ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸರಳೀಕೃತ ಮಾಡುವ ನಿಟ್ಟಿನಲ್ಲಿ 256 ಉಪನೋಂದಣಿ ಕಚೇರಿಗಳಲ್ಲಿ ಕಾವೇರಿ-2.0 ತಂತ್ರಾಂಶ ಯಶಸ್ವಿಯಾಗಿ ಅನುಷ್ಠಾನವಾಗಿದೆ. ಆದರೆ ಈ ತಂತ್ರಾಂಶದಿಂದ ಅನುಕೂಲಕ್ಕಿಂತ ಅನಾನುಕೂಲವೆ ಹೆಚ್ಚು ಎಂದು ತಾಲೂಕಿನ ಪತ್ರ ಬರಹಗಾರರು ದೂರಿದ್ದಾರೆ.
ಕಂದಾಯ ಇಲಾಖೆ ಜಾರಿಗೆ ತಂದಿರುವ ಕಾವೇರಿ-2.0 ತಂತ್ರಾಂಶ ಸಮರ್ಪಕವಾಗಿ ಕಾರ್ಯನಿರ್ವಹಿಸದೆ ಸಕಾಲಕ್ಕೆ ನೋಂದಣಿಯಾಗದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ, ಈ ತಂತ್ರಾಂಶ ಪತ್ರಬರಹಗಾರರು ಹಾಗೂ ಸಾರ್ವಜನಿಕರ ಸ್ನೇಹಿಯಾಗಿರದೇ ಕೇವಲ ಅಧಿಕಾರಿಗಳ ಸ್ನೇಹಿಯಾಗಿದೆ ಎಂದು ತಾಲ್ಲೂಕು ದಸ್ತಾವೇಜು ಪತ್ರ ಬರಹಗಾರರ ಸಂಘದ ಅಧ್ಯಕ್ಷ ಕೆ.ಬಿ.ಹನುಮಂತಯ್ಯ ಆರೋಪಿಸಿದರು.
ಕೆ.ಬಿ.ನಾಗರಾಜ ಮಾತನಾಡಿ, ಕಾವೇರಿ-1 ತಂತ್ರಾಂಶ ಇದ್ದಾಗ ಚಲನ್ ಮೂಲಕ ಬ್ಯಾಂಕಿಗೆ ಹಣ ಕಟ್ಟಿ ಅದನ್ನು ತಂದು ನೋಂದಣಿ ಕಚೇರಿಗೆ ಕೊಡುತ್ತಿದ್ದೆವು, ಒಂದು ವೇಳೆ ಕ್ರಯ ನೋಂದಣಿಯಾಗದಿದ್ದರೆ ಅದನ್ನು ಅದೇ ಇನ್ನೊಬ್ಬ ಕ್ರಯದಾರರಿಗೆ ನೀಡಿ ಅವರ ಹಣ ಹಿಂದಿರುಗಿಸುತ್ತಿದ್ದೆವು, ಈಗ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿ ಮಾಡಬೇಕು, ಒಂದು ಸ್ವತ್ತಿಗೆ ಹಣ ಪಾವತಿ ಮಾಡಿದ ನಂತರ ಒಂದು ವರ್ಷವಾದರೂ ಅದೇ ಸ್ವತ್ತಿನ ನೋಂದಣಿಗೆ ಬಳಸಬೇಕು, ಬೇರೆ ಸ್ವತ್ತಿಗೆ ವರ್ಗಾಯಿಸುವಂತಿಲ್ಲ. ಇದರಿಂದಾಗಿ ಸ್ವತ್ತು ಖರೀದಿದಾರರಿಗೆ ಸಮಸ್ಯೆಯಾಗುತ್ತಿದೆ. ಖಜಾನೆಗೆ ಹಣ ಪಾವತಿ ಮಾಡುವುದನ್ನು ಮೊದಲಿನಂತೆ ಚಲನ್ ಮುಖಾಂತರ ಪಾವತಿಸಲು ಸರ್ಕಾರ ಅನುವು ಮಾಡಿಕೊಡಬೇಕು ಎಂದರು.
ಪತ್ರ ಬರಹಗಾರ ಬಿ.ಸಿ. ಗೋಪಾಲಕೃಷ್ಣ ಅವರು ಮಾತನಾಡಿ, ಒಂದು ವಾರದ ಹಿಂದೆ ಸ್ವತ್ತು ಖರೀದಿಗಾಗಿ ಗ್ರಾಹಕರಿಂದ 65 ಸಾವಿರ ಹಣ ಆನ್ಲೈನ್ ಪೇಮೆಂಟ್ ಮಾಡಿದ್ದೆವು ಆದರೆ ನೋಂದಣಿ ಕಚೇರಿಯಲ್ಲಿ ಪರಿಶೀಲನೆ ಮಾಡಿದಾಗ ಹಣ ಜಮಜೆಯಾಗಿಲ್ಲ ಎಂದು ಬಂದಿದೆ. ಇದರಿಂದ ಗ್ರಾಹಕರ ಹಣ ನಾನೇ ಭರಿಸುವಂತಾಯಿತು, ಇಂದು ನನಗೆ ಹಣ ವಾಪಸು ಬಂದಿದೆ.
ಮತ್ತೊಂದು ಪ್ರಕರಣದಲ್ಲಿ ಶಶಿಧರ್ ಎಂಬುವವರ ಬಳಿ ನಂಜಾರೆಡ್ಡಿ ಅವರು ಒಂದು ಸ್ವತ್ತು ಖರೀದಿ ಮಾಡಿದ್ದರು, ನೋಂದಣಿ ಪತ್ರ ಮತ್ತು ಇಸಿ ( ರುಣಭಾರ) ಯಲ್ಲಿ ಸರಿಯಾಗಿದೆ ಆದರೆ ಚೆಕ್ ಲಿಸ್ಟ್ ಮಾತ್ರ ಕ್ರಯದಾರರ ಹೆಸರು ಸರಿ ಇದ್ದು, ಮಾರಾಟಗಾರರು ಪುಷ್ಪರಾಣಿ ಎಂದು ಬಂದಿದೆ, ಕ್ರಯದಾರರು ಭಯಗೊಂಡು ಇಂತಹ ತಪ್ಪಗಳು ಯಾಕಾಗಿ ಮಾಡುತ್ತೀರಿ ಎಂದು ಪ್ರಶ್ನೆ ಮಾಡುತ್ತಿದ್ದಾರೆ ಎಂದು ದೂರಿದರು.
ನೋಂದಣಿ ಮತ್ತು ಮುದ್ರಾಂಕ ಇಲಾಖಾ ಕಚೇರಿಯನ್ನು ಜಿಲ್ಲಾಡಳಿತ ಭವನಕ್ಕೆ ಸ್ಥಳಾಂತರಿಸಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೋಂದಣಿ ಮತ್ತು ಮುದ್ರಾಂಕ ಇಲಾಖಾ ಕಚೇರಿ ಜಿಲ್ಲಾಡಳಿತ ಭವನಕ್ಕೆ ಸ್ಥಳಾಂತರ ಮಾಡುವಂತೆ ಹಲವು ಬಾರಿ ಅರ್ಜಿ, ಮನವಿ ಮಾಡಿದರು ಸ್ಥಳಾಂತರ ಮಾಡದೇ ನಿರ್ಲಕ್ಷ್ಯ ವಹಿಸುತ್ತಿರುವ ಸಂಬಂಧಿಸಿದ ಇಲಾಖೆ.
ಕೂಡಲೇ ನೋಂದಣಿ ಮತ್ತು ಮುದ್ರಾಂಕ ಇಲಾಖಾ ಕಚೇರಿ ಜಿಲ್ಲಾಡಳಿತ ಭವನಕ್ಕೆ ಸ್ಥಳಾಂತರ ಮಾಡಿ ಸಾರ್ವಜನಿಕರು ಬೆಂಗಳೂರಿಗೆ ಅಲೆಯುವ ಪರಿಸ್ಥಿತಿ ತಪ್ಪಿಸಬೇಕು ಎಂದು ಪತ್ರಬರಹಗಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಎಸ್.ಜಯಣ್ಣ, ಕಾರ್ಯದರ್ಶಿ ಎನ್.ತಿರುಮಲೇಶ್, ಸಹ ಕಾರ್ಯದರ್ಶಿ ಆರ್.ಸೌಮ್ಯಾ, ಖಜಾಂಚಿ ಕೆಪಿ ಶ್ರೀನಿವಾಸ್, ಪತ್ರ ಬರಹಗಾರ ನಾಗೇಶ್ ಮುಂತಾದವರು ಉಪಸ್ಥಿತರಿದ್ದರು.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…