ಕಾವೇರಿ 2.0 ತಂತ್ರಾಂಶಕ್ಕೆ ಚಾಲನೆ; ದೊಡ್ಡಬಳ್ಳಾಪುರ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಲೋಕಾರ್ಪಣೆ

ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕ ಮತ್ತು ಕಿಂಚಿತ್ತೂ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಕಾರ್ಯನಿರ್ಹಸುವ ಜನಸ್ನೇಹಿ ಸೇವೆ ನೀಡುವ ಉದ್ದೇಶದಿಂದ ಕಾವೇರಿ 2.0 ತಂತ್ರಾಂಶ ಅಭಿವೃದ್ದಿಪಡಿಸಲಾಗಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖಾ ಐಜಿಆರ್ ಡಾ.ಬಿ.ಆರ್.ಮಮತಾ ತಿಳಿಸಿದರು.

ನಗರದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ನೂತನ ತಂತ್ರಾಂಶ ಕಾವೇರಿ 2.0 ತಂತ್ರಜ್ಞಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇದರಿಂದ ನಕಲಿ ದಾಖಲೆ ನೀಡಿ ನೋಂದಣಿ ಪ್ರಕ್ರಿಯೆಗೆ ಕಡಿವಾಣ ಬೀಳಲಿದ್ದು, ಕಚೇರಿಗೆ ಬಂದು ದಿನವಿಡಿ ಕಾಯುವುದು ತಪ್ಪುತ್ತದೆ. ಮನೆಯಲ್ಲೇ ಕುಳಿತು ಸಂಬಂಧಿಸಿದ ದಾಖಲೆಗಳನ್ನು ಆನ್ಲೈನ್ ಮೂಲಕ ಸಲ್ಲಿಸಿ ನಿಗದಿಪಡಿಸಿದ ದಿನದಂದು ಕಚೇರಿಗೆ ಬಂದು ಭಾವಚಿತ್ರ ಹೆಬ್ಬಟ್ಟಿನ ಗುರುತು ನೀಡಿದ ನಂತರ ನೋಂದಣಿ ಮಾಡಲಾಗುವುದು. 10 ನಿಮಿಷದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ನಾಗರೀಕರು ನೋಂದಣಿ ಕಚೇರಿಗೆ ಬರುವಾಗ ಮೊದಲು ಎಲ್ಲಾ ಡೇಟಾ ಮತ್ತು ದಾಖಲೆಗಳನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡಿ ಕಚೇರಿಗೆ ಸಲ್ಲಿಸಬೇಕು. ಇವುಗಳನ್ನು ಪರಿಶೀಲಿಸಿ ನಿಗದಿತ ಶುಲ್ಕ ಪಾವತಿಸಲು ತಿಳಿಸಲಾಗುತ್ತದೆ.

ನಾಗರಿಕರು ತಮ್ಮ ಅನುಕೂಲಕ್ಕೆ ಅನುಗುಣವಾಗಿ ನೋಂದಣಿ ಪ್ರಕ್ರಿಯೆ ದಿನಾಂಕ ಮತ್ತು ಸಮಯ ನಿಗದಿಪಡಿಸಬಹುದಾಗಿದೆ. ತಮ್ಮ ಭಾವಚಿತ್ರ ಹೆಬ್ಬೆರಳು ಗುರುತು ಸೆರೆಹಿಡಿಯುವ ಸಂದರ್ಭದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಡಿಜಿಟಲ್ ಸಹಿ ಮಾಡಿರುವ ದಸ್ತಾವೇಜನ್ನು ನಾಗರಿಕರ ಲಾಗಿನ್ ಗೆ ಮತ್ತು ಅವರ ಡಿಜಿ ಲಾಕರ್ ಖಾತೆಗೆ ಕಳುಹಿಸಲಾಗುವುದು. ದಸ್ತಾವೇಜಿನ ಮಾಹಿತಿಯನ್ನು ಸಂಬಂಧಿತ ಇಲಾಖೆಯ ಖಾತಾ ಬದಲಾವಣೆಗೆ ಕಳುಹಿಸಲಾಗುತ್ತದೆ ಎಂದರು.

ಈ ವೇಳೆ ಡಿ‌.ಆರ್ ಮಹಮ್ಮದ್ ಯೂಸುಫ್, ಸಂಯೋಜಕಿ ಶ್ರೀದೇವಿ,ಉಪನೋಂದಣಾಧಿಕಾರಿಗಳಾದ ಸತೀಶ್, ಡಾ. ಬಿ.ಆರ್ ಅನುಪಮಾ ಇದ್ದರು.

Ramesh Babu

Journalist

Recent Posts

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

3 minutes ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

11 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

15 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

16 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

19 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

1 day ago