ಕಿಂಗ್ ಕೊಯ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ: ಏಕದಿನ ಕ್ರಿಕೆಟ್ ನಲ್ಲಿ ಮುಂದುವರಿಯಲಿರುವ ವಿರಾಟ್

ಟೀಂ ಇಂಡಿಯಾದ ವಿರಾಟ್‌ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ 14 ವರ್ಷಗಳ ವೃತ್ತಿಜೀವನ ಅಂತ್ಯವಾಗಿದೆ. ಇಂಗ್ಲೆಂಡ್ ಸರಣಿಗೂ ಮುನ್ನ ಕೊಹ್ಲಿ ನಿವೃತ್ತಿ ನಿರ್ಧಾರ ತೆಗೆದುಕೊಂಡಿದ್ದಾರೆ.

ವಿರಾಟ್ ಕೊಹ್ಲಿ 123 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 48.7 ಸರಾಸರಿಯಲ್ಲಿ 9,230 ರನ್ ಗಳಿಸಿದ್ದಾರೆ. ಇದರಲ್ಲಿ 30 ಶತಕ ಮತ್ತು 31 ಅರ್ಧ ಶತಕಗಳು ಸೇರಿವೆ. 2024-25ರ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಕೊನೆಯ ಟೆಸ್ಟ್ ಪಂದ್ಯ ಆಡಿದರು. ಆ ಸರಣಿಯಲ್ಲಿ ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಗಳಿಸಿ ಮಿಂಚಿದ್ದರು. ನಂತರದ ಕೊನೆಯ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಕೇವಲ 85 ರನ್ ಗಳಿಸಲು ಶಕ್ತರಾದರು.

ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಲು ಬಯಸಿರುವುದಾಗಿ ವಿರಾಟ್‌ ಕೊಹ್ಲಿ ಇತ್ತೀಚೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ತಿಳಿಸಿದ್ದರು. ಆದರೆ, ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದರು.

2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕೊಹ್ಲಿ, ನಂತರ ಒಂದು ದಶಕಗಳ ಕಾಲ ತಂಡದ ಬ್ಯಾಟಿಂಗ್‌ ಆಧಾರ ಸ್ತಂಭವಾಗಿದ್ದರು. ನಂತರ ತಂಡದ ನಾಯಕತ್ವ ವಹಿಸಿಕೊಂಡರು. ಕೊಹ್ಲಿ ನಾಯಕತ್ವದಲ್ಲಿ ಭಾರತ ಟೆಸ್ಟ್‌ ತಂಡ ಪಾರುಪತ್ಯ ಮೆರೆಯಿತು. 2018-19ರಲ್ಲಿ ಆಸ್ಟ್ರೇಲಿಯಾದಲ್ಲಿ ಭಾರತ ಮೊದಲ ಬಾರಿಗೆ ಟೆಸ್ಟ್ ಸರಣಿ ಗೆದ್ದಿತು. ಕೊಹ್ಲಿ ನಾಯಕತ್ವದಲ್ಲಿ ಭಾರತ ICC ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿತು. ಕೊಹ್ಲಿ ನಾಯಕತ್ವದಲ್ಲಿ ಭಾರತ 68 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 40 ಪಂದ್ಯಗಳಲ್ಲಿ ಗೆದ್ದಿದೆ.

ಟೆಸ್ಟ್‌ಗೆ ವಿದಾಯ ಘೋಷಿಸಿರುವ ಕೊಹ್ಲಿ ಏಕದಿನ ಕ್ರಿಕೆಟ್ ಮುಂದುವರಿಯಲಿದ್ದಾರೆ. ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದು, ಭಾರತೀಯ ಕ್ರಿಕೆಟ್‌ ಪ್ರೇಮಿಗಳಿಗೆ ಬೇಸರ ತರಿಸಿರುವುದಂತೂ ಹೌದು. ಆದರೆ, ಒಂದು ದಶಕಗಳ ಕಾಲ ಕೊಹ್ಲಿ ಟೆಸ್ಟ್‌ನಲ್ಲಿ ತೋರಿದ ಪ್ರದರ್ಶನವನ್ನು ಯಾರಿಂದಲೂ ಮರೆಯಲು ಸಾಧ್ಯವಿಲ್ಲ. ಯಾಕೆಂದರೆ, ಟೆಸ್ಟ್‌ ಕ್ರಿಕೆಟ್‌ನಲ್ಲಿ ಅವರು ಮೂಡಿಸಿದ ಛಾಪು ಅಂತಹದ್ದಾಗಿದೆ.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

5 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

15 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

16 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

21 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

23 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago