ಕಿಡಿಗೇಡಿಗಳ ಕೃತ್ಯಕ್ಕೆ ಹೂವಿನ ಬೆಳೆಗೆ ಹಾಕಿದ್ದ ಡ್ರಿಪ್ ಪೈಪ್‌, ಸೇವಂತಿ ಹಾಗೂ ಬಟನ್ಸ್ ಸಸಿ ನಾಶ: ಸಂಕಷ್ಟಕ್ಕೀಡಾದ ರೈತ

ಹೂವಿನ ಬೆಳೆಗೆ ಅಳವಡಿಸಿದ್ದ ಡ್ರಿಪ್ ಪೈಪ್‌ ಹಾಗೂ ಸೇವಂತಿ ಹೂವಿನ ಸಸಿಗಳನ್ನು ನಾಶಪಡಿಸಿರುವ ಘಟನೆ ತಾಲೂಕಿನ ಕೆಳಗಿನಜೂಗಾನಹಳ್ಳಿ‌ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.

ಗ್ರಾಮದ ರೈತ ಗಂಗಪ್ಪ ಅವರು ತಮ್ಮ ಜಮೀನಿನಲ್ಲಿ ತಿಂಗಳ ಹಿಂದೆ ಸಾವಿರಾರು ರೂಪಾಯಿ‌ ಖರ್ಚು ಮಾಡಿ ಸೇವಂತಿ ಹಾಗೂ ಬಟನ್ಸ್ ಹೂ‌ವಿನ ಸಸಿಗಳನ್ನು ನಾಟಿ ಮಾಡಿದ್ದರು.

ಗ್ರಾಮದಿಂದ ಸುಮಾರು ಅರ್ಧ ಕಿ.ಮೀ‌ ದೂರದಲ್ಲಿ ಗಂಗಪ್ಪ ಅವರ ತೋಟವಿದೆ. ಈ ಭಾಗದಲ್ಲಿ ಚಿರತೆ ಕಾಟಕ್ಕೆ ಹೆದರಿ ರಾತ್ರಿ ಮನೆಯಿಂದ ತಡವಾಗಿ ತೋಟದ ಬಳಿ ಬಂದಿದ್ದಾರೆ. ಬೆಳಿಗ್ಗೆ ಎದ್ದು ನೋಡಿದಾಗ ಕಿಡಿಗೇಡಿಗಳು ಬೇಕಂತಲೇ ಹೂವಿನ ಬೆಳೆಗೆ ಹಾಕಿದ್ದ ಡ್ರಿಪ್ ಪೈಪ್‌ ಗಳನ್ನು‌ ಅಲ್ಲಲ್ಲಿ ಹೊಡೆದು ಹಾಕಿದ್ದು, ಸೇವಂತಿ ಮತ್ತು ಬಟನ್ಸ್ ಸಸಿಗಳನ್ನು ನಾಶಪಡಿಸಿದ್ದಾರೆ.

ರಾತ್ರಿ ಯಾರೂ ಇಲ್ಲದ ಸಮಯದಲ್ಲಿ ದುಷ್ಕರ್ಮಿಗಳು ಹೂವಿನ ಬೆಳೆ ಹಾಗೂ ಡ್ರಿಪ್ ಪೈಪ್ ಗಳನ್ನು ಹೊಡೆದು ಹಾಕಿದ್ದಾರೆ. ಬೆಳಿಗ್ಗೆ ಕಿಡಿಗೇಡಿಗಳ ಕೃತ್ಯ ಬೆಳಕಿಗೆ ಬಂದಿದೆ. ಒಂದು ಸಸಿಗೆ ಮೂರು ರೂಪಾಯಿ ಕೊಟ್ಟು ತಂದಿದ್ದೆ. ಈಗ ಕಿಡಿಗೇಡಿಗಳ ಕೃತ್ಯಕ್ಕೆ ಎಲ್ಲವೂ ನಾಶವಾಗಿದೆ. ಈಗ ಹೊಸದಾಗಿ ಡ್ರಿಪ್ ಪೈಪ್ ಅಳವಡಿಸಲು ಆಗುವುದಿಲ್ಲ, ಬೇಸಿಗೆ ಕಾಲದಲ್ಲಿ ಸಸಿಗಳಿಗೆ ನೀರು ಹಾಯಿಸದಿದ್ದರೆ ಬೆಳೆ ನಾಶ ಆಗುತ್ತದೆ. ಇದರಿಂದ ನನಗೆ ಸಾಕಷ್ಟು ನಷ್ಟವಾಗುವ ಸಂಭವವಿದೆ ಎಂದು ರೈತ ಗಂಗಪ್ಪ ಅಳಲು ತೋಡಿಕೊಂಡರು.

ಇವರ ತೋಟದಲ್ಲೇ ಇತ್ತೀಚೆಗೆ ಪಂಪ್, ಮೋಟರ್ ಹಾಗೂ ಕೇಬಲ್ ಕಳವಾಗಿತ್ತು. ಇದೀಗ ಡ್ರಿಪ್ ಪೈಪ್, ಸೇವಂತಿ ಸಸಿ ನಾಶ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಜೊತೆಗೆ ಕಿಡಿಗೇಡಿಗಳ ಈ ಕೃತ್ಯದಿಂದಾಗಿ ತೋಟದಲ್ಲಿ ಉಳಿದುಕೊಳ್ಳಲು ಭೀತಿ ಎದುರಾಗಿದೆ. ನಮಗೆ ನ್ಯಾಯ‌ ಮತ್ತು ರಕ್ಷಣೆ ಬೇಕಾಗಿದೆ ಎಂದು ಅಲವತ್ತುಕೊಂಡರು.

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

7 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

10 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

11 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

21 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

2 days ago