ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ ದೊಡ್ಡಬಳ್ಳಾಪುರದ 95 ಮಂದಿ ಪ್ರವಾಸಿಗರು ಸುರಕ್ಷಿತ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಸುತ್ತಮುತ್ತಲಿನ ಹಳ್ಳಿಗಳಾದ ಹಾಡೋನಹಳ್ಳಿ, ಲಕ್ಷ್ಮೀದೇವಿಪುರ, ತಿರುಮಗೊಂಡನಹಳ್ಳಿ, ತಿಮ್ಮೋಜನಹಳ್ಳಿ, ತೂಬಗೆರೆ, ಹೀರೆಮುದ್ದೇನಹಳ್ಳಿ, ನೆಲಗುದಿಗೆ ಗ್ರಾಮಗಳಿಂದ 95 ಜನ 9 ದಿನಗಳ ಜಮ್ಮು ಕಾಶ್ಮೀರ ಪ್ರವಾಸ ಕೈಗೊಂಡಿದ್ದರು.

ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ 95 ಮಂದಿ ಪ್ರವಾಸಿಗರು ಸದ್ಯ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ಏ.19 ರಂದು ಬೆಳಗ್ಗೆ 21 ಜನರ ಒಂದು ತಂಡ ಅಮೃತಸರ ತಲುಪಿದರೆ, ವಿಮಾನ ಟಿಕೆಟ್ ಗೊಂದಲದ ಕಾರಣ 74 ಮಂದಿಯ ಮತ್ತೊಂದು ತಂಡ ದೇವನಹಳ್ಳಿ ಎಂ.ಆರ್. ಟ್ರಾವೆಲ್ ಏಜೆನ್ಸಿ ಮೂಲಕ ದೆಹಲಿಗೆ ತೆರಳಿ ಅಲ್ಲಿಂದ ಅಮೃತಸರದಲ್ಲಿ ಎಲ್ಲರೂ ಒಟ್ಟಾಗಿ ಸೇರಿದ್ದರು.

ಅಮೃತಸರದಲ್ಲಿ ಪ್ರೇಕ್ಷಣೀಯ ಸ್ಥಳಗಳನ್ನು ನೋಡಿಕೊಂಡು ಬಳಿಕ ಶ್ರೀನಗರಕ್ಕೆ ಪ್ರವಾಸ ತೆರಳಿದ್ದರು. ಇವರು ಉಳಿದುಕೊಳ್ಳಬೇಕಾದ ಹೋಟೆಲ್ ಉಗ್ರರ ದಾಳಿಗೆ ಒಳಗಾದ ಪಹಲ್ಗಾಮ್‌ನ ಬೈಸರನ್ ಸಮೀಪದಲ್ಲಿಯೇ ಎರಡು ದಿನಗಳ ಕಾಲ ಉಳಿದುಕೊಳ್ಳಲು ಕೊಠಡಿಗಳನ್ನು ಕಾಯ್ದಿರಿಸಿದ್ದರು. ಆದರೆ, ಆ ರಸ್ತೆಯಲ್ಲಿ ಬೆಟ್ಟ ಕುಸಿದು ಸಂಚಾರ ಸ್ಥಗಿತಗೊಂಡ ಕಾರಣ ಮಾರ್ಗ ಬದಲಿಸಿದ ಬೆಂಗಳೂರಿನ 15 ಜನ ಸೇರಿದಂತೆ 110 ಮಂದಿಯ ಪ್ರವಾಸಿಗರು, ಕಟ್ರಾ ವೈಷ್ಣವಿ ದೇವಿ ದರ್ಶನ ಮುಗಿಸಿ, ಕುನುಮೊನಾಲಿಗೆ ಹಿಂತಿರುಗಿದ್ದಾರೆ ಎಂದು ತಿಳಿದುಬಂದಿದೆ…

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

4 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

6 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

12 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

13 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

1 day ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

1 day ago