ಕಾವೇರಿ 2.O ತಂತ್ರಾಂಶ ಪತ್ರಬರಹಗಾರ ಹಾಗೂ ಜನಸ್ನೇಹಿಯಾಗಿರದೇ ಅಧಿಕಾರಿ ಸ್ನೇಹಿಯಾಗಿದೆ-ಪತ್ರ ಬರಹಗಾರ ಹನುಮಂತಯ್ಯ

ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸರಳೀಕೃತ ಮಾಡುವ ನಿಟ್ಟಿನಲ್ಲಿ 256 ಉಪನೋಂದಣಿ ಕಚೇರಿಗಳಲ್ಲಿ ಕಾವೇರಿ-2.0 ತಂತ್ರಾಂಶ ಯಶಸ್ವಿಯಾಗಿ ಅನುಷ್ಠಾನವಾಗಿದೆ. ಆದರೆ ಈ ತಂತ್ರಾಂಶದಿಂದ ಅನುಕೂಲಕ್ಕಿಂತ ಅನಾನುಕೂಲವೆ ಹೆಚ್ಚು ಎಂದು ತಾಲೂಕಿನ ಪತ್ರ ಬರಹಗಾರರು ದೂರಿದ್ದಾರೆ.

ಕಂದಾಯ ಇಲಾಖೆ ಜಾರಿಗೆ ತಂದಿರುವ ಕಾವೇರಿ-2.0 ತಂತ್ರಾಂಶ ಸಮರ್ಪಕವಾಗಿ ಕಾರ್ಯನಿರ್ವಹಿಸದೆ ಸಕಾಲಕ್ಕೆ ನೋಂದಣಿಯಾಗದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ, ಈ ತಂತ್ರಾಂಶ ಪತ್ರಬರಹಗಾರರು ಹಾಗೂ ಸಾರ್ವಜನಿಕರ ಸ್ನೇಹಿಯಾಗಿರದೇ ಕೇವಲ ಅಧಿಕಾರಿಗಳ ಸ್ನೇಹಿಯಾಗಿದೆ ಎಂದು ತಾಲ್ಲೂಕು ದಸ್ತಾವೇಜು ಪತ್ರ ಬರಹಗಾರರ ಸಂಘದ ಅಧ್ಯಕ್ಷ ಕೆ.ಬಿ.ಹನುಮಂತಯ್ಯ ಆರೋಪಿಸಿದರು.

ಕಾವೇರಿ 1‌ ತಂತ್ರಾಂಶದಿಂದ 2.Oಗೆ ಮೇಲ್ದರ್ಜೆಗೇರಿಸಿದ ಕಾರಣ ಸರ್ವರ್‌ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಮತ್ತೊಂದೆಡೆ ಆನ್‌ಲೈನ್‌ ಪೇಮೆಂಟ್‌ ಮಾಡಿದಾಗ ಬ್ಯಾಂಕ್‌ ಖಾತೆಯಿಂದ ಮೊತ್ತ ಕಡಿತವಾದರೂ ಖಜಾನೆಗೆ ತಲುಪಿರುವ ಮಾಹಿತಿ ಸಬ್‌ ರಿಜಿಸ್ಟಾರ್‌ಗೆ ಸಿಗುತ್ತಿಲ್ಲ. ಎಲ್ಲರ ಬಳಿ ಡೆಬಿಟ್, ಕ್ರೆಡಿಟ್, ನೆಟ್ ಬ್ಯಾಂಕಿಂಗ್ ಸೌಲಭ್ಯ ಇರುವುದಿಲ್ಲ, ಆದಾಗ್ಯೂ ಉಳ್ಳವರ ಬಳಿ ಕಾಡಿ ಬೇಡಿ ಆನ್ ಲೈನ್ ಪೇಮೆಂಟ್ ಮಾಡಿಸಲಾಗುತ್ತದೆ. ಆದರೆ ಸರ್ವರ್ ಸಮಸ್ಯೆಯಿಂದ ಪದೇಪದೆ ಶುಲ್ಕ ಪಾವತಿಸುವಂತೆ ಆನ್‌ಲೈನ್‌ನಲ್ಲಿ ತೋರಿಸುತ್ತಿದೆ. ಇದರಿಂದ ಸಾರ್ವಜನಿಕರು ನೋಂದಣೆ ಕಚೇರಿ ಹಾಗೂ ಸೈಬರ್‌ ಸೆಂಟರ್‌ಗಳಿಗೆ ಅಲೆದಾಡುವಂತಾಗಿದೆ ಎಂದರು.

ಸರಕಾರ ಕೂಡಲೇ ತಂತ್ರಾಂಶದಲ್ಲಿರುವ ದೋಷಗಳ ಬಗ್ಗೆ ಗಮನವನ್ನು ಹರಿಸಿ ಸಮಸ್ಯೆಯನ್ನು ಬಗೆಹರಿಸಬೇಕಿದೆ ಎಂದು ಮನವಿ ಮಾಡಿದರು.

ಕೆ.ಬಿ.ನಾಗರಾಜ ಮಾತನಾಡಿ, ಕಾವೇರಿ-1 ತಂತ್ರಾಂಶ ಇದ್ದಾಗ ಚಲನ್ ಮೂಲಕ ಬ್ಯಾಂಕಿಗೆ ಹಣ ಕಟ್ಟಿ ಅದನ್ನು ತಂದು ನೋಂದಣಿ ಕಚೇರಿಗೆ ಕೊಡುತ್ತಿದ್ದೆವು, ಒಂದು ವೇಳೆ ಕ್ರಯ ನೋಂದಣಿಯಾಗದಿದ್ದರೆ ಅದನ್ನು ಅದೇ ಇನ್ನೊಬ್ಬ ಕ್ರಯದಾರರಿಗೆ ನೀಡಿ ಅವರ ಹಣ ಹಿಂದಿರುಗಿಸುತ್ತಿದ್ದೆವು, ಈಗ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿ ಮಾಡಬೇಕು, ಒಂದು ಸ್ವತ್ತಿಗೆ ಹಣ ಪಾವತಿ ಮಾಡಿದ ನಂತರ ಒಂದು ವರ್ಷವಾದರೂ ಅದೇ ಸ್ವತ್ತಿನ ನೋಂದಣಿಗೆ ಬಳಸಬೇಕು, ಬೇರೆ ಸ್ವತ್ತಿಗೆ ವರ್ಗಾಯಿಸುವಂತಿಲ್ಲ. ಇದರಿಂದಾಗಿ ಸ್ವತ್ತು ಖರೀದಿದಾರರಿಗೆ ಸಮಸ್ಯೆಯಾಗುತ್ತಿದೆ. ಖಜಾನೆಗೆ ಹಣ ಪಾವತಿ ಮಾಡುವುದನ್ನು ಮೊದಲಿನಂತೆ ಚಲನ್ ಮುಖಾಂತರ ಪಾವತಿಸಲು ಸರ್ಕಾರ ಅನುವು ಮಾಡಿಕೊಡಬೇಕು ಎಂದರು.

ಪತ್ರ ಬರಹಗಾರ ಬಿ.ಸಿ. ಗೋಪಾಲಕೃಷ್ಣ ಅವರು ಮಾತನಾಡಿ, ಒಂದು ವಾರದ ಹಿಂದೆ ಸ್ವತ್ತು ಖರೀದಿಗಾಗಿ ಗ್ರಾಹಕರಿಂದ 65 ಸಾವಿರ ಹಣ ಆನ್‌ಲೈನ್ ಪೇಮೆಂಟ್ ಮಾಡಿದ್ದೆವು ಆದರೆ ನೋಂದಣಿ ಕಚೇರಿಯಲ್ಲಿ ಪರಿಶೀಲನೆ ಮಾಡಿದಾಗ ಹಣ ಜಮಜೆಯಾಗಿಲ್ಲ ಎಂದು ಬಂದಿದೆ. ಇದರಿಂದ ಗ್ರಾಹಕರ ಹಣ ನಾನೇ ಭರಿಸುವಂತಾಯಿತು, ಇಂದು ನನಗೆ ಹಣ ವಾಪಸು ಬಂದಿದೆ.

ಮತ್ತೊಂದು ಪ್ರಕರಣದಲ್ಲಿ ಶಶಿಧರ್ ಎಂಬುವವರ ಬಳಿ ನಂಜಾರೆಡ್ಡಿ ಅವರು ಒಂದು ಸ್ವತ್ತು ಖರೀದಿ ಮಾಡಿದ್ದರು, ನೋಂದಣಿ ಪತ್ರ ಮತ್ತು ಇಸಿ ( ರುಣಭಾರ) ಯಲ್ಲಿ ಸರಿಯಾಗಿದೆ ಆದರೆ ಚೆಕ್‌ ಲಿಸ್ಟ್ ಮಾತ್ರ ಕ್ರಯದಾರರ ಹೆಸರು ಸರಿ ಇದ್ದು, ಮಾರಾಟಗಾರರು ಪುಷ್ಪರಾಣಿ ಎಂದು ಬಂದಿದೆ, ಕ್ರಯದಾರರು ಭಯಗೊಂಡು ಇಂತಹ ತಪ್ಪಗಳು ಯಾಕಾಗಿ ಮಾಡುತ್ತೀರಿ ಎಂದು ಪ್ರಶ್ನೆ ಮಾಡುತ್ತಿದ್ದಾರೆ ಎಂದು ದೂರಿದರು.

ಉಪನೋಂದಣಾಧಿಕಾರಿ ಸತೀಶ್ ಅವರು ಪ್ರತಿಕ್ರಿಯಿಸಿ ಕಾವೇರಿ-2.0 ತಂತ್ರಾಂಶ ಸಂಪೂರ್ಣ ಜನಸ್ನೇಹಿಯಾಗಿದೆ, ಇದು ಆರಂಭಿಕ ಹಂತ ಸಣ್ಣಪುಟ್ಟ ಸಮಸ್ಯೆಗಳು ಉಂಟಾಗುತ್ತದೆ, ಆದಷ್ಟೂ ಬೇಗ ಸಮಸ್ಯೆಗಳು ಬಗೆ ಹರಿಯುತ್ತವೆ ಎಂದರು.

ನೋಂದಣಿ ಮತ್ತು ಮುದ್ರಾಂಕ ಇಲಾಖಾ ಕಚೇರಿಯನ್ನು ಜಿಲ್ಲಾಡಳಿತ ಭವನಕ್ಕೆ ಸ್ಥಳಾಂತರಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೋಂದಣಿ ಮತ್ತು ಮುದ್ರಾಂಕ ಇಲಾಖಾ ಕಚೇರಿ ಜಿಲ್ಲಾಡಳಿತ ಭವನಕ್ಕೆ ಸ್ಥಳಾಂತರ ಮಾಡುವಂತೆ ಹಲವು ಬಾರಿ ಅರ್ಜಿ, ಮನವಿ ಮಾಡಿದರು ಸ್ಥಳಾಂತರ ಮಾಡದೇ ನಿರ್ಲಕ್ಷ್ಯ ವಹಿಸುತ್ತಿರುವ ಸಂಬಂಧಿಸಿದ ಇಲಾಖೆ.

ಕೂಡಲೇ ನೋಂದಣಿ ಮತ್ತು ಮುದ್ರಾಂಕ ಇಲಾಖಾ ಕಚೇರಿ ಜಿಲ್ಲಾಡಳಿತ ಭವನಕ್ಕೆ ಸ್ಥಳಾಂತರ ಮಾಡಿ ಸಾರ್ವಜನಿಕರು ಬೆಂಗಳೂರಿಗೆ ಅಲೆಯುವ ಪರಿಸ್ಥಿತಿ ತಪ್ಪಿಸಬೇಕು ಎಂದು ಪತ್ರಬರಹಗಾರರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಎಸ್.ಜಯಣ್ಣ, ಕಾರ್ಯದರ್ಶಿ ಎನ್‌.ತಿರುಮಲೇಶ್, ಸಹ ಕಾರ್ಯದರ್ಶಿ ಆರ್.ಸೌಮ್ಯಾ, ಖಜಾಂಚಿ ಕೆಪಿ ಶ್ರೀನಿವಾಸ್, ಪತ್ರ ಬರಹಗಾರ ನಾಗೇಶ್ ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

8 minutes ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

14 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

16 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

16 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago