ಕಿಡಿಗೇಡಿಗಳ ಕೃತ್ಯಕ್ಕೆ ಸುಟ್ಟು ಭಸ್ಮವಾದ ರೇಷ್ಮೆ ಗೂಡು, ಜೋಳದ ಮೇವಿನ ಬಣವೆ: ತಾಲೂಕಿನಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದು ಬಿದ್ದಿದೆ: ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ: ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತಿಲ್ಲ: ಸಂತ್ರಸ್ತರ ಪರ ನಿಲ್ಲದ ಹಾಲಿ ಹಾಗೂ ಮಾಜಿ ಶಾಸಕರು- ಹರೀಶ್ ಗೌಡ ಆಕ್ರೋಶ

ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಕುಂಟೆ ಗ್ರಾಮದಲ್ಲಿ ಬಡತನದಲ್ಲೂ ಲಕ್ಷಾಂತರ ರೂ. ವ್ಯಯ ಮಾಡಿ ರೇಷ್ಮೆ ಗೂಡು ಸಾಕಿದ್ದ‌ ಬಡ ಕುಟುಂಬ. ಇನ್ನೇನು ಒಂದೆರೆಡು ದಿನದಲ್ಲಿ ರೇಷ್ಮೆ ಗೂಡನ್ನ ಮಾರುಕಟ್ಟೆಗೆ ಹಾಕುವಷ್ಟರಲ್ಲಿ, ರಾತ್ರೋರಾತ್ರಿ ರೇಷ್ಮೆ ಗೂಡು ಇದ್ದ ಮನೆ ಕಿಡಿಗೇಡಿಗಳ ಕೃತ್ಯಕ್ಕೆ ಸುಟ್ಟು ಸಂಪೂರ್ಣ ಭಸ್ಮವಾಗಿದೆ. ಅದೇರೀತಿ ಕಾಡುಕುಂಟೆ ಗ್ರಾಮದ ಘಟನೆ ಮಾಸುವ ಮುನ್ನವೇ ಕುಕ್ಕಲಹಳ್ಳಿ ಗ್ರಾಮದಲ್ಲಿ ಹಾಡಹಗಲೇ ಸುಮಾರು 8-10 ಲೋಡ್ ಜೋಳದ‌ ಮೇವಿನ ಬಣವೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಸುಟ್ಟು ಕರಕಲಾಗಿದೆ. ತಾಲೂಕಿನಲ್ಲಿ ಇಂತಹ ಕುಕೃತ್ಯಗಳು ಮರುಕಳಿಸುತ್ತಿವೆ‌. ಕಿಡಿಗೇಡಿಗಳನ್ನ ಪತ್ತೆ ಹಚ್ಚಿ ಇದುವರೆಗೂ ಕಾನೂನು ಶಿಕ್ಷೆಗೆ ಒಳಪಡಿಸಿಲ್ಲ. ಇದರ ಹಿಂದೆ ರಾಜಕೀಯ ಶಡ್ಯಂತ್ರ, ಒತ್ತಡ ಇರಬಹುದೇ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಅನುಮಾನ ವ್ಯಕ್ತಪಡಿಸಿದರು.

ಶನಿವಾರ ಘಟನಾ ಸ್ಥಳಗಳಿಗೆ ಭೇಟಿ ನೀಡಿ ನಷ್ಟಕ್ಕೆ ಒಳಗಾದ ರೈತರೊಂದಿಗೆ ಮಾತುಕತೆ ನಡೆಸಿ, ಸಮಾಧಾನಪಡಿಸುವ ಮೂಲಕ‌ ಧೈರ್ಯ ತುಂಬಿದರು. ನಂತರ ಪರಿಹಾರ ಧನವನ್ನ ನೀಡುವ ಭರವಸೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತಾಲೂಕಿಗೆ ರಾತ್ರಿ 7ಗಂಟೆಗೆ ಬಂದು ಟಾರ್ಚ್ ಹಾಕಿಕೊಂಡು ಕಾಟಾಚಾರಕ್ಕೆ ಬರ ಸಮೀಕ್ಷೆ ಮಾಡಿಕೊಂಡು ಹೋಗಿದ್ದಾರೆ. ಇಂತಹ ನೈಜ ಘಟನೆಗಳ‌ ಸ್ಥಳಗಳಿಗೆ ಬಂದು ಪರಿಶೀಲಿಸಿ ರೈತರಿಗೆ ಪರಿಹಾರ ಒದಹಿಸುವ ಕಾರ್ಯ ಮಾಡಬೇಕು ಎಂದರು.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದು ಬಿದ್ದಿದೆ. ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರ ಬಗ್ಗೆ ಹಾಲಿ ಹಾಗೂ ಮಾಜಿ ಶಾಸಕರು ತಲೆಕೆಡಿಸಿಕೊಳ್ಳುತ್ತಿಲ್ಲ. ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಿಡಿಗೇಡಿಗಳ ಕಾಟ ಹೆಚ್ಚಾಗಿದ್ದು, ಸಾವು ನೋವಿಗೆ ಕೊನೆಯೇ ಇಲ್ಲದಂತಾಗಿದೆ. ಸಣ್ಣ ಪುಟ್ಟ ಕಾರಣಕ್ಕೆ ಕೊಲೆ, ಹಲ್ಲೆ ನಡೆಯುತ್ತಿದ್ದು, ದುಷ್ಕರ್ಮಿಗಳು ಮೂಕ ಗೋವುಗಳು ತಿನ್ನುವ ಮೇವಿಗೆ ಬೇಕಂತಲೇ ಬೆಂಕಿ ಹಚ್ಚಿರುವುದು ಶೋಚನೀಯ ಸಂಗತಿ ಎಂದು ಹೇಳಿದರು.

ಸಂದರ್ಭದಲ್ಲಿ ಮುಖಂಡರಾದ ನಾರಾಯಣಪ್ಪ, ಶಾಂತಿನಗರ ಪ್ರವೀಣ್, ಶ್ರೀನಿವಾಸ್, ಅಜ್ಜಪ್ಪ, ಗಂಗಾಧರ್, ತಿಪ್ಪರಾಜು, ಲಕ್ಷ್ಮೀಕಾಂತ್ ಸೇರಿದಂತೆ ಮತ್ತಿತರರಿದ್ದರು.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

2 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

4 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

4 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

5 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

6 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

11 hours ago