ರಾತ್ರೋರಾತ್ರಿ ಕಿಡಿಗೇಡಿಗಳು ಗುಲಾಬಿ ತೋಟಕ್ಕೆ ಬೆಂಕಿ ಇಟ್ಟಿರುವ ಪರಿಣಾಮ ಇಡೀ ತೋಟ ಸುಟ್ಟು ಭಸ್ಮವಾಗಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಗ್ರಾಮದಲ್ಲಿ ನಡೆದಿದೆ.
ಬೂದಿಗೆರೆ ಗ್ರಾಮದ ಚಂದ್ರ ಮೋಹನ್ ಒಂದು ಎಕರೆಯಲ್ಲಿ ಸಾಲಸೋಲ ಮಾಡಿ ಗುಲಾಬಿ ತೋಟ ಮಾಡಿದ್ದರು. ಇನ್ನೇನು ಫಸಲು ಕೈ ಬರುವ ಸಮಯದಲ್ಲಿ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ಬೆಂಕಿಗೆ ತೋಟದಲ್ಲಿ ಗುಲಾಬಿ ಗಿಡಗಳು ಸಂಪೂರ್ಣವಾಗಿ ನಾಶ ಆಗಿವೆ. ಜೊತೆಗೆ ಗುಲಾಬಿ ತೋಟಕ್ಕೆ ಅಳವಡಿಸಿದ್ದ ಸುಮಾರು ಒಂದು ಲಕ್ಷ ಮೌಲ್ಯದ ಡ್ರಿಪ್ ಪೈಪ್ ಗಳು ಕೂಡ ನಾಶ ಆಗಿವೆ.
ಬೆಂಕಿ ಅವಘಡದಿಂದ ಅಂದಾಜು 2 ಲಕ್ಷ ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…