ಟೀಂ ಇಂಡಿಯಾದ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ 14 ವರ್ಷಗಳ ವೃತ್ತಿಜೀವನ ಅಂತ್ಯವಾಗಿದೆ. ಇಂಗ್ಲೆಂಡ್ ಸರಣಿಗೂ ಮುನ್ನ ಕೊಹ್ಲಿ ನಿವೃತ್ತಿ ನಿರ್ಧಾರ ತೆಗೆದುಕೊಂಡಿದ್ದಾರೆ.
ವಿರಾಟ್ ಕೊಹ್ಲಿ 123 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 48.7 ಸರಾಸರಿಯಲ್ಲಿ 9,230 ರನ್ ಗಳಿಸಿದ್ದಾರೆ. ಇದರಲ್ಲಿ 30 ಶತಕ ಮತ್ತು 31 ಅರ್ಧ ಶತಕಗಳು ಸೇರಿವೆ. 2024-25ರ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಕೊನೆಯ ಟೆಸ್ಟ್ ಪಂದ್ಯ ಆಡಿದರು. ಆ ಸರಣಿಯಲ್ಲಿ ಪರ್ತ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಗಳಿಸಿ ಮಿಂಚಿದ್ದರು. ನಂತರದ ಕೊನೆಯ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಕೇವಲ 85 ರನ್ ಗಳಿಸಲು ಶಕ್ತರಾದರು.
ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಲು ಬಯಸಿರುವುದಾಗಿ ವಿರಾಟ್ ಕೊಹ್ಲಿ ಇತ್ತೀಚೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ತಿಳಿಸಿದ್ದರು. ಆದರೆ, ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದರು.
2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ಕೊಹ್ಲಿ, ನಂತರ ಒಂದು ದಶಕಗಳ ಕಾಲ ತಂಡದ ಬ್ಯಾಟಿಂಗ್ ಆಧಾರ ಸ್ತಂಭವಾಗಿದ್ದರು. ನಂತರ ತಂಡದ ನಾಯಕತ್ವ ವಹಿಸಿಕೊಂಡರು. ಕೊಹ್ಲಿ ನಾಯಕತ್ವದಲ್ಲಿ ಭಾರತ ಟೆಸ್ಟ್ ತಂಡ ಪಾರುಪತ್ಯ ಮೆರೆಯಿತು. 2018-19ರಲ್ಲಿ ಆಸ್ಟ್ರೇಲಿಯಾದಲ್ಲಿ ಭಾರತ ಮೊದಲ ಬಾರಿಗೆ ಟೆಸ್ಟ್ ಸರಣಿ ಗೆದ್ದಿತು. ಕೊಹ್ಲಿ ನಾಯಕತ್ವದಲ್ಲಿ ಭಾರತ ICC ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿತು. ಕೊಹ್ಲಿ ನಾಯಕತ್ವದಲ್ಲಿ ಭಾರತ 68 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 40 ಪಂದ್ಯಗಳಲ್ಲಿ ಗೆದ್ದಿದೆ.
ಟೆಸ್ಟ್ಗೆ ವಿದಾಯ ಘೋಷಿಸಿರುವ ಕೊಹ್ಲಿ ಏಕದಿನ ಕ್ರಿಕೆಟ್ ಮುಂದುವರಿಯಲಿದ್ದಾರೆ. ಕೊಹ್ಲಿ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಹೊಂದಿದ್ದು, ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ ಬೇಸರ ತರಿಸಿರುವುದಂತೂ ಹೌದು. ಆದರೆ, ಒಂದು ದಶಕಗಳ ಕಾಲ ಕೊಹ್ಲಿ ಟೆಸ್ಟ್ನಲ್ಲಿ ತೋರಿದ ಪ್ರದರ್ಶನವನ್ನು ಯಾರಿಂದಲೂ ಮರೆಯಲು ಸಾಧ್ಯವಿಲ್ಲ. ಯಾಕೆಂದರೆ, ಟೆಸ್ಟ್ ಕ್ರಿಕೆಟ್ನಲ್ಲಿ ಅವರು ಮೂಡಿಸಿದ ಛಾಪು ಅಂತಹದ್ದಾಗಿದೆ.
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…