Categories: ಐಪಿಎಲ್

ಕಿಂಗ್ ಕೊಹ್ಲಿ ಶತಕ: ಆರ್ ಸಿ ಬಿ ಗೆ ಮಹತ್ವದ ಜಯ

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಸಿಡಿಸಿದ ಆಕರ್ಷಕ ಶತಕ ಹಾಗೂ ನಾಯಕ ಫಾಫ್ ಡುಪ್ಲೆಸಿಸ್ ಅರ್ಧ ಶತಕದ ನೆರವಿನಿಂದ ಸನ್ ರೈಸರ್ ಹೈದರಾಬಾದ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಆರ್ ಸಿಬಿ ಜಯ ಗಳಿಸಿತು.

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಆರ್ ಸಿ ಬಿ ತಂಡ ಉತ್ತಮ ಆರಂಭ ಪಡೆಯಿತು. ಬ್ರೆಸ್ ವೆಲ್ ರ ಸ್ಪಿನ್ ಮೋಡಿಗೆ ಅರಂಭಿಕರಿಬ್ಬರು ಬೇಗನೆ ಪೆವಿಲಿಯನ್ ಸೇರಿದರು.

ನಂತರ ಕ್ರೀಸ್ ಗೆ ಬಂದ ಹೆನ್ರಿಕ್ ಕ್ಲಾಸಿನ್(104) ಹಾಗೂ ಹ್ಯಾರಿ ಬ್ರೂಕ್(27) ಉತ್ತಮ ಜೊತೆಯಾಟ ಆಡಿದರು. ಆರ್ ಸಿ ಬಿ ಬೌಲರ್ ಗಳನ್ನು ಬೆಂಡೆತ್ತಿದ ಕ್ಲಾಸಿನ್ ತಮ್ಮ ಚೊಚ್ಚಲ ಐಪಿಎಲ್ ಶತಕ ಸಿಡಿಸಿ ಸಂಭ್ರಮಿಸಿದರು.

ಇವರ ಶತಕದ ನೆರವಿನಿಂದ 5 ವಿಕೆಟ್ ಗಳ ನಷ್ಟಕ್ಕೆ 186 ರನ್ ಗನನ್ನು ಗಳಿಸಲು ಸಾಧ್ಯವಾಯಿತು. ಆರ್ ಸಿ ಬಿ ಪರ ಬ್ರೇಸ್ ವೆಲ್ 2 ವಿಕೆಟ್ ಹಾಗೂ ಹರ್ಷಲ್, ಶಬಾಜ್, ಸಿರಾಜ್ ತಲಾ ಒಂದೊಂದು ವಿಕೆಟ್ ಪಡೆದರು.

187 ರನ್ ಗಳ ಗುರಿ ಬೆನ್ನಟ್ಟಿದ ಆರ್ ಸಿ ಬಿ ಉತ್ತಮ ಆರಂಭ ಪಡೆಯಿತು.ತಾರ ಆಟಗಾರ ವಿರಾಟ್ ಕೊಹ್ಲಿ(100) ಐಪಿಎಲ್ ನಲ್ಲಿ ತಮ್ಮ 6 ನೇ ಶತಕ ಸಿಡಿಸಿ ಗೆಲುವಿನ ಹಾದಿಯನ್ನು ಸುಗಮಗೊಳಿಸಿದರು. ಇದರ ಜೊತೆಯಲ್ಲಿ ನಾಯಕ ಫಾಫ್ ದುಪ್ಲೆಸಿಸ್(71)ಈ ಪಂದ್ಯದಲ್ಲೂ ಕೂಡ ತಮ್ಮ ಮಿಂಚಿನ ಅರ್ಧ ಶತಕ ದಾಖಲಿಸಿದರು.

ಇವರಿಬ್ಬರ ದಾಖಲೆಯ 172 ರನ್ ಗಳ ಜೊತೆಯಾಟದ ನೆರವಿನಿಂದ ಆರ್ ಸಿ ಬಿ ತಂಡ 8 ವಿಕೆಟ್ ಗಳ ಸುಲಭ ಜಯ ಸಾಧಿಸಿತು. ಇದರಿಂದ ಆರ್ ಸಿ ಬಿ ಯ ಪ್ಲೇ ಆಫ್ ನ ಕನಸು ಮತ್ತಷ್ಟು ಭದ್ರವಾಯಿತು.

ಭಾನುವಾರ ನಡೆಯುವ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ ಆರ್ ಸಿ ಬಿ ಪ್ಲೇ ಆಫ್ ಪ್ರವೇಶಿಸುವುದು ಬಹುತೇಕ ಖಚಿತವಾಗುತ್ತದೆ.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

2 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

4 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

7 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

8 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

19 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

20 hours ago