ಕಾಶ್ಮೀರಿ ಕೇಸರಿ ಹೂ ಬೆಳೆದ ದೊಡ್ಡಬಳ್ಳಾಪುರದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ(ಟೆಕ್ಕಿ) ಪವನ್

ದೊಡ್ಡಬಳ್ಳಾಪುರದ ಪವನ್ ಎಂಬ ಯುವ ಐಟಿ ಉದ್ಯೋಗಿ ಮನೆಯಲ್ಲೇ ಕಾಶ್ಮೀರಿ ಕೇಸರಿ ಹೂವು ಬೆಳೆದು ಎಲ್ಲರ ಗಮನ ಸೆಳೆದಿದ್ದಾರೆ.

ನೋಡೋಕೆ ಥೇಟ್ ಈರುಳ್ಳಿ ತರ ಕಾಣುವ ಕೇಸರಿ ಗಡ್ಡೆಗಳು ಜಮ್ಮು-ಕಾಶ್ಮೀರದ ಪ್ರಮುಖ ಬೆಳೆಯಾಗಿದೆ. ಹೌದು, ಈ ಗಡ್ಡೆಗಳು ಕಾಶ್ಮೀರದ ಪ್ರಮುಖ ಬೆಳೆಯಾದ ಕೇಸರಿ ಬೆಳೆಯಾಗಿದೆ. ದೊಡ್ಡಬಳ್ಳಾಪುರದ 24 ವರ್ಷದ ಯುವಕ ಪವನ್ ಧನಂಜಯ್ ಮಾರುತಿ ನಗರದಲ್ಲಿರುವ ತಮ್ಮ ಮನೆಯಲ್ಲಿಯೇ ಕಾಶ್ಮೀರದ ಹವಾಮಾನವನ್ನು ಸೃಷ್ಟಿ ಮಾಡಿ ಕೇಸರಿ ಬೆಳೆದು ಯಶಸ್ವಿಯಾಗಿದ್ದಾರೆ.

ಈ ಕೇಸರಿ ಗಡ್ಡೆ ವರ್ಷದಲ್ಲಿ ಒಮ್ಮೆ ಮಾತ್ರ ಕೇಸರಿ ಹೂ ಬಿಡುತ್ತೆ. ಅದೂ ಅಕ್ಟೋಬರ್ ಕೊನೆಯ ವಾರದಿಂದ ನವೆಂಬರ್ ಮೊದಲ ವಾರದವರೆಗೆ ಮಾತ್ರ. ಬಳಿಕ ವಾರದಲ್ಲಿ ಹೂ ಖಾಲಿಯಾದರೆ ಮತ್ತೆ ಕೇಸರಿ ಹೂ ಬರುವುದು ಮುಂದಿನ ವರ್ಷಕ್ಕೆ. ಏಪ್ರಿಲ್ ತಿಂಗಳಲ್ಲಿ ಕೇಸರಿ ಗಡ್ಡೆಯನ್ನು ನಾಟಿ ಮಾಡಲಾಗುತ್ತದೆ. ಅದು ಸೆಪ್ಟೆಂಬರ್ ತಿಂಗಳಲ್ಲಿ ಮೊಳಕೆ ಬಿಡಲು ಶುರು ಮಾಡಿ, ಅಕ್ಟೋಬರ್ – ನವೆಂಬರ್ ತಿಂಗಳಲ್ಲಿ ಹೂ ಬಿಡುತ್ತೆ. ಈ ಹೂ ಬಿಡುವ ಸಮಯ ಅಂದರೆ ಎರಡು ಮೂರು ತಿಂಗಳು ಮಾತ್ರ ಈ ಕೋಲ್ಡ್ ಸ್ಟೋರೇಜ್ ಅವಶ್ಯಕತೆ ಇರುತ್ತದೆ ಎಂದು ಪವನ್ ತಿಳಿಸಿದ್ದಾರೆ.

ಹೂ ಬಿಟ್ಟಾಗ ಹೂವಿನಿಂದ ಶಲಾಕೆಯ ರೂಪದಲ್ಲಿ ಕೇಸರಿ ಹೊರಗಡೆ ಬರುತ್ತೆ. ದಾಸವಾಳದ ಹೂವಿನ ಮಧ್ಯದಿಂದ ಬರುವ ಶಲಾಕೆಯಂತೆ ಇಲ್ಲಿಯೂ ಕೇಸರಿ ಶಲಾಕೆಗಳು ಹೂವಿನಿಂದ ಆಚೆ ಬರುತ್ತವೆ. ಅವುಗಳನ್ನು ಹೂವುಗಳಿಂದ ಹುಷಾರಾಗಿ ಬೇರ್ಪಡಿಸಿ ಸಂಗ್ರಹಿಸಲಾಗುತ್ತದೆ. ಹೀಗೆ ಸಂಗ್ರಹಿಸಲಾಗುವ ಕೇಸರಿಯನ್ನು ಕೋಲ್ಡ್ ಸ್ಟೋರೇಜ್ ನಲ್ಲಿ ಇಡುವ ಅವಶ್ಯಕತೆ ಇರುವುದಿಲ್ಲ ಎಂದು ಹೇಳಿದ್ದಾರೆ.

ಕಾಶ್ಮೀರದ ಭೂಮಿಯಲ್ಲಿ ಬೆಳೆಯುವ ಕೇಸರಿಗೆ ರಾಸಾಯನಿಕ ಗೊಬ್ಬರಗಳನ್ನು ಹಾಕಲಾಗುತ್ತದೆ. ಆದ್ರೆ ಇಲ್ಲಿ ಒಂದು ರೂಮಿನಲ್ಲಿ ಅದಕ್ಕೆ ಬೇಕಾದ ವಾತಾವರಣವನ್ನು ಸೃಷ್ಟಿ ಮಾಡಿ ಕಾಶ್ಮೀರ ಕೇಸರಿ ಬೆಳೆಯಲಾಗುತ್ತದೆ. ಇದಕ್ಕೆ ಯಾವುದೇ ರಾಸಾಯನಿಕ ಗೊಬ್ಬರ ಹಾಕಲಾಗುವುದಿಲ್ಲ‌. ನೈಸರ್ಗಿಕವಾಗಿ ಇರುತ್ತದೆ. 20 ಕೆಜಿ ಕೇಸರಿ ಗಡ್ಡೆಯಲ್ಲಿ 30 ಗ್ರಾಂ ಕೇಸರಿ ಬರುತ್ತೆ‌. ಒಂದು ಗ್ರಾಂ ಕೇಸರಿಗೆ ಒಂದು ಸಾವಿರ ರೂಪಾಯಿಗೂ ಹೆಚ್ಚು ಮಾರಾಟವಾಗುತ್ತದೆ ಎಂದು ತಿಳಿಸಿದ್ದಾರೆ.

ಐದರಿಂದ ಏಳು ವರ್ಷಗಳ ವರೆಗೆ ಕೇಸರಿ ಗಡ್ಡೆ ಹೂಗಳನ್ನು ಬಿಡುತ್ತೆ. ಇದರಿಂದ ರೈತರಿಗೆ ಲಾಭವೂ ಸಿಗುತ್ತೆ. ಅಲ್ಲದೆ ಕ್ಯಾನ್ಸರ್ ಗೆ ಔಷಧೀಯ ಗುಣಗಳನ್ನು ಹೊಂದಿರುವ ಅಂಶಗಳು ಈ ಕೇಸರಿಯಲ್ಲಿದ್ದು ಮಾರುಕಟ್ಟೆಯಲ್ಲಿ ಕೇಸರಿಗೆ ಹೆಚ್ಚಿನ ಡಿಮ್ಯಾಂಡ್ ಇದೆ ಎಂದು ಹೇಳಿದ್ದಾರೆ.

ಕೇಸರಿಯನ್ನು ಸದ್ಯ ಮಾರಾಟ ಮಾಡದೆ ಸ್ನೇಹಿತರಿಗೆ ಬಳಸಲು ನೀಡಿ ಅವರಿಂದ ಅಭಿಪ್ರಾಯ ಸಂಗ್ರಹಿಸುತ್ತಿದ್ದೇನೆ. ಗೆಡ್ಡೆಗಳನ್ನು ಫ್ರೀಜ್‌ನಲ್ಲಿ ಇಟ್ಟು ಕೇಸರಿ ಹೂವು ಬೆಳೆಸಬಹುದು ಎನ್ನುವುದು ಸುಳ್ಳು. ಅದಕ್ಕೆ ಕನಿಷ್ಠ ವಿಶಾಲ ಜಾಗ ಅಗತ್ಯವಿದ್ದು, ಕಾಶ್ಮೀರದಲ್ಲಿ ಕೇಸರಿ ಹೂವುಗಳನ್ನು ಬೆಳೆಯುವ ಪಾಂಪೋರ್ ಎನ್ನುವ ಪ್ರದೇಶದಲ್ಲಿ ಇರುವ 16 ಡಿಗ್ರಿ ಉಷ್ಣಾಂಶವನ್ನು ಕೊಠಡಿಯಲ್ಲಿ ಕಾಪಾಡಿಕೊಂಡಿದ್ದೇನೆ ಎಂದು ತಿಳಿಸಿದರು.

ಕೇಸರಿಯನ್ನು ಬೆಳೆಸುವ ವಿಧಾನ :

ಕೋಣೆಯಲ್ಲಿ ಇರಿಸಿರುವ ಉಷ್ಣಾಂಶ ನಿಯಂತ್ರಕವು ಗಾಳಿಯಲ್ಲಿ ತೇವಾಂಶದ ಮಟ್ಟವನ್ನು ಹೆಚ್ಚಿಸುತ್ತದೆ. ಹೂಬಿಡುವ ಸಮಯದಲ್ಲಿ ತಾಪಮಾನವು 6 ಡಿಗ್ರಿ ಸೆಲ್ಸಿಯಸ್‌ನಿಂದ 9 ಡಿಗ್ರಿ ಸೆಲ್ಸಿಯಸ್ ಮಿತಿಯಲ್ಲಿರಬೇಕು. ಇದರಿಂದ ಕೇಸರಿಯು ಉತ್ತಮವಾದ, ಪೋಷಕಾಂಶ-ಭರಿತ ಮಂಜಿನಿಂದ ಪೋಷಿಸಲ್ಪಡುತ್ತದೆ. ಕೇಸರಿ ಗಡ್ಡೆಗಳ ಸರಿಯಾದ ಬೆಳವಣಿಗೆಗೆ ವಾರಕ್ಕೊಮ್ಮೆ ನೀರುಣಿಸಬೇಕು.

ಮಾರುಕಟ್ಟೆ ಹೇಗೆ ?ಕಾಶ್ಮೀರದಲ್ಲಿ ಪ್ರತಿ ಗ್ರಾಂ ಕೇಸರಿಗೆ 900 ರೂ.ಗಳಿಂದ 1,500 ರೂ. ವರೆಗೆ ದರ ಇರುತ್ತದೆ. ಇದನ್ನು ಅಂಗಡಿಯವರು, ಬೇಕರಿಯವರು ಮತ್ತು ಅಡುಗೆಯವರು ಖರೀದಿ ಮಾಡುತ್ತಾರೆ.

ಕೇಸರಿಯಿಂದ ದೇಹಕ್ಕೆ ಶಕ್ತಿ : ಸಾಮಾನ್ಯವಾಗಿ ಕೇಸರಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳನ್ನು ತಯಾರಿಸಲು ಮತ್ತು ಬಾಣಂತಿಯರು ಸೇವಿಸುತ್ತಾರೆ. ಬಾಣಂತಿಯರು ಕೇಸರಿಯನ್ನು ಸೇವಿಸಿದರೆ ಮಗು ಬೆಳ್ಳಗೆ ಹುಟ್ಟುತ್ತದೆ ಎಂಬ ನಂಬಿಕೆ ಇದೆ. ಆದರೆ ಕೇಸರಿಯನ್ನು ಹಾಲಿಗೆ ಮಿಶ್ರಣ ಮಾಡಿ ಕುಡಿದರೆ ಆಯಾಸ ಹೋಗುತ್ತದೆ. ದೇಹಕ್ಕೆ ಶಕ್ತಿ ಬರುತ್ತದೆ ಎಂದು ಮಾಹಿತಿ ನೀಡಿದರು.

Ramesh Babu

Journalist

Recent Posts

ಶ್ರಾವಣ ಮಾಸದ ಕೊನೆಯ ಸೋಮವಾರ: ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಹೂವಿನ ಆರತಿ ಸೇವೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…

10 hours ago

ಅಗ್ನಿ ಅವಘಡದ ವೇಳೆ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ: ಯುವ ಆಪ್ತಮಿತ್ರ ತರಬೇತಿ ಶಿಬಿರದಲ್ಲಿ ರೋವರ್ಸ್–ರೇಂಜರ್ಸ್‌ಗೆ ಜಾಗೃತಿ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…

13 hours ago

ಘಾಟಿ ಸುಬ್ರಹ್ಮಣ್ಯ ತೇರಿನ ಬೀದಿಯಲ್ಲಿದ್ದ ಪೂಜಾ ಸಾಮಗ್ರಿ ಅಂಗಡಿಗಳ ತೆರವು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…

18 hours ago

ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು; ಪುಟಾಣಿ ಮಕ್ಕಳ ಪರದಾಟ: ನಗರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ: ರೋಗ ಹರಡುವ ಭೀತಿ

ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…

19 hours ago

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

2 days ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

2 days ago