Categories: ಐಪಿಎಲ್

ಕಿಂಗ್ ಕೊಹ್ಲಿ ಶತಕ: ಆರ್ ಸಿ ಬಿ ಗೆ ಮಹತ್ವದ ಜಯ

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಸಿಡಿಸಿದ ಆಕರ್ಷಕ ಶತಕ ಹಾಗೂ ನಾಯಕ ಫಾಫ್ ಡುಪ್ಲೆಸಿಸ್ ಅರ್ಧ ಶತಕದ ನೆರವಿನಿಂದ ಸನ್ ರೈಸರ್ ಹೈದರಾಬಾದ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಆರ್ ಸಿಬಿ ಜಯ ಗಳಿಸಿತು.

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಆರ್ ಸಿ ಬಿ ತಂಡ ಉತ್ತಮ ಆರಂಭ ಪಡೆಯಿತು. ಬ್ರೆಸ್ ವೆಲ್ ರ ಸ್ಪಿನ್ ಮೋಡಿಗೆ ಅರಂಭಿಕರಿಬ್ಬರು ಬೇಗನೆ ಪೆವಿಲಿಯನ್ ಸೇರಿದರು.

ನಂತರ ಕ್ರೀಸ್ ಗೆ ಬಂದ ಹೆನ್ರಿಕ್ ಕ್ಲಾಸಿನ್(104) ಹಾಗೂ ಹ್ಯಾರಿ ಬ್ರೂಕ್(27) ಉತ್ತಮ ಜೊತೆಯಾಟ ಆಡಿದರು. ಆರ್ ಸಿ ಬಿ ಬೌಲರ್ ಗಳನ್ನು ಬೆಂಡೆತ್ತಿದ ಕ್ಲಾಸಿನ್ ತಮ್ಮ ಚೊಚ್ಚಲ ಐಪಿಎಲ್ ಶತಕ ಸಿಡಿಸಿ ಸಂಭ್ರಮಿಸಿದರು.

ಇವರ ಶತಕದ ನೆರವಿನಿಂದ 5 ವಿಕೆಟ್ ಗಳ ನಷ್ಟಕ್ಕೆ 186 ರನ್ ಗನನ್ನು ಗಳಿಸಲು ಸಾಧ್ಯವಾಯಿತು. ಆರ್ ಸಿ ಬಿ ಪರ ಬ್ರೇಸ್ ವೆಲ್ 2 ವಿಕೆಟ್ ಹಾಗೂ ಹರ್ಷಲ್, ಶಬಾಜ್, ಸಿರಾಜ್ ತಲಾ ಒಂದೊಂದು ವಿಕೆಟ್ ಪಡೆದರು.

187 ರನ್ ಗಳ ಗುರಿ ಬೆನ್ನಟ್ಟಿದ ಆರ್ ಸಿ ಬಿ ಉತ್ತಮ ಆರಂಭ ಪಡೆಯಿತು.ತಾರ ಆಟಗಾರ ವಿರಾಟ್ ಕೊಹ್ಲಿ(100) ಐಪಿಎಲ್ ನಲ್ಲಿ ತಮ್ಮ 6 ನೇ ಶತಕ ಸಿಡಿಸಿ ಗೆಲುವಿನ ಹಾದಿಯನ್ನು ಸುಗಮಗೊಳಿಸಿದರು. ಇದರ ಜೊತೆಯಲ್ಲಿ ನಾಯಕ ಫಾಫ್ ದುಪ್ಲೆಸಿಸ್(71)ಈ ಪಂದ್ಯದಲ್ಲೂ ಕೂಡ ತಮ್ಮ ಮಿಂಚಿನ ಅರ್ಧ ಶತಕ ದಾಖಲಿಸಿದರು.

ಇವರಿಬ್ಬರ ದಾಖಲೆಯ 172 ರನ್ ಗಳ ಜೊತೆಯಾಟದ ನೆರವಿನಿಂದ ಆರ್ ಸಿ ಬಿ ತಂಡ 8 ವಿಕೆಟ್ ಗಳ ಸುಲಭ ಜಯ ಸಾಧಿಸಿತು. ಇದರಿಂದ ಆರ್ ಸಿ ಬಿ ಯ ಪ್ಲೇ ಆಫ್ ನ ಕನಸು ಮತ್ತಷ್ಟು ಭದ್ರವಾಯಿತು.

ಭಾನುವಾರ ನಡೆಯುವ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ ಆರ್ ಸಿ ಬಿ ಪ್ಲೇ ಆಫ್ ಪ್ರವೇಶಿಸುವುದು ಬಹುತೇಕ ಖಚಿತವಾಗುತ್ತದೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

21 minutes ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

12 hours ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

18 hours ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

1 day ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

1 day ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago