Categories: ಐಪಿಎಲ್

ಕಿಂಗ್ ಕೊಹ್ಲಿ ಶತಕ: ಆರ್ ಸಿ ಬಿ ಗೆ ಮಹತ್ವದ ಜಯ

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಸಿಡಿಸಿದ ಆಕರ್ಷಕ ಶತಕ ಹಾಗೂ ನಾಯಕ ಫಾಫ್ ಡುಪ್ಲೆಸಿಸ್ ಅರ್ಧ ಶತಕದ ನೆರವಿನಿಂದ ಸನ್ ರೈಸರ್ ಹೈದರಾಬಾದ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಆರ್ ಸಿಬಿ ಜಯ ಗಳಿಸಿತು.

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಆರ್ ಸಿ ಬಿ ತಂಡ ಉತ್ತಮ ಆರಂಭ ಪಡೆಯಿತು. ಬ್ರೆಸ್ ವೆಲ್ ರ ಸ್ಪಿನ್ ಮೋಡಿಗೆ ಅರಂಭಿಕರಿಬ್ಬರು ಬೇಗನೆ ಪೆವಿಲಿಯನ್ ಸೇರಿದರು.

ನಂತರ ಕ್ರೀಸ್ ಗೆ ಬಂದ ಹೆನ್ರಿಕ್ ಕ್ಲಾಸಿನ್(104) ಹಾಗೂ ಹ್ಯಾರಿ ಬ್ರೂಕ್(27) ಉತ್ತಮ ಜೊತೆಯಾಟ ಆಡಿದರು. ಆರ್ ಸಿ ಬಿ ಬೌಲರ್ ಗಳನ್ನು ಬೆಂಡೆತ್ತಿದ ಕ್ಲಾಸಿನ್ ತಮ್ಮ ಚೊಚ್ಚಲ ಐಪಿಎಲ್ ಶತಕ ಸಿಡಿಸಿ ಸಂಭ್ರಮಿಸಿದರು.

ಇವರ ಶತಕದ ನೆರವಿನಿಂದ 5 ವಿಕೆಟ್ ಗಳ ನಷ್ಟಕ್ಕೆ 186 ರನ್ ಗನನ್ನು ಗಳಿಸಲು ಸಾಧ್ಯವಾಯಿತು. ಆರ್ ಸಿ ಬಿ ಪರ ಬ್ರೇಸ್ ವೆಲ್ 2 ವಿಕೆಟ್ ಹಾಗೂ ಹರ್ಷಲ್, ಶಬಾಜ್, ಸಿರಾಜ್ ತಲಾ ಒಂದೊಂದು ವಿಕೆಟ್ ಪಡೆದರು.

187 ರನ್ ಗಳ ಗುರಿ ಬೆನ್ನಟ್ಟಿದ ಆರ್ ಸಿ ಬಿ ಉತ್ತಮ ಆರಂಭ ಪಡೆಯಿತು.ತಾರ ಆಟಗಾರ ವಿರಾಟ್ ಕೊಹ್ಲಿ(100) ಐಪಿಎಲ್ ನಲ್ಲಿ ತಮ್ಮ 6 ನೇ ಶತಕ ಸಿಡಿಸಿ ಗೆಲುವಿನ ಹಾದಿಯನ್ನು ಸುಗಮಗೊಳಿಸಿದರು. ಇದರ ಜೊತೆಯಲ್ಲಿ ನಾಯಕ ಫಾಫ್ ದುಪ್ಲೆಸಿಸ್(71)ಈ ಪಂದ್ಯದಲ್ಲೂ ಕೂಡ ತಮ್ಮ ಮಿಂಚಿನ ಅರ್ಧ ಶತಕ ದಾಖಲಿಸಿದರು.

ಇವರಿಬ್ಬರ ದಾಖಲೆಯ 172 ರನ್ ಗಳ ಜೊತೆಯಾಟದ ನೆರವಿನಿಂದ ಆರ್ ಸಿ ಬಿ ತಂಡ 8 ವಿಕೆಟ್ ಗಳ ಸುಲಭ ಜಯ ಸಾಧಿಸಿತು. ಇದರಿಂದ ಆರ್ ಸಿ ಬಿ ಯ ಪ್ಲೇ ಆಫ್ ನ ಕನಸು ಮತ್ತಷ್ಟು ಭದ್ರವಾಯಿತು.

ಭಾನುವಾರ ನಡೆಯುವ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ ಆರ್ ಸಿ ಬಿ ಪ್ಲೇ ಆಫ್ ಪ್ರವೇಶಿಸುವುದು ಬಹುತೇಕ ಖಚಿತವಾಗುತ್ತದೆ.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

6 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

7 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

16 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago