ಕಿಡಿಗೇಡಿಗಳ ಕೃತ್ಯಕ್ಕೆ ಸುಟ್ಟು ಭಸ್ಮವಾದ ರೇಷ್ಮೆ ಗೂಡು, ಜೋಳದ ಮೇವಿನ ಬಣವೆ: ತಾಲೂಕಿನಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದು ಬಿದ್ದಿದೆ: ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ: ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತಿಲ್ಲ: ಸಂತ್ರಸ್ತರ ಪರ ನಿಲ್ಲದ ಹಾಲಿ ಹಾಗೂ ಮಾಜಿ ಶಾಸಕರು- ಹರೀಶ್ ಗೌಡ ಆಕ್ರೋಶ

ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಕುಂಟೆ ಗ್ರಾಮದಲ್ಲಿ ಬಡತನದಲ್ಲೂ ಲಕ್ಷಾಂತರ ರೂ. ವ್ಯಯ ಮಾಡಿ ರೇಷ್ಮೆ ಗೂಡು ಸಾಕಿದ್ದ‌ ಬಡ ಕುಟುಂಬ. ಇನ್ನೇನು ಒಂದೆರೆಡು ದಿನದಲ್ಲಿ ರೇಷ್ಮೆ ಗೂಡನ್ನ ಮಾರುಕಟ್ಟೆಗೆ ಹಾಕುವಷ್ಟರಲ್ಲಿ, ರಾತ್ರೋರಾತ್ರಿ ರೇಷ್ಮೆ ಗೂಡು ಇದ್ದ ಮನೆ ಕಿಡಿಗೇಡಿಗಳ ಕೃತ್ಯಕ್ಕೆ ಸುಟ್ಟು ಸಂಪೂರ್ಣ ಭಸ್ಮವಾಗಿದೆ. ಅದೇರೀತಿ ಕಾಡುಕುಂಟೆ ಗ್ರಾಮದ ಘಟನೆ ಮಾಸುವ ಮುನ್ನವೇ ಕುಕ್ಕಲಹಳ್ಳಿ ಗ್ರಾಮದಲ್ಲಿ ಹಾಡಹಗಲೇ ಸುಮಾರು 8-10 ಲೋಡ್ ಜೋಳದ‌ ಮೇವಿನ ಬಣವೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಸುಟ್ಟು ಕರಕಲಾಗಿದೆ. ತಾಲೂಕಿನಲ್ಲಿ ಇಂತಹ ಕುಕೃತ್ಯಗಳು ಮರುಕಳಿಸುತ್ತಿವೆ‌. ಕಿಡಿಗೇಡಿಗಳನ್ನ ಪತ್ತೆ ಹಚ್ಚಿ ಇದುವರೆಗೂ ಕಾನೂನು ಶಿಕ್ಷೆಗೆ ಒಳಪಡಿಸಿಲ್ಲ. ಇದರ ಹಿಂದೆ ರಾಜಕೀಯ ಶಡ್ಯಂತ್ರ, ಒತ್ತಡ ಇರಬಹುದೇ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಅನುಮಾನ ವ್ಯಕ್ತಪಡಿಸಿದರು.

ಶನಿವಾರ ಘಟನಾ ಸ್ಥಳಗಳಿಗೆ ಭೇಟಿ ನೀಡಿ ನಷ್ಟಕ್ಕೆ ಒಳಗಾದ ರೈತರೊಂದಿಗೆ ಮಾತುಕತೆ ನಡೆಸಿ, ಸಮಾಧಾನಪಡಿಸುವ ಮೂಲಕ‌ ಧೈರ್ಯ ತುಂಬಿದರು. ನಂತರ ಪರಿಹಾರ ಧನವನ್ನ ನೀಡುವ ಭರವಸೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತಾಲೂಕಿಗೆ ರಾತ್ರಿ 7ಗಂಟೆಗೆ ಬಂದು ಟಾರ್ಚ್ ಹಾಕಿಕೊಂಡು ಕಾಟಾಚಾರಕ್ಕೆ ಬರ ಸಮೀಕ್ಷೆ ಮಾಡಿಕೊಂಡು ಹೋಗಿದ್ದಾರೆ. ಇಂತಹ ನೈಜ ಘಟನೆಗಳ‌ ಸ್ಥಳಗಳಿಗೆ ಬಂದು ಪರಿಶೀಲಿಸಿ ರೈತರಿಗೆ ಪರಿಹಾರ ಒದಹಿಸುವ ಕಾರ್ಯ ಮಾಡಬೇಕು ಎಂದರು.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದು ಬಿದ್ದಿದೆ. ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರ ಬಗ್ಗೆ ಹಾಲಿ ಹಾಗೂ ಮಾಜಿ ಶಾಸಕರು ತಲೆಕೆಡಿಸಿಕೊಳ್ಳುತ್ತಿಲ್ಲ. ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಿಡಿಗೇಡಿಗಳ ಕಾಟ ಹೆಚ್ಚಾಗಿದ್ದು, ಸಾವು ನೋವಿಗೆ ಕೊನೆಯೇ ಇಲ್ಲದಂತಾಗಿದೆ. ಸಣ್ಣ ಪುಟ್ಟ ಕಾರಣಕ್ಕೆ ಕೊಲೆ, ಹಲ್ಲೆ ನಡೆಯುತ್ತಿದ್ದು, ದುಷ್ಕರ್ಮಿಗಳು ಮೂಕ ಗೋವುಗಳು ತಿನ್ನುವ ಮೇವಿಗೆ ಬೇಕಂತಲೇ ಬೆಂಕಿ ಹಚ್ಚಿರುವುದು ಶೋಚನೀಯ ಸಂಗತಿ ಎಂದು ಹೇಳಿದರು.

ಸಂದರ್ಭದಲ್ಲಿ ಮುಖಂಡರಾದ ನಾರಾಯಣಪ್ಪ, ಶಾಂತಿನಗರ ಪ್ರವೀಣ್, ಶ್ರೀನಿವಾಸ್, ಅಜ್ಜಪ್ಪ, ಗಂಗಾಧರ್, ತಿಪ್ಪರಾಜು, ಲಕ್ಷ್ಮೀಕಾಂತ್ ಸೇರಿದಂತೆ ಮತ್ತಿತರರಿದ್ದರು.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

9 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago