Categories: ಐಪಿಎಲ್

ಕಿಂಗ್ ಕೊಹ್ಲಿ ಶತಕ: ಆರ್ ಸಿ ಬಿ ಗೆ ಮಹತ್ವದ ಜಯ

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಸಿಡಿಸಿದ ಆಕರ್ಷಕ ಶತಕ ಹಾಗೂ ನಾಯಕ ಫಾಫ್ ಡುಪ್ಲೆಸಿಸ್ ಅರ್ಧ ಶತಕದ ನೆರವಿನಿಂದ ಸನ್ ರೈಸರ್ ಹೈದರಾಬಾದ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಆರ್ ಸಿಬಿ ಜಯ ಗಳಿಸಿತು.

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಆರ್ ಸಿ ಬಿ ತಂಡ ಉತ್ತಮ ಆರಂಭ ಪಡೆಯಿತು. ಬ್ರೆಸ್ ವೆಲ್ ರ ಸ್ಪಿನ್ ಮೋಡಿಗೆ ಅರಂಭಿಕರಿಬ್ಬರು ಬೇಗನೆ ಪೆವಿಲಿಯನ್ ಸೇರಿದರು.

ನಂತರ ಕ್ರೀಸ್ ಗೆ ಬಂದ ಹೆನ್ರಿಕ್ ಕ್ಲಾಸಿನ್(104) ಹಾಗೂ ಹ್ಯಾರಿ ಬ್ರೂಕ್(27) ಉತ್ತಮ ಜೊತೆಯಾಟ ಆಡಿದರು. ಆರ್ ಸಿ ಬಿ ಬೌಲರ್ ಗಳನ್ನು ಬೆಂಡೆತ್ತಿದ ಕ್ಲಾಸಿನ್ ತಮ್ಮ ಚೊಚ್ಚಲ ಐಪಿಎಲ್ ಶತಕ ಸಿಡಿಸಿ ಸಂಭ್ರಮಿಸಿದರು.

ಇವರ ಶತಕದ ನೆರವಿನಿಂದ 5 ವಿಕೆಟ್ ಗಳ ನಷ್ಟಕ್ಕೆ 186 ರನ್ ಗನನ್ನು ಗಳಿಸಲು ಸಾಧ್ಯವಾಯಿತು. ಆರ್ ಸಿ ಬಿ ಪರ ಬ್ರೇಸ್ ವೆಲ್ 2 ವಿಕೆಟ್ ಹಾಗೂ ಹರ್ಷಲ್, ಶಬಾಜ್, ಸಿರಾಜ್ ತಲಾ ಒಂದೊಂದು ವಿಕೆಟ್ ಪಡೆದರು.

187 ರನ್ ಗಳ ಗುರಿ ಬೆನ್ನಟ್ಟಿದ ಆರ್ ಸಿ ಬಿ ಉತ್ತಮ ಆರಂಭ ಪಡೆಯಿತು.ತಾರ ಆಟಗಾರ ವಿರಾಟ್ ಕೊಹ್ಲಿ(100) ಐಪಿಎಲ್ ನಲ್ಲಿ ತಮ್ಮ 6 ನೇ ಶತಕ ಸಿಡಿಸಿ ಗೆಲುವಿನ ಹಾದಿಯನ್ನು ಸುಗಮಗೊಳಿಸಿದರು. ಇದರ ಜೊತೆಯಲ್ಲಿ ನಾಯಕ ಫಾಫ್ ದುಪ್ಲೆಸಿಸ್(71)ಈ ಪಂದ್ಯದಲ್ಲೂ ಕೂಡ ತಮ್ಮ ಮಿಂಚಿನ ಅರ್ಧ ಶತಕ ದಾಖಲಿಸಿದರು.

ಇವರಿಬ್ಬರ ದಾಖಲೆಯ 172 ರನ್ ಗಳ ಜೊತೆಯಾಟದ ನೆರವಿನಿಂದ ಆರ್ ಸಿ ಬಿ ತಂಡ 8 ವಿಕೆಟ್ ಗಳ ಸುಲಭ ಜಯ ಸಾಧಿಸಿತು. ಇದರಿಂದ ಆರ್ ಸಿ ಬಿ ಯ ಪ್ಲೇ ಆಫ್ ನ ಕನಸು ಮತ್ತಷ್ಟು ಭದ್ರವಾಯಿತು.

ಭಾನುವಾರ ನಡೆಯುವ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ ಆರ್ ಸಿ ಬಿ ಪ್ಲೇ ಆಫ್ ಪ್ರವೇಶಿಸುವುದು ಬಹುತೇಕ ಖಚಿತವಾಗುತ್ತದೆ.

Ramesh Babu

Journalist

Recent Posts

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

40 minutes ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

7 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

8 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

13 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

1 day ago