ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಕುಂಟೆ ಗ್ರಾಮದಲ್ಲಿ ಬಡತನದಲ್ಲೂ ಲಕ್ಷಾಂತರ ರೂ. ವ್ಯಯ ಮಾಡಿ ರೇಷ್ಮೆ ಗೂಡು ಸಾಕಿದ್ದ ಬಡ ಕುಟುಂಬ. ಇನ್ನೇನು ಒಂದೆರೆಡು ದಿನದಲ್ಲಿ ರೇಷ್ಮೆ ಗೂಡನ್ನ ಮಾರುಕಟ್ಟೆಗೆ ಹಾಕುವಷ್ಟರಲ್ಲಿ, ರಾತ್ರೋರಾತ್ರಿ ರೇಷ್ಮೆ ಗೂಡು ಇದ್ದ ಮನೆ ಕಿಡಿಗೇಡಿಗಳ ಕೃತ್ಯಕ್ಕೆ ಸುಟ್ಟು ಸಂಪೂರ್ಣ ಭಸ್ಮವಾಗಿದೆ. ಅದೇರೀತಿ ಕಾಡುಕುಂಟೆ ಗ್ರಾಮದ ಘಟನೆ ಮಾಸುವ ಮುನ್ನವೇ ಕುಕ್ಕಲಹಳ್ಳಿ ಗ್ರಾಮದಲ್ಲಿ ಹಾಡಹಗಲೇ ಸುಮಾರು 8-10 ಲೋಡ್ ಜೋಳದ ಮೇವಿನ ಬಣವೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಸುಟ್ಟು ಕರಕಲಾಗಿದೆ. ತಾಲೂಕಿನಲ್ಲಿ ಇಂತಹ ಕುಕೃತ್ಯಗಳು ಮರುಕಳಿಸುತ್ತಿವೆ. ಕಿಡಿಗೇಡಿಗಳನ್ನ ಪತ್ತೆ ಹಚ್ಚಿ ಇದುವರೆಗೂ ಕಾನೂನು ಶಿಕ್ಷೆಗೆ ಒಳಪಡಿಸಿಲ್ಲ. ಇದರ ಹಿಂದೆ ರಾಜಕೀಯ ಶಡ್ಯಂತ್ರ, ಒತ್ತಡ ಇರಬಹುದೇ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಅನುಮಾನ ವ್ಯಕ್ತಪಡಿಸಿದರು.
ಸಂದರ್ಭದಲ್ಲಿ ಮುಖಂಡರಾದ ನಾರಾಯಣಪ್ಪ, ಶಾಂತಿನಗರ ಪ್ರವೀಣ್, ಶ್ರೀನಿವಾಸ್, ಅಜ್ಜಪ್ಪ, ಗಂಗಾಧರ್, ತಿಪ್ಪರಾಜು, ಲಕ್ಷ್ಮೀಕಾಂತ್ ಸೇರಿದಂತೆ ಮತ್ತಿತರರಿದ್ದರು.
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…
Das Schreiben einer Facharbeit stellt für viele Schüler und Studenten eine große Herausforderung dar. Der…
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…