ಕಿಂಗ್ ಕೊಯ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ: ಏಕದಿನ ಕ್ರಿಕೆಟ್ ನಲ್ಲಿ ಮುಂದುವರಿಯಲಿರುವ ವಿರಾಟ್

ಟೀಂ ಇಂಡಿಯಾದ ವಿರಾಟ್‌ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ 14 ವರ್ಷಗಳ ವೃತ್ತಿಜೀವನ ಅಂತ್ಯವಾಗಿದೆ. ಇಂಗ್ಲೆಂಡ್ ಸರಣಿಗೂ ಮುನ್ನ ಕೊಹ್ಲಿ ನಿವೃತ್ತಿ ನಿರ್ಧಾರ ತೆಗೆದುಕೊಂಡಿದ್ದಾರೆ.

ವಿರಾಟ್ ಕೊಹ್ಲಿ 123 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 48.7 ಸರಾಸರಿಯಲ್ಲಿ 9,230 ರನ್ ಗಳಿಸಿದ್ದಾರೆ. ಇದರಲ್ಲಿ 30 ಶತಕ ಮತ್ತು 31 ಅರ್ಧ ಶತಕಗಳು ಸೇರಿವೆ. 2024-25ರ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಕೊನೆಯ ಟೆಸ್ಟ್ ಪಂದ್ಯ ಆಡಿದರು. ಆ ಸರಣಿಯಲ್ಲಿ ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಗಳಿಸಿ ಮಿಂಚಿದ್ದರು. ನಂತರದ ಕೊನೆಯ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಕೇವಲ 85 ರನ್ ಗಳಿಸಲು ಶಕ್ತರಾದರು.

ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಲು ಬಯಸಿರುವುದಾಗಿ ವಿರಾಟ್‌ ಕೊಹ್ಲಿ ಇತ್ತೀಚೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ತಿಳಿಸಿದ್ದರು. ಆದರೆ, ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದರು.

2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕೊಹ್ಲಿ, ನಂತರ ಒಂದು ದಶಕಗಳ ಕಾಲ ತಂಡದ ಬ್ಯಾಟಿಂಗ್‌ ಆಧಾರ ಸ್ತಂಭವಾಗಿದ್ದರು. ನಂತರ ತಂಡದ ನಾಯಕತ್ವ ವಹಿಸಿಕೊಂಡರು. ಕೊಹ್ಲಿ ನಾಯಕತ್ವದಲ್ಲಿ ಭಾರತ ಟೆಸ್ಟ್‌ ತಂಡ ಪಾರುಪತ್ಯ ಮೆರೆಯಿತು. 2018-19ರಲ್ಲಿ ಆಸ್ಟ್ರೇಲಿಯಾದಲ್ಲಿ ಭಾರತ ಮೊದಲ ಬಾರಿಗೆ ಟೆಸ್ಟ್ ಸರಣಿ ಗೆದ್ದಿತು. ಕೊಹ್ಲಿ ನಾಯಕತ್ವದಲ್ಲಿ ಭಾರತ ICC ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿತು. ಕೊಹ್ಲಿ ನಾಯಕತ್ವದಲ್ಲಿ ಭಾರತ 68 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 40 ಪಂದ್ಯಗಳಲ್ಲಿ ಗೆದ್ದಿದೆ.

ಟೆಸ್ಟ್‌ಗೆ ವಿದಾಯ ಘೋಷಿಸಿರುವ ಕೊಹ್ಲಿ ಏಕದಿನ ಕ್ರಿಕೆಟ್ ಮುಂದುವರಿಯಲಿದ್ದಾರೆ. ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದು, ಭಾರತೀಯ ಕ್ರಿಕೆಟ್‌ ಪ್ರೇಮಿಗಳಿಗೆ ಬೇಸರ ತರಿಸಿರುವುದಂತೂ ಹೌದು. ಆದರೆ, ಒಂದು ದಶಕಗಳ ಕಾಲ ಕೊಹ್ಲಿ ಟೆಸ್ಟ್‌ನಲ್ಲಿ ತೋರಿದ ಪ್ರದರ್ಶನವನ್ನು ಯಾರಿಂದಲೂ ಮರೆಯಲು ಸಾಧ್ಯವಿಲ್ಲ. ಯಾಕೆಂದರೆ, ಟೆಸ್ಟ್‌ ಕ್ರಿಕೆಟ್‌ನಲ್ಲಿ ಅವರು ಮೂಡಿಸಿದ ಛಾಪು ಅಂತಹದ್ದಾಗಿದೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

11 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

21 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

22 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

1 day ago