Categories: ಐಪಿಎಲ್

ಕಿಂಗ್ ಕೊಹ್ಲಿ ಶತಕ: ಆರ್ ಸಿ ಬಿ ಗೆ ಮಹತ್ವದ ಜಯ

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಸಿಡಿಸಿದ ಆಕರ್ಷಕ ಶತಕ ಹಾಗೂ ನಾಯಕ ಫಾಫ್ ಡುಪ್ಲೆಸಿಸ್ ಅರ್ಧ ಶತಕದ ನೆರವಿನಿಂದ ಸನ್ ರೈಸರ್ ಹೈದರಾಬಾದ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಆರ್ ಸಿಬಿ ಜಯ ಗಳಿಸಿತು.

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಆರ್ ಸಿ ಬಿ ತಂಡ ಉತ್ತಮ ಆರಂಭ ಪಡೆಯಿತು. ಬ್ರೆಸ್ ವೆಲ್ ರ ಸ್ಪಿನ್ ಮೋಡಿಗೆ ಅರಂಭಿಕರಿಬ್ಬರು ಬೇಗನೆ ಪೆವಿಲಿಯನ್ ಸೇರಿದರು.

ನಂತರ ಕ್ರೀಸ್ ಗೆ ಬಂದ ಹೆನ್ರಿಕ್ ಕ್ಲಾಸಿನ್(104) ಹಾಗೂ ಹ್ಯಾರಿ ಬ್ರೂಕ್(27) ಉತ್ತಮ ಜೊತೆಯಾಟ ಆಡಿದರು. ಆರ್ ಸಿ ಬಿ ಬೌಲರ್ ಗಳನ್ನು ಬೆಂಡೆತ್ತಿದ ಕ್ಲಾಸಿನ್ ತಮ್ಮ ಚೊಚ್ಚಲ ಐಪಿಎಲ್ ಶತಕ ಸಿಡಿಸಿ ಸಂಭ್ರಮಿಸಿದರು.

ಇವರ ಶತಕದ ನೆರವಿನಿಂದ 5 ವಿಕೆಟ್ ಗಳ ನಷ್ಟಕ್ಕೆ 186 ರನ್ ಗನನ್ನು ಗಳಿಸಲು ಸಾಧ್ಯವಾಯಿತು. ಆರ್ ಸಿ ಬಿ ಪರ ಬ್ರೇಸ್ ವೆಲ್ 2 ವಿಕೆಟ್ ಹಾಗೂ ಹರ್ಷಲ್, ಶಬಾಜ್, ಸಿರಾಜ್ ತಲಾ ಒಂದೊಂದು ವಿಕೆಟ್ ಪಡೆದರು.

187 ರನ್ ಗಳ ಗುರಿ ಬೆನ್ನಟ್ಟಿದ ಆರ್ ಸಿ ಬಿ ಉತ್ತಮ ಆರಂಭ ಪಡೆಯಿತು.ತಾರ ಆಟಗಾರ ವಿರಾಟ್ ಕೊಹ್ಲಿ(100) ಐಪಿಎಲ್ ನಲ್ಲಿ ತಮ್ಮ 6 ನೇ ಶತಕ ಸಿಡಿಸಿ ಗೆಲುವಿನ ಹಾದಿಯನ್ನು ಸುಗಮಗೊಳಿಸಿದರು. ಇದರ ಜೊತೆಯಲ್ಲಿ ನಾಯಕ ಫಾಫ್ ದುಪ್ಲೆಸಿಸ್(71)ಈ ಪಂದ್ಯದಲ್ಲೂ ಕೂಡ ತಮ್ಮ ಮಿಂಚಿನ ಅರ್ಧ ಶತಕ ದಾಖಲಿಸಿದರು.

ಇವರಿಬ್ಬರ ದಾಖಲೆಯ 172 ರನ್ ಗಳ ಜೊತೆಯಾಟದ ನೆರವಿನಿಂದ ಆರ್ ಸಿ ಬಿ ತಂಡ 8 ವಿಕೆಟ್ ಗಳ ಸುಲಭ ಜಯ ಸಾಧಿಸಿತು. ಇದರಿಂದ ಆರ್ ಸಿ ಬಿ ಯ ಪ್ಲೇ ಆಫ್ ನ ಕನಸು ಮತ್ತಷ್ಟು ಭದ್ರವಾಯಿತು.

ಭಾನುವಾರ ನಡೆಯುವ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ ಆರ್ ಸಿ ಬಿ ಪ್ಲೇ ಆಫ್ ಪ್ರವೇಶಿಸುವುದು ಬಹುತೇಕ ಖಚಿತವಾಗುತ್ತದೆ.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

4 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

7 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

19 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

20 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

22 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago