ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ ದೊಡ್ಡಬಳ್ಳಾಪುರದ 95 ಮಂದಿ ಪ್ರವಾಸಿಗರು ಸುರಕ್ಷಿತ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಸುತ್ತಮುತ್ತಲಿನ ಹಳ್ಳಿಗಳಾದ ಹಾಡೋನಹಳ್ಳಿ, ಲಕ್ಷ್ಮೀದೇವಿಪುರ, ತಿರುಮಗೊಂಡನಹಳ್ಳಿ, ತಿಮ್ಮೋಜನಹಳ್ಳಿ, ತೂಬಗೆರೆ, ಹೀರೆಮುದ್ದೇನಹಳ್ಳಿ, ನೆಲಗುದಿಗೆ ಗ್ರಾಮಗಳಿಂದ 95 ಜನ 9 ದಿನಗಳ ಜಮ್ಮು ಕಾಶ್ಮೀರ ಪ್ರವಾಸ ಕೈಗೊಂಡಿದ್ದರು.

ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ 95 ಮಂದಿ ಪ್ರವಾಸಿಗರು ಸದ್ಯ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ಏ.19 ರಂದು ಬೆಳಗ್ಗೆ 21 ಜನರ ಒಂದು ತಂಡ ಅಮೃತಸರ ತಲುಪಿದರೆ, ವಿಮಾನ ಟಿಕೆಟ್ ಗೊಂದಲದ ಕಾರಣ 74 ಮಂದಿಯ ಮತ್ತೊಂದು ತಂಡ ದೇವನಹಳ್ಳಿ ಎಂ.ಆರ್. ಟ್ರಾವೆಲ್ ಏಜೆನ್ಸಿ ಮೂಲಕ ದೆಹಲಿಗೆ ತೆರಳಿ ಅಲ್ಲಿಂದ ಅಮೃತಸರದಲ್ಲಿ ಎಲ್ಲರೂ ಒಟ್ಟಾಗಿ ಸೇರಿದ್ದರು.

ಅಮೃತಸರದಲ್ಲಿ ಪ್ರೇಕ್ಷಣೀಯ ಸ್ಥಳಗಳನ್ನು ನೋಡಿಕೊಂಡು ಬಳಿಕ ಶ್ರೀನಗರಕ್ಕೆ ಪ್ರವಾಸ ತೆರಳಿದ್ದರು. ಇವರು ಉಳಿದುಕೊಳ್ಳಬೇಕಾದ ಹೋಟೆಲ್ ಉಗ್ರರ ದಾಳಿಗೆ ಒಳಗಾದ ಪಹಲ್ಗಾಮ್‌ನ ಬೈಸರನ್ ಸಮೀಪದಲ್ಲಿಯೇ ಎರಡು ದಿನಗಳ ಕಾಲ ಉಳಿದುಕೊಳ್ಳಲು ಕೊಠಡಿಗಳನ್ನು ಕಾಯ್ದಿರಿಸಿದ್ದರು. ಆದರೆ, ಆ ರಸ್ತೆಯಲ್ಲಿ ಬೆಟ್ಟ ಕುಸಿದು ಸಂಚಾರ ಸ್ಥಗಿತಗೊಂಡ ಕಾರಣ ಮಾರ್ಗ ಬದಲಿಸಿದ ಬೆಂಗಳೂರಿನ 15 ಜನ ಸೇರಿದಂತೆ 110 ಮಂದಿಯ ಪ್ರವಾಸಿಗರು, ಕಟ್ರಾ ವೈಷ್ಣವಿ ದೇವಿ ದರ್ಶನ ಮುಗಿಸಿ, ಕುನುಮೊನಾಲಿಗೆ ಹಿಂತಿರುಗಿದ್ದಾರೆ ಎಂದು ತಿಳಿದುಬಂದಿದೆ…

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

3 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

6 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

18 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

19 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

21 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

23 hours ago