ಕಿಡಿಗೇಡಿಗಳ ಕೃತ್ಯಕ್ಕೆ ಸುಟ್ಟು ಭಸ್ಮವಾದ ರೇಷ್ಮೆ ಗೂಡು, ಜೋಳದ ಮೇವಿನ ಬಣವೆ: ತಾಲೂಕಿನಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದು ಬಿದ್ದಿದೆ: ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ: ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತಿಲ್ಲ: ಸಂತ್ರಸ್ತರ ಪರ ನಿಲ್ಲದ ಹಾಲಿ ಹಾಗೂ ಮಾಜಿ ಶಾಸಕರು- ಹರೀಶ್ ಗೌಡ ಆಕ್ರೋಶ

ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಕುಂಟೆ ಗ್ರಾಮದಲ್ಲಿ ಬಡತನದಲ್ಲೂ ಲಕ್ಷಾಂತರ ರೂ. ವ್ಯಯ ಮಾಡಿ ರೇಷ್ಮೆ ಗೂಡು ಸಾಕಿದ್ದ‌ ಬಡ ಕುಟುಂಬ. ಇನ್ನೇನು ಒಂದೆರೆಡು ದಿನದಲ್ಲಿ ರೇಷ್ಮೆ ಗೂಡನ್ನ ಮಾರುಕಟ್ಟೆಗೆ ಹಾಕುವಷ್ಟರಲ್ಲಿ, ರಾತ್ರೋರಾತ್ರಿ ರೇಷ್ಮೆ ಗೂಡು ಇದ್ದ ಮನೆ ಕಿಡಿಗೇಡಿಗಳ ಕೃತ್ಯಕ್ಕೆ ಸುಟ್ಟು ಸಂಪೂರ್ಣ ಭಸ್ಮವಾಗಿದೆ. ಅದೇರೀತಿ ಕಾಡುಕುಂಟೆ ಗ್ರಾಮದ ಘಟನೆ ಮಾಸುವ ಮುನ್ನವೇ ಕುಕ್ಕಲಹಳ್ಳಿ ಗ್ರಾಮದಲ್ಲಿ ಹಾಡಹಗಲೇ ಸುಮಾರು 8-10 ಲೋಡ್ ಜೋಳದ‌ ಮೇವಿನ ಬಣವೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಸುಟ್ಟು ಕರಕಲಾಗಿದೆ. ತಾಲೂಕಿನಲ್ಲಿ ಇಂತಹ ಕುಕೃತ್ಯಗಳು ಮರುಕಳಿಸುತ್ತಿವೆ‌. ಕಿಡಿಗೇಡಿಗಳನ್ನ ಪತ್ತೆ ಹಚ್ಚಿ ಇದುವರೆಗೂ ಕಾನೂನು ಶಿಕ್ಷೆಗೆ ಒಳಪಡಿಸಿಲ್ಲ. ಇದರ ಹಿಂದೆ ರಾಜಕೀಯ ಶಡ್ಯಂತ್ರ, ಒತ್ತಡ ಇರಬಹುದೇ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಅನುಮಾನ ವ್ಯಕ್ತಪಡಿಸಿದರು.

ಶನಿವಾರ ಘಟನಾ ಸ್ಥಳಗಳಿಗೆ ಭೇಟಿ ನೀಡಿ ನಷ್ಟಕ್ಕೆ ಒಳಗಾದ ರೈತರೊಂದಿಗೆ ಮಾತುಕತೆ ನಡೆಸಿ, ಸಮಾಧಾನಪಡಿಸುವ ಮೂಲಕ‌ ಧೈರ್ಯ ತುಂಬಿದರು. ನಂತರ ಪರಿಹಾರ ಧನವನ್ನ ನೀಡುವ ಭರವಸೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತಾಲೂಕಿಗೆ ರಾತ್ರಿ 7ಗಂಟೆಗೆ ಬಂದು ಟಾರ್ಚ್ ಹಾಕಿಕೊಂಡು ಕಾಟಾಚಾರಕ್ಕೆ ಬರ ಸಮೀಕ್ಷೆ ಮಾಡಿಕೊಂಡು ಹೋಗಿದ್ದಾರೆ. ಇಂತಹ ನೈಜ ಘಟನೆಗಳ‌ ಸ್ಥಳಗಳಿಗೆ ಬಂದು ಪರಿಶೀಲಿಸಿ ರೈತರಿಗೆ ಪರಿಹಾರ ಒದಹಿಸುವ ಕಾರ್ಯ ಮಾಡಬೇಕು ಎಂದರು.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದು ಬಿದ್ದಿದೆ. ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರ ಬಗ್ಗೆ ಹಾಲಿ ಹಾಗೂ ಮಾಜಿ ಶಾಸಕರು ತಲೆಕೆಡಿಸಿಕೊಳ್ಳುತ್ತಿಲ್ಲ. ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಿಡಿಗೇಡಿಗಳ ಕಾಟ ಹೆಚ್ಚಾಗಿದ್ದು, ಸಾವು ನೋವಿಗೆ ಕೊನೆಯೇ ಇಲ್ಲದಂತಾಗಿದೆ. ಸಣ್ಣ ಪುಟ್ಟ ಕಾರಣಕ್ಕೆ ಕೊಲೆ, ಹಲ್ಲೆ ನಡೆಯುತ್ತಿದ್ದು, ದುಷ್ಕರ್ಮಿಗಳು ಮೂಕ ಗೋವುಗಳು ತಿನ್ನುವ ಮೇವಿಗೆ ಬೇಕಂತಲೇ ಬೆಂಕಿ ಹಚ್ಚಿರುವುದು ಶೋಚನೀಯ ಸಂಗತಿ ಎಂದು ಹೇಳಿದರು.

ಸಂದರ್ಭದಲ್ಲಿ ಮುಖಂಡರಾದ ನಾರಾಯಣಪ್ಪ, ಶಾಂತಿನಗರ ಪ್ರವೀಣ್, ಶ್ರೀನಿವಾಸ್, ಅಜ್ಜಪ್ಪ, ಗಂಗಾಧರ್, ತಿಪ್ಪರಾಜು, ಲಕ್ಷ್ಮೀಕಾಂತ್ ಸೇರಿದಂತೆ ಮತ್ತಿತರರಿದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

23 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago