ಕಾಶ್ಮೀರಿ ಕೇಸರಿ ಹೂ ಬೆಳೆದ ದೊಡ್ಡಬಳ್ಳಾಪುರದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ(ಟೆಕ್ಕಿ) ಪವನ್

ದೊಡ್ಡಬಳ್ಳಾಪುರದ ಪವನ್ ಎಂಬ ಯುವ ಐಟಿ ಉದ್ಯೋಗಿ ಮನೆಯಲ್ಲೇ ಕಾಶ್ಮೀರಿ ಕೇಸರಿ ಹೂವು ಬೆಳೆದು ಎಲ್ಲರ ಗಮನ ಸೆಳೆದಿದ್ದಾರೆ.

ನೋಡೋಕೆ ಥೇಟ್ ಈರುಳ್ಳಿ ತರ ಕಾಣುವ ಕೇಸರಿ ಗಡ್ಡೆಗಳು ಜಮ್ಮು-ಕಾಶ್ಮೀರದ ಪ್ರಮುಖ ಬೆಳೆಯಾಗಿದೆ. ಹೌದು, ಈ ಗಡ್ಡೆಗಳು ಕಾಶ್ಮೀರದ ಪ್ರಮುಖ ಬೆಳೆಯಾದ ಕೇಸರಿ ಬೆಳೆಯಾಗಿದೆ. ದೊಡ್ಡಬಳ್ಳಾಪುರದ 24 ವರ್ಷದ ಯುವಕ ಪವನ್ ಧನಂಜಯ್ ಮಾರುತಿ ನಗರದಲ್ಲಿರುವ ತಮ್ಮ ಮನೆಯಲ್ಲಿಯೇ ಕಾಶ್ಮೀರದ ಹವಾಮಾನವನ್ನು ಸೃಷ್ಟಿ ಮಾಡಿ ಕೇಸರಿ ಬೆಳೆದು ಯಶಸ್ವಿಯಾಗಿದ್ದಾರೆ.

ಈ ಕೇಸರಿ ಗಡ್ಡೆ ವರ್ಷದಲ್ಲಿ ಒಮ್ಮೆ ಮಾತ್ರ ಕೇಸರಿ ಹೂ ಬಿಡುತ್ತೆ. ಅದೂ ಅಕ್ಟೋಬರ್ ಕೊನೆಯ ವಾರದಿಂದ ನವೆಂಬರ್ ಮೊದಲ ವಾರದವರೆಗೆ ಮಾತ್ರ. ಬಳಿಕ ವಾರದಲ್ಲಿ ಹೂ ಖಾಲಿಯಾದರೆ ಮತ್ತೆ ಕೇಸರಿ ಹೂ ಬರುವುದು ಮುಂದಿನ ವರ್ಷಕ್ಕೆ. ಏಪ್ರಿಲ್ ತಿಂಗಳಲ್ಲಿ ಕೇಸರಿ ಗಡ್ಡೆಯನ್ನು ನಾಟಿ ಮಾಡಲಾಗುತ್ತದೆ. ಅದು ಸೆಪ್ಟೆಂಬರ್ ತಿಂಗಳಲ್ಲಿ ಮೊಳಕೆ ಬಿಡಲು ಶುರು ಮಾಡಿ, ಅಕ್ಟೋಬರ್ – ನವೆಂಬರ್ ತಿಂಗಳಲ್ಲಿ ಹೂ ಬಿಡುತ್ತೆ. ಈ ಹೂ ಬಿಡುವ ಸಮಯ ಅಂದರೆ ಎರಡು ಮೂರು ತಿಂಗಳು ಮಾತ್ರ ಈ ಕೋಲ್ಡ್ ಸ್ಟೋರೇಜ್ ಅವಶ್ಯಕತೆ ಇರುತ್ತದೆ ಎಂದು ಪವನ್ ತಿಳಿಸಿದ್ದಾರೆ.

ಹೂ ಬಿಟ್ಟಾಗ ಹೂವಿನಿಂದ ಶಲಾಕೆಯ ರೂಪದಲ್ಲಿ ಕೇಸರಿ ಹೊರಗಡೆ ಬರುತ್ತೆ. ದಾಸವಾಳದ ಹೂವಿನ ಮಧ್ಯದಿಂದ ಬರುವ ಶಲಾಕೆಯಂತೆ ಇಲ್ಲಿಯೂ ಕೇಸರಿ ಶಲಾಕೆಗಳು ಹೂವಿನಿಂದ ಆಚೆ ಬರುತ್ತವೆ. ಅವುಗಳನ್ನು ಹೂವುಗಳಿಂದ ಹುಷಾರಾಗಿ ಬೇರ್ಪಡಿಸಿ ಸಂಗ್ರಹಿಸಲಾಗುತ್ತದೆ. ಹೀಗೆ ಸಂಗ್ರಹಿಸಲಾಗುವ ಕೇಸರಿಯನ್ನು ಕೋಲ್ಡ್ ಸ್ಟೋರೇಜ್ ನಲ್ಲಿ ಇಡುವ ಅವಶ್ಯಕತೆ ಇರುವುದಿಲ್ಲ ಎಂದು ಹೇಳಿದ್ದಾರೆ.

ಕಾಶ್ಮೀರದ ಭೂಮಿಯಲ್ಲಿ ಬೆಳೆಯುವ ಕೇಸರಿಗೆ ರಾಸಾಯನಿಕ ಗೊಬ್ಬರಗಳನ್ನು ಹಾಕಲಾಗುತ್ತದೆ. ಆದ್ರೆ ಇಲ್ಲಿ ಒಂದು ರೂಮಿನಲ್ಲಿ ಅದಕ್ಕೆ ಬೇಕಾದ ವಾತಾವರಣವನ್ನು ಸೃಷ್ಟಿ ಮಾಡಿ ಕಾಶ್ಮೀರ ಕೇಸರಿ ಬೆಳೆಯಲಾಗುತ್ತದೆ. ಇದಕ್ಕೆ ಯಾವುದೇ ರಾಸಾಯನಿಕ ಗೊಬ್ಬರ ಹಾಕಲಾಗುವುದಿಲ್ಲ‌. ನೈಸರ್ಗಿಕವಾಗಿ ಇರುತ್ತದೆ. 20 ಕೆಜಿ ಕೇಸರಿ ಗಡ್ಡೆಯಲ್ಲಿ 30 ಗ್ರಾಂ ಕೇಸರಿ ಬರುತ್ತೆ‌. ಒಂದು ಗ್ರಾಂ ಕೇಸರಿಗೆ ಒಂದು ಸಾವಿರ ರೂಪಾಯಿಗೂ ಹೆಚ್ಚು ಮಾರಾಟವಾಗುತ್ತದೆ ಎಂದು ತಿಳಿಸಿದ್ದಾರೆ.

ಐದರಿಂದ ಏಳು ವರ್ಷಗಳ ವರೆಗೆ ಕೇಸರಿ ಗಡ್ಡೆ ಹೂಗಳನ್ನು ಬಿಡುತ್ತೆ. ಇದರಿಂದ ರೈತರಿಗೆ ಲಾಭವೂ ಸಿಗುತ್ತೆ. ಅಲ್ಲದೆ ಕ್ಯಾನ್ಸರ್ ಗೆ ಔಷಧೀಯ ಗುಣಗಳನ್ನು ಹೊಂದಿರುವ ಅಂಶಗಳು ಈ ಕೇಸರಿಯಲ್ಲಿದ್ದು ಮಾರುಕಟ್ಟೆಯಲ್ಲಿ ಕೇಸರಿಗೆ ಹೆಚ್ಚಿನ ಡಿಮ್ಯಾಂಡ್ ಇದೆ ಎಂದು ಹೇಳಿದ್ದಾರೆ.

ಕೇಸರಿಯನ್ನು ಸದ್ಯ ಮಾರಾಟ ಮಾಡದೆ ಸ್ನೇಹಿತರಿಗೆ ಬಳಸಲು ನೀಡಿ ಅವರಿಂದ ಅಭಿಪ್ರಾಯ ಸಂಗ್ರಹಿಸುತ್ತಿದ್ದೇನೆ. ಗೆಡ್ಡೆಗಳನ್ನು ಫ್ರೀಜ್‌ನಲ್ಲಿ ಇಟ್ಟು ಕೇಸರಿ ಹೂವು ಬೆಳೆಸಬಹುದು ಎನ್ನುವುದು ಸುಳ್ಳು. ಅದಕ್ಕೆ ಕನಿಷ್ಠ ವಿಶಾಲ ಜಾಗ ಅಗತ್ಯವಿದ್ದು, ಕಾಶ್ಮೀರದಲ್ಲಿ ಕೇಸರಿ ಹೂವುಗಳನ್ನು ಬೆಳೆಯುವ ಪಾಂಪೋರ್ ಎನ್ನುವ ಪ್ರದೇಶದಲ್ಲಿ ಇರುವ 16 ಡಿಗ್ರಿ ಉಷ್ಣಾಂಶವನ್ನು ಕೊಠಡಿಯಲ್ಲಿ ಕಾಪಾಡಿಕೊಂಡಿದ್ದೇನೆ ಎಂದು ತಿಳಿಸಿದರು.

ಕೇಸರಿಯನ್ನು ಬೆಳೆಸುವ ವಿಧಾನ :

ಕೋಣೆಯಲ್ಲಿ ಇರಿಸಿರುವ ಉಷ್ಣಾಂಶ ನಿಯಂತ್ರಕವು ಗಾಳಿಯಲ್ಲಿ ತೇವಾಂಶದ ಮಟ್ಟವನ್ನು ಹೆಚ್ಚಿಸುತ್ತದೆ. ಹೂಬಿಡುವ ಸಮಯದಲ್ಲಿ ತಾಪಮಾನವು 6 ಡಿಗ್ರಿ ಸೆಲ್ಸಿಯಸ್‌ನಿಂದ 9 ಡಿಗ್ರಿ ಸೆಲ್ಸಿಯಸ್ ಮಿತಿಯಲ್ಲಿರಬೇಕು. ಇದರಿಂದ ಕೇಸರಿಯು ಉತ್ತಮವಾದ, ಪೋಷಕಾಂಶ-ಭರಿತ ಮಂಜಿನಿಂದ ಪೋಷಿಸಲ್ಪಡುತ್ತದೆ. ಕೇಸರಿ ಗಡ್ಡೆಗಳ ಸರಿಯಾದ ಬೆಳವಣಿಗೆಗೆ ವಾರಕ್ಕೊಮ್ಮೆ ನೀರುಣಿಸಬೇಕು.

ಮಾರುಕಟ್ಟೆ ಹೇಗೆ ?ಕಾಶ್ಮೀರದಲ್ಲಿ ಪ್ರತಿ ಗ್ರಾಂ ಕೇಸರಿಗೆ 900 ರೂ.ಗಳಿಂದ 1,500 ರೂ. ವರೆಗೆ ದರ ಇರುತ್ತದೆ. ಇದನ್ನು ಅಂಗಡಿಯವರು, ಬೇಕರಿಯವರು ಮತ್ತು ಅಡುಗೆಯವರು ಖರೀದಿ ಮಾಡುತ್ತಾರೆ.

ಕೇಸರಿಯಿಂದ ದೇಹಕ್ಕೆ ಶಕ್ತಿ : ಸಾಮಾನ್ಯವಾಗಿ ಕೇಸರಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳನ್ನು ತಯಾರಿಸಲು ಮತ್ತು ಬಾಣಂತಿಯರು ಸೇವಿಸುತ್ತಾರೆ. ಬಾಣಂತಿಯರು ಕೇಸರಿಯನ್ನು ಸೇವಿಸಿದರೆ ಮಗು ಬೆಳ್ಳಗೆ ಹುಟ್ಟುತ್ತದೆ ಎಂಬ ನಂಬಿಕೆ ಇದೆ. ಆದರೆ ಕೇಸರಿಯನ್ನು ಹಾಲಿಗೆ ಮಿಶ್ರಣ ಮಾಡಿ ಕುಡಿದರೆ ಆಯಾಸ ಹೋಗುತ್ತದೆ. ದೇಹಕ್ಕೆ ಶಕ್ತಿ ಬರುತ್ತದೆ ಎಂದು ಮಾಹಿತಿ ನೀಡಿದರು.

Ramesh Babu

Journalist

Recent Posts

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

4 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

6 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

9 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

9 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

16 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

17 hours ago