ಟೀಂ ಇಂಡಿಯಾದ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ 14 ವರ್ಷಗಳ ವೃತ್ತಿಜೀವನ ಅಂತ್ಯವಾಗಿದೆ. ಇಂಗ್ಲೆಂಡ್ ಸರಣಿಗೂ ಮುನ್ನ ಕೊಹ್ಲಿ ನಿವೃತ್ತಿ ನಿರ್ಧಾರ ತೆಗೆದುಕೊಂಡಿದ್ದಾರೆ.
ವಿರಾಟ್ ಕೊಹ್ಲಿ 123 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 48.7 ಸರಾಸರಿಯಲ್ಲಿ 9,230 ರನ್ ಗಳಿಸಿದ್ದಾರೆ. ಇದರಲ್ಲಿ 30 ಶತಕ ಮತ್ತು 31 ಅರ್ಧ ಶತಕಗಳು ಸೇರಿವೆ. 2024-25ರ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಕೊನೆಯ ಟೆಸ್ಟ್ ಪಂದ್ಯ ಆಡಿದರು. ಆ ಸರಣಿಯಲ್ಲಿ ಪರ್ತ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಗಳಿಸಿ ಮಿಂಚಿದ್ದರು. ನಂತರದ ಕೊನೆಯ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಕೇವಲ 85 ರನ್ ಗಳಿಸಲು ಶಕ್ತರಾದರು.
ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಲು ಬಯಸಿರುವುದಾಗಿ ವಿರಾಟ್ ಕೊಹ್ಲಿ ಇತ್ತೀಚೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ತಿಳಿಸಿದ್ದರು. ಆದರೆ, ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದರು.
2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ಕೊಹ್ಲಿ, ನಂತರ ಒಂದು ದಶಕಗಳ ಕಾಲ ತಂಡದ ಬ್ಯಾಟಿಂಗ್ ಆಧಾರ ಸ್ತಂಭವಾಗಿದ್ದರು. ನಂತರ ತಂಡದ ನಾಯಕತ್ವ ವಹಿಸಿಕೊಂಡರು. ಕೊಹ್ಲಿ ನಾಯಕತ್ವದಲ್ಲಿ ಭಾರತ ಟೆಸ್ಟ್ ತಂಡ ಪಾರುಪತ್ಯ ಮೆರೆಯಿತು. 2018-19ರಲ್ಲಿ ಆಸ್ಟ್ರೇಲಿಯಾದಲ್ಲಿ ಭಾರತ ಮೊದಲ ಬಾರಿಗೆ ಟೆಸ್ಟ್ ಸರಣಿ ಗೆದ್ದಿತು. ಕೊಹ್ಲಿ ನಾಯಕತ್ವದಲ್ಲಿ ಭಾರತ ICC ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿತು. ಕೊಹ್ಲಿ ನಾಯಕತ್ವದಲ್ಲಿ ಭಾರತ 68 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 40 ಪಂದ್ಯಗಳಲ್ಲಿ ಗೆದ್ದಿದೆ.
ಟೆಸ್ಟ್ಗೆ ವಿದಾಯ ಘೋಷಿಸಿರುವ ಕೊಹ್ಲಿ ಏಕದಿನ ಕ್ರಿಕೆಟ್ ಮುಂದುವರಿಯಲಿದ್ದಾರೆ. ಕೊಹ್ಲಿ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಹೊಂದಿದ್ದು, ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ ಬೇಸರ ತರಿಸಿರುವುದಂತೂ ಹೌದು. ಆದರೆ, ಒಂದು ದಶಕಗಳ ಕಾಲ ಕೊಹ್ಲಿ ಟೆಸ್ಟ್ನಲ್ಲಿ ತೋರಿದ ಪ್ರದರ್ಶನವನ್ನು ಯಾರಿಂದಲೂ ಮರೆಯಲು ಸಾಧ್ಯವಿಲ್ಲ. ಯಾಕೆಂದರೆ, ಟೆಸ್ಟ್ ಕ್ರಿಕೆಟ್ನಲ್ಲಿ ಅವರು ಮೂಡಿಸಿದ ಛಾಪು ಅಂತಹದ್ದಾಗಿದೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…