ಕಿಡಿಗೇಡಿಗಳ ಕೃತ್ಯಕ್ಕೆ ಹೂವಿನ ಬೆಳೆಗೆ ಹಾಕಿದ್ದ ಡ್ರಿಪ್ ಪೈಪ್‌, ಸೇವಂತಿ ಹಾಗೂ ಬಟನ್ಸ್ ಸಸಿ ನಾಶ: ಸಂಕಷ್ಟಕ್ಕೀಡಾದ ರೈತ

ಹೂವಿನ ಬೆಳೆಗೆ ಅಳವಡಿಸಿದ್ದ ಡ್ರಿಪ್ ಪೈಪ್‌ ಹಾಗೂ ಸೇವಂತಿ ಹೂವಿನ ಸಸಿಗಳನ್ನು ನಾಶಪಡಿಸಿರುವ ಘಟನೆ ತಾಲೂಕಿನ ಕೆಳಗಿನಜೂಗಾನಹಳ್ಳಿ‌ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.

ಗ್ರಾಮದ ರೈತ ಗಂಗಪ್ಪ ಅವರು ತಮ್ಮ ಜಮೀನಿನಲ್ಲಿ ತಿಂಗಳ ಹಿಂದೆ ಸಾವಿರಾರು ರೂಪಾಯಿ‌ ಖರ್ಚು ಮಾಡಿ ಸೇವಂತಿ ಹಾಗೂ ಬಟನ್ಸ್ ಹೂ‌ವಿನ ಸಸಿಗಳನ್ನು ನಾಟಿ ಮಾಡಿದ್ದರು.

ಗ್ರಾಮದಿಂದ ಸುಮಾರು ಅರ್ಧ ಕಿ.ಮೀ‌ ದೂರದಲ್ಲಿ ಗಂಗಪ್ಪ ಅವರ ತೋಟವಿದೆ. ಈ ಭಾಗದಲ್ಲಿ ಚಿರತೆ ಕಾಟಕ್ಕೆ ಹೆದರಿ ರಾತ್ರಿ ಮನೆಯಿಂದ ತಡವಾಗಿ ತೋಟದ ಬಳಿ ಬಂದಿದ್ದಾರೆ. ಬೆಳಿಗ್ಗೆ ಎದ್ದು ನೋಡಿದಾಗ ಕಿಡಿಗೇಡಿಗಳು ಬೇಕಂತಲೇ ಹೂವಿನ ಬೆಳೆಗೆ ಹಾಕಿದ್ದ ಡ್ರಿಪ್ ಪೈಪ್‌ ಗಳನ್ನು‌ ಅಲ್ಲಲ್ಲಿ ಹೊಡೆದು ಹಾಕಿದ್ದು, ಸೇವಂತಿ ಮತ್ತು ಬಟನ್ಸ್ ಸಸಿಗಳನ್ನು ನಾಶಪಡಿಸಿದ್ದಾರೆ.

ರಾತ್ರಿ ಯಾರೂ ಇಲ್ಲದ ಸಮಯದಲ್ಲಿ ದುಷ್ಕರ್ಮಿಗಳು ಹೂವಿನ ಬೆಳೆ ಹಾಗೂ ಡ್ರಿಪ್ ಪೈಪ್ ಗಳನ್ನು ಹೊಡೆದು ಹಾಕಿದ್ದಾರೆ. ಬೆಳಿಗ್ಗೆ ಕಿಡಿಗೇಡಿಗಳ ಕೃತ್ಯ ಬೆಳಕಿಗೆ ಬಂದಿದೆ. ಒಂದು ಸಸಿಗೆ ಮೂರು ರೂಪಾಯಿ ಕೊಟ್ಟು ತಂದಿದ್ದೆ. ಈಗ ಕಿಡಿಗೇಡಿಗಳ ಕೃತ್ಯಕ್ಕೆ ಎಲ್ಲವೂ ನಾಶವಾಗಿದೆ. ಈಗ ಹೊಸದಾಗಿ ಡ್ರಿಪ್ ಪೈಪ್ ಅಳವಡಿಸಲು ಆಗುವುದಿಲ್ಲ, ಬೇಸಿಗೆ ಕಾಲದಲ್ಲಿ ಸಸಿಗಳಿಗೆ ನೀರು ಹಾಯಿಸದಿದ್ದರೆ ಬೆಳೆ ನಾಶ ಆಗುತ್ತದೆ. ಇದರಿಂದ ನನಗೆ ಸಾಕಷ್ಟು ನಷ್ಟವಾಗುವ ಸಂಭವವಿದೆ ಎಂದು ರೈತ ಗಂಗಪ್ಪ ಅಳಲು ತೋಡಿಕೊಂಡರು.

ಇವರ ತೋಟದಲ್ಲೇ ಇತ್ತೀಚೆಗೆ ಪಂಪ್, ಮೋಟರ್ ಹಾಗೂ ಕೇಬಲ್ ಕಳವಾಗಿತ್ತು. ಇದೀಗ ಡ್ರಿಪ್ ಪೈಪ್, ಸೇವಂತಿ ಸಸಿ ನಾಶ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಜೊತೆಗೆ ಕಿಡಿಗೇಡಿಗಳ ಈ ಕೃತ್ಯದಿಂದಾಗಿ ತೋಟದಲ್ಲಿ ಉಳಿದುಕೊಳ್ಳಲು ಭೀತಿ ಎದುರಾಗಿದೆ. ನಮಗೆ ನ್ಯಾಯ‌ ಮತ್ತು ರಕ್ಷಣೆ ಬೇಕಾಗಿದೆ ಎಂದು ಅಲವತ್ತುಕೊಂಡರು.

Ramesh Babu

Journalist

Recent Posts

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

2 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

10 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

15 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

18 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

19 hours ago

ಕೆ.ಎಚ್.ಎಂ. ಯೂತ್ ಕಾಂಗ್ರೆಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ತೂಬಗೆರೆ ಹೋಬಳಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ  ನರಸಿಂಹ ಮೂರ್ತಿ ಹೆಚ್…

19 hours ago