Categories: ಐಪಿಎಲ್

ಕಿಂಗ್ ಕೊಹ್ಲಿ ಶತಕ: ಆರ್ ಸಿ ಬಿ ಗೆ ಮಹತ್ವದ ಜಯ

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಸಿಡಿಸಿದ ಆಕರ್ಷಕ ಶತಕ ಹಾಗೂ ನಾಯಕ ಫಾಫ್ ಡುಪ್ಲೆಸಿಸ್ ಅರ್ಧ ಶತಕದ ನೆರವಿನಿಂದ ಸನ್ ರೈಸರ್ ಹೈದರಾಬಾದ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಆರ್ ಸಿಬಿ ಜಯ ಗಳಿಸಿತು.

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಆರ್ ಸಿ ಬಿ ತಂಡ ಉತ್ತಮ ಆರಂಭ ಪಡೆಯಿತು. ಬ್ರೆಸ್ ವೆಲ್ ರ ಸ್ಪಿನ್ ಮೋಡಿಗೆ ಅರಂಭಿಕರಿಬ್ಬರು ಬೇಗನೆ ಪೆವಿಲಿಯನ್ ಸೇರಿದರು.

ನಂತರ ಕ್ರೀಸ್ ಗೆ ಬಂದ ಹೆನ್ರಿಕ್ ಕ್ಲಾಸಿನ್(104) ಹಾಗೂ ಹ್ಯಾರಿ ಬ್ರೂಕ್(27) ಉತ್ತಮ ಜೊತೆಯಾಟ ಆಡಿದರು. ಆರ್ ಸಿ ಬಿ ಬೌಲರ್ ಗಳನ್ನು ಬೆಂಡೆತ್ತಿದ ಕ್ಲಾಸಿನ್ ತಮ್ಮ ಚೊಚ್ಚಲ ಐಪಿಎಲ್ ಶತಕ ಸಿಡಿಸಿ ಸಂಭ್ರಮಿಸಿದರು.

ಇವರ ಶತಕದ ನೆರವಿನಿಂದ 5 ವಿಕೆಟ್ ಗಳ ನಷ್ಟಕ್ಕೆ 186 ರನ್ ಗನನ್ನು ಗಳಿಸಲು ಸಾಧ್ಯವಾಯಿತು. ಆರ್ ಸಿ ಬಿ ಪರ ಬ್ರೇಸ್ ವೆಲ್ 2 ವಿಕೆಟ್ ಹಾಗೂ ಹರ್ಷಲ್, ಶಬಾಜ್, ಸಿರಾಜ್ ತಲಾ ಒಂದೊಂದು ವಿಕೆಟ್ ಪಡೆದರು.

187 ರನ್ ಗಳ ಗುರಿ ಬೆನ್ನಟ್ಟಿದ ಆರ್ ಸಿ ಬಿ ಉತ್ತಮ ಆರಂಭ ಪಡೆಯಿತು.ತಾರ ಆಟಗಾರ ವಿರಾಟ್ ಕೊಹ್ಲಿ(100) ಐಪಿಎಲ್ ನಲ್ಲಿ ತಮ್ಮ 6 ನೇ ಶತಕ ಸಿಡಿಸಿ ಗೆಲುವಿನ ಹಾದಿಯನ್ನು ಸುಗಮಗೊಳಿಸಿದರು. ಇದರ ಜೊತೆಯಲ್ಲಿ ನಾಯಕ ಫಾಫ್ ದುಪ್ಲೆಸಿಸ್(71)ಈ ಪಂದ್ಯದಲ್ಲೂ ಕೂಡ ತಮ್ಮ ಮಿಂಚಿನ ಅರ್ಧ ಶತಕ ದಾಖಲಿಸಿದರು.

ಇವರಿಬ್ಬರ ದಾಖಲೆಯ 172 ರನ್ ಗಳ ಜೊತೆಯಾಟದ ನೆರವಿನಿಂದ ಆರ್ ಸಿ ಬಿ ತಂಡ 8 ವಿಕೆಟ್ ಗಳ ಸುಲಭ ಜಯ ಸಾಧಿಸಿತು. ಇದರಿಂದ ಆರ್ ಸಿ ಬಿ ಯ ಪ್ಲೇ ಆಫ್ ನ ಕನಸು ಮತ್ತಷ್ಟು ಭದ್ರವಾಯಿತು.

ಭಾನುವಾರ ನಡೆಯುವ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ ಆರ್ ಸಿ ಬಿ ಪ್ಲೇ ಆಫ್ ಪ್ರವೇಶಿಸುವುದು ಬಹುತೇಕ ಖಚಿತವಾಗುತ್ತದೆ.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

6 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

13 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

16 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

16 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago