ಕಿಚ್ಚ ಸುದೀಪ್ 47ನೇ ಸಿನಿಮಾಗೆ ಇವರೇ ನಾಯಕಿ..!

ಸ್ಯಾಂಡಲ್ ವುಡ್ ನ ಖ್ಯಾತ ನಟ ಕಿಚ್ಚ ಸುದೀಪ್‌ ಅವರ 47ನೇ ಸಿನಿಮಾಗೆ ಕೆಜಿಎಫ್‌ ಚಾಪ್ಟರ್‌ 1 ಹಾಗೂ ಚಾಪ್ಟರ್‌ 2  ಸಿನಿಮಾದ ರೀನಾ ಪಾತ್ರದಿಂದ ಮನೆಮಾತಾಗಿರುವ ನಟಿ ಶ್ರೀನಿಧಿ ಶೆಟ್ಟಿ ಅವರು ನಾಯಕಿಯಾಗುತ್ತಿದ್ದಾರೆ.

‘ನನ್ನ ಹೊಸ ಹೆಜ್ಜೆಗೆ ನಿಮ್ಮೆಲ್ಲರ ಆಶೀರ್ವಾದ ಬೇಕು. ನಾನು ಕಿಚ್ಚ ಸುದೀಪ್‌ ಅವರ ಜತೆ ತೆರೆ ಹಂಚಿಕೊಳ್ಳಲು ಉತ್ಸುಕಳಾಗಿದ್ದೇನೆ. ಇಂತಹ ಅದ್ಭುತ ಅವಕಾಶ ನೀಡಿದ ಸತ್ಯ ಜ್ಯೋತಿ ಹಾಗೂ ಚೇರನ್‌ ಅವರಿಗೆ ಧನ್ಯವಾದಗಳು’ ಎಂದು ಶ್ರೀನಿಧಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ತಮಿಳಿನ ಖ್ಯಾತ ಸಿನಿಮಾ ನಿರ್ಮಾಣ ಸಂಸ್ಥೆ ಸತ್ಯ ಜ್ಯೋತಿ ಪಿಕ್ಚರ್ಸ್‌, ಕಿಚ್ಚ ಸುದೀಪ್‌ ಅವರ 47ನೇ ಚಿತ್ರ ನಿರ್ಮಿಸುತ್ತಿದ್ದು, ಇದೀಗ ನಾಯಕಿಯನ್ನು ಘೋಷಣೆ ಮಾಡುವ ಮೂಲಕ ಶ್ರೀನಿಧಿ ಅವರನ್ನು ತಂಡಕ್ಕೆ ನಿರ್ಮಾಣ ಸಂಸ್ಥೆ ಸ್ವಾಗತಿಸಿದೆ. ಕಿಚ್ಚನ 47ನೇ ಚಿತ್ರವನ್ನು ಚೇರನ್‌ ನಿರ್ದೇಶನ ಮಾಡಲಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ತಯಾರಾಗುತ್ತಿದೆ ಎನ್ನಲಾಗಿದೆ.

Ramesh Babu

Journalist

Recent Posts

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

40 minutes ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

2 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

6 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

7 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

15 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

23 hours ago