ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸರಳೀಕೃತ ಮಾಡುವ ನಿಟ್ಟಿನಲ್ಲಿ 256 ಉಪನೋಂದಣಿ ಕಚೇರಿಗಳಲ್ಲಿ ಕಾವೇರಿ-2.0 ತಂತ್ರಾಂಶ ಯಶಸ್ವಿಯಾಗಿ ಅನುಷ್ಠಾನವಾಗಿದೆ. ಆದರೆ ಈ ತಂತ್ರಾಂಶದಿಂದ ಅನುಕೂಲಕ್ಕಿಂತ ಅನಾನುಕೂಲವೆ ಹೆಚ್ಚು ಎಂದು ತಾಲೂಕಿನ ಪತ್ರ ಬರಹಗಾರರು ದೂರಿದ್ದಾರೆ.
ಕಂದಾಯ ಇಲಾಖೆ ಜಾರಿಗೆ ತಂದಿರುವ ಕಾವೇರಿ-2.0 ತಂತ್ರಾಂಶ ಸಮರ್ಪಕವಾಗಿ ಕಾರ್ಯನಿರ್ವಹಿಸದೆ ಸಕಾಲಕ್ಕೆ ನೋಂದಣಿಯಾಗದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ, ಈ ತಂತ್ರಾಂಶ ಪತ್ರಬರಹಗಾರರು ಹಾಗೂ ಸಾರ್ವಜನಿಕರ ಸ್ನೇಹಿಯಾಗಿರದೇ ಕೇವಲ ಅಧಿಕಾರಿಗಳ ಸ್ನೇಹಿಯಾಗಿದೆ ಎಂದು ತಾಲ್ಲೂಕು ದಸ್ತಾವೇಜು ಪತ್ರ ಬರಹಗಾರರ ಸಂಘದ ಅಧ್ಯಕ್ಷ ಕೆ.ಬಿ.ಹನುಮಂತಯ್ಯ ಆರೋಪಿಸಿದರು.
ಕೆ.ಬಿ.ನಾಗರಾಜ ಮಾತನಾಡಿ, ಕಾವೇರಿ-1 ತಂತ್ರಾಂಶ ಇದ್ದಾಗ ಚಲನ್ ಮೂಲಕ ಬ್ಯಾಂಕಿಗೆ ಹಣ ಕಟ್ಟಿ ಅದನ್ನು ತಂದು ನೋಂದಣಿ ಕಚೇರಿಗೆ ಕೊಡುತ್ತಿದ್ದೆವು, ಒಂದು ವೇಳೆ ಕ್ರಯ ನೋಂದಣಿಯಾಗದಿದ್ದರೆ ಅದನ್ನು ಅದೇ ಇನ್ನೊಬ್ಬ ಕ್ರಯದಾರರಿಗೆ ನೀಡಿ ಅವರ ಹಣ ಹಿಂದಿರುಗಿಸುತ್ತಿದ್ದೆವು, ಈಗ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿ ಮಾಡಬೇಕು, ಒಂದು ಸ್ವತ್ತಿಗೆ ಹಣ ಪಾವತಿ ಮಾಡಿದ ನಂತರ ಒಂದು ವರ್ಷವಾದರೂ ಅದೇ ಸ್ವತ್ತಿನ ನೋಂದಣಿಗೆ ಬಳಸಬೇಕು, ಬೇರೆ ಸ್ವತ್ತಿಗೆ ವರ್ಗಾಯಿಸುವಂತಿಲ್ಲ. ಇದರಿಂದಾಗಿ ಸ್ವತ್ತು ಖರೀದಿದಾರರಿಗೆ ಸಮಸ್ಯೆಯಾಗುತ್ತಿದೆ. ಖಜಾನೆಗೆ ಹಣ ಪಾವತಿ ಮಾಡುವುದನ್ನು ಮೊದಲಿನಂತೆ ಚಲನ್ ಮುಖಾಂತರ ಪಾವತಿಸಲು ಸರ್ಕಾರ ಅನುವು ಮಾಡಿಕೊಡಬೇಕು ಎಂದರು.
ಪತ್ರ ಬರಹಗಾರ ಬಿ.ಸಿ. ಗೋಪಾಲಕೃಷ್ಣ ಅವರು ಮಾತನಾಡಿ, ಒಂದು ವಾರದ ಹಿಂದೆ ಸ್ವತ್ತು ಖರೀದಿಗಾಗಿ ಗ್ರಾಹಕರಿಂದ 65 ಸಾವಿರ ಹಣ ಆನ್ಲೈನ್ ಪೇಮೆಂಟ್ ಮಾಡಿದ್ದೆವು ಆದರೆ ನೋಂದಣಿ ಕಚೇರಿಯಲ್ಲಿ ಪರಿಶೀಲನೆ ಮಾಡಿದಾಗ ಹಣ ಜಮಜೆಯಾಗಿಲ್ಲ ಎಂದು ಬಂದಿದೆ. ಇದರಿಂದ ಗ್ರಾಹಕರ ಹಣ ನಾನೇ ಭರಿಸುವಂತಾಯಿತು, ಇಂದು ನನಗೆ ಹಣ ವಾಪಸು ಬಂದಿದೆ.
ಮತ್ತೊಂದು ಪ್ರಕರಣದಲ್ಲಿ ಶಶಿಧರ್ ಎಂಬುವವರ ಬಳಿ ನಂಜಾರೆಡ್ಡಿ ಅವರು ಒಂದು ಸ್ವತ್ತು ಖರೀದಿ ಮಾಡಿದ್ದರು, ನೋಂದಣಿ ಪತ್ರ ಮತ್ತು ಇಸಿ ( ರುಣಭಾರ) ಯಲ್ಲಿ ಸರಿಯಾಗಿದೆ ಆದರೆ ಚೆಕ್ ಲಿಸ್ಟ್ ಮಾತ್ರ ಕ್ರಯದಾರರ ಹೆಸರು ಸರಿ ಇದ್ದು, ಮಾರಾಟಗಾರರು ಪುಷ್ಪರಾಣಿ ಎಂದು ಬಂದಿದೆ, ಕ್ರಯದಾರರು ಭಯಗೊಂಡು ಇಂತಹ ತಪ್ಪಗಳು ಯಾಕಾಗಿ ಮಾಡುತ್ತೀರಿ ಎಂದು ಪ್ರಶ್ನೆ ಮಾಡುತ್ತಿದ್ದಾರೆ ಎಂದು ದೂರಿದರು.
ನೋಂದಣಿ ಮತ್ತು ಮುದ್ರಾಂಕ ಇಲಾಖಾ ಕಚೇರಿಯನ್ನು ಜಿಲ್ಲಾಡಳಿತ ಭವನಕ್ಕೆ ಸ್ಥಳಾಂತರಿಸಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೋಂದಣಿ ಮತ್ತು ಮುದ್ರಾಂಕ ಇಲಾಖಾ ಕಚೇರಿ ಜಿಲ್ಲಾಡಳಿತ ಭವನಕ್ಕೆ ಸ್ಥಳಾಂತರ ಮಾಡುವಂತೆ ಹಲವು ಬಾರಿ ಅರ್ಜಿ, ಮನವಿ ಮಾಡಿದರು ಸ್ಥಳಾಂತರ ಮಾಡದೇ ನಿರ್ಲಕ್ಷ್ಯ ವಹಿಸುತ್ತಿರುವ ಸಂಬಂಧಿಸಿದ ಇಲಾಖೆ.
ಕೂಡಲೇ ನೋಂದಣಿ ಮತ್ತು ಮುದ್ರಾಂಕ ಇಲಾಖಾ ಕಚೇರಿ ಜಿಲ್ಲಾಡಳಿತ ಭವನಕ್ಕೆ ಸ್ಥಳಾಂತರ ಮಾಡಿ ಸಾರ್ವಜನಿಕರು ಬೆಂಗಳೂರಿಗೆ ಅಲೆಯುವ ಪರಿಸ್ಥಿತಿ ತಪ್ಪಿಸಬೇಕು ಎಂದು ಪತ್ರಬರಹಗಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಎಸ್.ಜಯಣ್ಣ, ಕಾರ್ಯದರ್ಶಿ ಎನ್.ತಿರುಮಲೇಶ್, ಸಹ ಕಾರ್ಯದರ್ಶಿ ಆರ್.ಸೌಮ್ಯಾ, ಖಜಾಂಚಿ ಕೆಪಿ ಶ್ರೀನಿವಾಸ್, ಪತ್ರ ಬರಹಗಾರ ನಾಗೇಶ್ ಮುಂತಾದವರು ಉಪಸ್ಥಿತರಿದ್ದರು.
2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…
ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…
ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…
ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…