ ದಿನಾಂಕ ಮತ್ತು ಸಮಯ ನಿಗದಿಪಡಿಸಬಹುದಾಗಿದೆ. ತಮ್ಮ ಭಾವಚಿತ್ರ ಹೆಬ್ಬೆರಳು ಗುರುತು ಸೆರೆಹಿಡಿಯುವ ಸಂದರ್ಭದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಡಿಜಿಟಲ್ ಸಹಿ ಮಾಡಿರುವ ದಸ್ತಾವೇಜನ್ನು ನಾಗರಿಕರ ಲಾಗಿನ್ ಗೆ ಮತ್ತು ಅವರ ಡಿಜಿ ಲಾಕರ್ ಖಾತೆಗೆ ಕಳುಹಿಸಲಾಗುವುದು. ದಸ್ತಾವೇಜಿನ ಮಾಹಿತಿಯನ್ನು ಸಂಬಂಧಿತ ಇಲಾಖೆಯ ಖಾತಾ ಬದಲಾವಣೆಗೆ ಕಳುಹಿಸಲಾಗುತ್ತದೆ ಎಂದರು.
ಈ ವೇಳೆ ಡಿ.ಆರ್ ಮಹಮ್ಮದ್ ಯೂಸುಫ್, ಸಂಯೋಜಕಿ ಶ್ರೀದೇವಿ,ಉಪನೋಂದಣಾಧಿಕಾರಿಗಳಾದ ಸತೀಶ್, ಡಾ. ಬಿ.ಆರ್ ಅನುಪಮಾ ಇದ್ದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…