ಟೀಂ ಇಂಡಿಯಾದ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ 14 ವರ್ಷಗಳ ವೃತ್ತಿಜೀವನ ಅಂತ್ಯವಾಗಿದೆ. ಇಂಗ್ಲೆಂಡ್ ಸರಣಿಗೂ ಮುನ್ನ ಕೊಹ್ಲಿ ನಿವೃತ್ತಿ ನಿರ್ಧಾರ ತೆಗೆದುಕೊಂಡಿದ್ದಾರೆ.
ವಿರಾಟ್ ಕೊಹ್ಲಿ 123 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 48.7 ಸರಾಸರಿಯಲ್ಲಿ 9,230 ರನ್ ಗಳಿಸಿದ್ದಾರೆ. ಇದರಲ್ಲಿ 30 ಶತಕ ಮತ್ತು 31 ಅರ್ಧ ಶತಕಗಳು ಸೇರಿವೆ. 2024-25ರ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಕೊನೆಯ ಟೆಸ್ಟ್ ಪಂದ್ಯ ಆಡಿದರು. ಆ ಸರಣಿಯಲ್ಲಿ ಪರ್ತ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಗಳಿಸಿ ಮಿಂಚಿದ್ದರು. ನಂತರದ ಕೊನೆಯ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಕೇವಲ 85 ರನ್ ಗಳಿಸಲು ಶಕ್ತರಾದರು.
ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಲು ಬಯಸಿರುವುದಾಗಿ ವಿರಾಟ್ ಕೊಹ್ಲಿ ಇತ್ತೀಚೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ತಿಳಿಸಿದ್ದರು. ಆದರೆ, ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದರು.
2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ಕೊಹ್ಲಿ, ನಂತರ ಒಂದು ದಶಕಗಳ ಕಾಲ ತಂಡದ ಬ್ಯಾಟಿಂಗ್ ಆಧಾರ ಸ್ತಂಭವಾಗಿದ್ದರು. ನಂತರ ತಂಡದ ನಾಯಕತ್ವ ವಹಿಸಿಕೊಂಡರು. ಕೊಹ್ಲಿ ನಾಯಕತ್ವದಲ್ಲಿ ಭಾರತ ಟೆಸ್ಟ್ ತಂಡ ಪಾರುಪತ್ಯ ಮೆರೆಯಿತು. 2018-19ರಲ್ಲಿ ಆಸ್ಟ್ರೇಲಿಯಾದಲ್ಲಿ ಭಾರತ ಮೊದಲ ಬಾರಿಗೆ ಟೆಸ್ಟ್ ಸರಣಿ ಗೆದ್ದಿತು. ಕೊಹ್ಲಿ ನಾಯಕತ್ವದಲ್ಲಿ ಭಾರತ ICC ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿತು. ಕೊಹ್ಲಿ ನಾಯಕತ್ವದಲ್ಲಿ ಭಾರತ 68 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 40 ಪಂದ್ಯಗಳಲ್ಲಿ ಗೆದ್ದಿದೆ.
ಟೆಸ್ಟ್ಗೆ ವಿದಾಯ ಘೋಷಿಸಿರುವ ಕೊಹ್ಲಿ ಏಕದಿನ ಕ್ರಿಕೆಟ್ ಮುಂದುವರಿಯಲಿದ್ದಾರೆ. ಕೊಹ್ಲಿ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಹೊಂದಿದ್ದು, ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ ಬೇಸರ ತರಿಸಿರುವುದಂತೂ ಹೌದು. ಆದರೆ, ಒಂದು ದಶಕಗಳ ಕಾಲ ಕೊಹ್ಲಿ ಟೆಸ್ಟ್ನಲ್ಲಿ ತೋರಿದ ಪ್ರದರ್ಶನವನ್ನು ಯಾರಿಂದಲೂ ಮರೆಯಲು ಸಾಧ್ಯವಿಲ್ಲ. ಯಾಕೆಂದರೆ, ಟೆಸ್ಟ್ ಕ್ರಿಕೆಟ್ನಲ್ಲಿ ಅವರು ಮೂಡಿಸಿದ ಛಾಪು ಅಂತಹದ್ದಾಗಿದೆ.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…