ಕಿಡಿಗೇಡಿಗಳ ಕೃತ್ಯಕ್ಕೆ ಹೂವಿನ ಬೆಳೆಗೆ ಹಾಕಿದ್ದ ಡ್ರಿಪ್ ಪೈಪ್‌, ಸೇವಂತಿ ಹಾಗೂ ಬಟನ್ಸ್ ಸಸಿ ನಾಶ: ಸಂಕಷ್ಟಕ್ಕೀಡಾದ ರೈತ

ಹೂವಿನ ಬೆಳೆಗೆ ಅಳವಡಿಸಿದ್ದ ಡ್ರಿಪ್ ಪೈಪ್‌ ಹಾಗೂ ಸೇವಂತಿ ಹೂವಿನ ಸಸಿಗಳನ್ನು ನಾಶಪಡಿಸಿರುವ ಘಟನೆ ತಾಲೂಕಿನ ಕೆಳಗಿನಜೂಗಾನಹಳ್ಳಿ‌ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.

ಗ್ರಾಮದ ರೈತ ಗಂಗಪ್ಪ ಅವರು ತಮ್ಮ ಜಮೀನಿನಲ್ಲಿ ತಿಂಗಳ ಹಿಂದೆ ಸಾವಿರಾರು ರೂಪಾಯಿ‌ ಖರ್ಚು ಮಾಡಿ ಸೇವಂತಿ ಹಾಗೂ ಬಟನ್ಸ್ ಹೂ‌ವಿನ ಸಸಿಗಳನ್ನು ನಾಟಿ ಮಾಡಿದ್ದರು.

ಗ್ರಾಮದಿಂದ ಸುಮಾರು ಅರ್ಧ ಕಿ.ಮೀ‌ ದೂರದಲ್ಲಿ ಗಂಗಪ್ಪ ಅವರ ತೋಟವಿದೆ. ಈ ಭಾಗದಲ್ಲಿ ಚಿರತೆ ಕಾಟಕ್ಕೆ ಹೆದರಿ ರಾತ್ರಿ ಮನೆಯಿಂದ ತಡವಾಗಿ ತೋಟದ ಬಳಿ ಬಂದಿದ್ದಾರೆ. ಬೆಳಿಗ್ಗೆ ಎದ್ದು ನೋಡಿದಾಗ ಕಿಡಿಗೇಡಿಗಳು ಬೇಕಂತಲೇ ಹೂವಿನ ಬೆಳೆಗೆ ಹಾಕಿದ್ದ ಡ್ರಿಪ್ ಪೈಪ್‌ ಗಳನ್ನು‌ ಅಲ್ಲಲ್ಲಿ ಹೊಡೆದು ಹಾಕಿದ್ದು, ಸೇವಂತಿ ಮತ್ತು ಬಟನ್ಸ್ ಸಸಿಗಳನ್ನು ನಾಶಪಡಿಸಿದ್ದಾರೆ.

ರಾತ್ರಿ ಯಾರೂ ಇಲ್ಲದ ಸಮಯದಲ್ಲಿ ದುಷ್ಕರ್ಮಿಗಳು ಹೂವಿನ ಬೆಳೆ ಹಾಗೂ ಡ್ರಿಪ್ ಪೈಪ್ ಗಳನ್ನು ಹೊಡೆದು ಹಾಕಿದ್ದಾರೆ. ಬೆಳಿಗ್ಗೆ ಕಿಡಿಗೇಡಿಗಳ ಕೃತ್ಯ ಬೆಳಕಿಗೆ ಬಂದಿದೆ. ಒಂದು ಸಸಿಗೆ ಮೂರು ರೂಪಾಯಿ ಕೊಟ್ಟು ತಂದಿದ್ದೆ. ಈಗ ಕಿಡಿಗೇಡಿಗಳ ಕೃತ್ಯಕ್ಕೆ ಎಲ್ಲವೂ ನಾಶವಾಗಿದೆ. ಈಗ ಹೊಸದಾಗಿ ಡ್ರಿಪ್ ಪೈಪ್ ಅಳವಡಿಸಲು ಆಗುವುದಿಲ್ಲ, ಬೇಸಿಗೆ ಕಾಲದಲ್ಲಿ ಸಸಿಗಳಿಗೆ ನೀರು ಹಾಯಿಸದಿದ್ದರೆ ಬೆಳೆ ನಾಶ ಆಗುತ್ತದೆ. ಇದರಿಂದ ನನಗೆ ಸಾಕಷ್ಟು ನಷ್ಟವಾಗುವ ಸಂಭವವಿದೆ ಎಂದು ರೈತ ಗಂಗಪ್ಪ ಅಳಲು ತೋಡಿಕೊಂಡರು.

ಇವರ ತೋಟದಲ್ಲೇ ಇತ್ತೀಚೆಗೆ ಪಂಪ್, ಮೋಟರ್ ಹಾಗೂ ಕೇಬಲ್ ಕಳವಾಗಿತ್ತು. ಇದೀಗ ಡ್ರಿಪ್ ಪೈಪ್, ಸೇವಂತಿ ಸಸಿ ನಾಶ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಜೊತೆಗೆ ಕಿಡಿಗೇಡಿಗಳ ಈ ಕೃತ್ಯದಿಂದಾಗಿ ತೋಟದಲ್ಲಿ ಉಳಿದುಕೊಳ್ಳಲು ಭೀತಿ ಎದುರಾಗಿದೆ. ನಮಗೆ ನ್ಯಾಯ‌ ಮತ್ತು ರಕ್ಷಣೆ ಬೇಕಾಗಿದೆ ಎಂದು ಅಲವತ್ತುಕೊಂಡರು.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

8 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

8 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

10 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

19 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

21 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago