Categories: ಐಪಿಎಲ್

ಕಿಂಗ್ ಕೊಹ್ಲಿ ಶತಕ: ಆರ್ ಸಿ ಬಿ ಗೆ ಮಹತ್ವದ ಜಯ

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಸಿಡಿಸಿದ ಆಕರ್ಷಕ ಶತಕ ಹಾಗೂ ನಾಯಕ ಫಾಫ್ ಡುಪ್ಲೆಸಿಸ್ ಅರ್ಧ ಶತಕದ ನೆರವಿನಿಂದ ಸನ್ ರೈಸರ್ ಹೈದರಾಬಾದ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಆರ್ ಸಿಬಿ ಜಯ ಗಳಿಸಿತು.

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಆರ್ ಸಿ ಬಿ ತಂಡ ಉತ್ತಮ ಆರಂಭ ಪಡೆಯಿತು. ಬ್ರೆಸ್ ವೆಲ್ ರ ಸ್ಪಿನ್ ಮೋಡಿಗೆ ಅರಂಭಿಕರಿಬ್ಬರು ಬೇಗನೆ ಪೆವಿಲಿಯನ್ ಸೇರಿದರು.

ನಂತರ ಕ್ರೀಸ್ ಗೆ ಬಂದ ಹೆನ್ರಿಕ್ ಕ್ಲಾಸಿನ್(104) ಹಾಗೂ ಹ್ಯಾರಿ ಬ್ರೂಕ್(27) ಉತ್ತಮ ಜೊತೆಯಾಟ ಆಡಿದರು. ಆರ್ ಸಿ ಬಿ ಬೌಲರ್ ಗಳನ್ನು ಬೆಂಡೆತ್ತಿದ ಕ್ಲಾಸಿನ್ ತಮ್ಮ ಚೊಚ್ಚಲ ಐಪಿಎಲ್ ಶತಕ ಸಿಡಿಸಿ ಸಂಭ್ರಮಿಸಿದರು.

ಇವರ ಶತಕದ ನೆರವಿನಿಂದ 5 ವಿಕೆಟ್ ಗಳ ನಷ್ಟಕ್ಕೆ 186 ರನ್ ಗನನ್ನು ಗಳಿಸಲು ಸಾಧ್ಯವಾಯಿತು. ಆರ್ ಸಿ ಬಿ ಪರ ಬ್ರೇಸ್ ವೆಲ್ 2 ವಿಕೆಟ್ ಹಾಗೂ ಹರ್ಷಲ್, ಶಬಾಜ್, ಸಿರಾಜ್ ತಲಾ ಒಂದೊಂದು ವಿಕೆಟ್ ಪಡೆದರು.

187 ರನ್ ಗಳ ಗುರಿ ಬೆನ್ನಟ್ಟಿದ ಆರ್ ಸಿ ಬಿ ಉತ್ತಮ ಆರಂಭ ಪಡೆಯಿತು.ತಾರ ಆಟಗಾರ ವಿರಾಟ್ ಕೊಹ್ಲಿ(100) ಐಪಿಎಲ್ ನಲ್ಲಿ ತಮ್ಮ 6 ನೇ ಶತಕ ಸಿಡಿಸಿ ಗೆಲುವಿನ ಹಾದಿಯನ್ನು ಸುಗಮಗೊಳಿಸಿದರು. ಇದರ ಜೊತೆಯಲ್ಲಿ ನಾಯಕ ಫಾಫ್ ದುಪ್ಲೆಸಿಸ್(71)ಈ ಪಂದ್ಯದಲ್ಲೂ ಕೂಡ ತಮ್ಮ ಮಿಂಚಿನ ಅರ್ಧ ಶತಕ ದಾಖಲಿಸಿದರು.

ಇವರಿಬ್ಬರ ದಾಖಲೆಯ 172 ರನ್ ಗಳ ಜೊತೆಯಾಟದ ನೆರವಿನಿಂದ ಆರ್ ಸಿ ಬಿ ತಂಡ 8 ವಿಕೆಟ್ ಗಳ ಸುಲಭ ಜಯ ಸಾಧಿಸಿತು. ಇದರಿಂದ ಆರ್ ಸಿ ಬಿ ಯ ಪ್ಲೇ ಆಫ್ ನ ಕನಸು ಮತ್ತಷ್ಟು ಭದ್ರವಾಯಿತು.

ಭಾನುವಾರ ನಡೆಯುವ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ ಆರ್ ಸಿ ಬಿ ಪ್ಲೇ ಆಫ್ ಪ್ರವೇಶಿಸುವುದು ಬಹುತೇಕ ಖಚಿತವಾಗುತ್ತದೆ.

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

3 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

5 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

6 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

15 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 day ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 day ago