ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಕುಂಟೆ ಗ್ರಾಮದಲ್ಲಿ ಬಡತನದಲ್ಲೂ ಲಕ್ಷಾಂತರ ರೂ. ವ್ಯಯ ಮಾಡಿ ರೇಷ್ಮೆ ಗೂಡು ಸಾಕಿದ್ದ ಬಡ ಕುಟುಂಬ. ಇನ್ನೇನು ಒಂದೆರೆಡು ದಿನದಲ್ಲಿ ರೇಷ್ಮೆ ಗೂಡನ್ನ ಮಾರುಕಟ್ಟೆಗೆ ಹಾಕುವಷ್ಟರಲ್ಲಿ, ರಾತ್ರೋರಾತ್ರಿ ರೇಷ್ಮೆ ಗೂಡು ಇದ್ದ ಮನೆ ಕಿಡಿಗೇಡಿಗಳ ಕೃತ್ಯಕ್ಕೆ ಸುಟ್ಟು ಸಂಪೂರ್ಣ ಭಸ್ಮವಾಗಿದೆ. ಅದೇರೀತಿ ಕಾಡುಕುಂಟೆ ಗ್ರಾಮದ ಘಟನೆ ಮಾಸುವ ಮುನ್ನವೇ ಕುಕ್ಕಲಹಳ್ಳಿ ಗ್ರಾಮದಲ್ಲಿ ಹಾಡಹಗಲೇ ಸುಮಾರು 8-10 ಲೋಡ್ ಜೋಳದ ಮೇವಿನ ಬಣವೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಸುಟ್ಟು ಕರಕಲಾಗಿದೆ. ತಾಲೂಕಿನಲ್ಲಿ ಇಂತಹ ಕುಕೃತ್ಯಗಳು ಮರುಕಳಿಸುತ್ತಿವೆ. ಕಿಡಿಗೇಡಿಗಳನ್ನ ಪತ್ತೆ ಹಚ್ಚಿ ಇದುವರೆಗೂ ಕಾನೂನು ಶಿಕ್ಷೆಗೆ ಒಳಪಡಿಸಿಲ್ಲ. ಇದರ ಹಿಂದೆ ರಾಜಕೀಯ ಶಡ್ಯಂತ್ರ, ಒತ್ತಡ ಇರಬಹುದೇ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಅನುಮಾನ ವ್ಯಕ್ತಪಡಿಸಿದರು.
ಸಂದರ್ಭದಲ್ಲಿ ಮುಖಂಡರಾದ ನಾರಾಯಣಪ್ಪ, ಶಾಂತಿನಗರ ಪ್ರವೀಣ್, ಶ್ರೀನಿವಾಸ್, ಅಜ್ಜಪ್ಪ, ಗಂಗಾಧರ್, ತಿಪ್ಪರಾಜು, ಲಕ್ಷ್ಮೀಕಾಂತ್ ಸೇರಿದಂತೆ ಮತ್ತಿತರರಿದ್ದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…