ಕಿಡಿಗೇಡಿಗಳ ಕೃತ್ಯಕ್ಕೆ ಹೂವಿನ ಬೆಳೆಗೆ ಹಾಕಿದ್ದ ಡ್ರಿಪ್ ಪೈಪ್‌, ಸೇವಂತಿ ಹಾಗೂ ಬಟನ್ಸ್ ಸಸಿ ನಾಶ: ಸಂಕಷ್ಟಕ್ಕೀಡಾದ ರೈತ

ಹೂವಿನ ಬೆಳೆಗೆ ಅಳವಡಿಸಿದ್ದ ಡ್ರಿಪ್ ಪೈಪ್‌ ಹಾಗೂ ಸೇವಂತಿ ಹೂವಿನ ಸಸಿಗಳನ್ನು ನಾಶಪಡಿಸಿರುವ ಘಟನೆ ತಾಲೂಕಿನ ಕೆಳಗಿನಜೂಗಾನಹಳ್ಳಿ‌ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.

ಗ್ರಾಮದ ರೈತ ಗಂಗಪ್ಪ ಅವರು ತಮ್ಮ ಜಮೀನಿನಲ್ಲಿ ತಿಂಗಳ ಹಿಂದೆ ಸಾವಿರಾರು ರೂಪಾಯಿ‌ ಖರ್ಚು ಮಾಡಿ ಸೇವಂತಿ ಹಾಗೂ ಬಟನ್ಸ್ ಹೂ‌ವಿನ ಸಸಿಗಳನ್ನು ನಾಟಿ ಮಾಡಿದ್ದರು.

ಗ್ರಾಮದಿಂದ ಸುಮಾರು ಅರ್ಧ ಕಿ.ಮೀ‌ ದೂರದಲ್ಲಿ ಗಂಗಪ್ಪ ಅವರ ತೋಟವಿದೆ. ಈ ಭಾಗದಲ್ಲಿ ಚಿರತೆ ಕಾಟಕ್ಕೆ ಹೆದರಿ ರಾತ್ರಿ ಮನೆಯಿಂದ ತಡವಾಗಿ ತೋಟದ ಬಳಿ ಬಂದಿದ್ದಾರೆ. ಬೆಳಿಗ್ಗೆ ಎದ್ದು ನೋಡಿದಾಗ ಕಿಡಿಗೇಡಿಗಳು ಬೇಕಂತಲೇ ಹೂವಿನ ಬೆಳೆಗೆ ಹಾಕಿದ್ದ ಡ್ರಿಪ್ ಪೈಪ್‌ ಗಳನ್ನು‌ ಅಲ್ಲಲ್ಲಿ ಹೊಡೆದು ಹಾಕಿದ್ದು, ಸೇವಂತಿ ಮತ್ತು ಬಟನ್ಸ್ ಸಸಿಗಳನ್ನು ನಾಶಪಡಿಸಿದ್ದಾರೆ.

ರಾತ್ರಿ ಯಾರೂ ಇಲ್ಲದ ಸಮಯದಲ್ಲಿ ದುಷ್ಕರ್ಮಿಗಳು ಹೂವಿನ ಬೆಳೆ ಹಾಗೂ ಡ್ರಿಪ್ ಪೈಪ್ ಗಳನ್ನು ಹೊಡೆದು ಹಾಕಿದ್ದಾರೆ. ಬೆಳಿಗ್ಗೆ ಕಿಡಿಗೇಡಿಗಳ ಕೃತ್ಯ ಬೆಳಕಿಗೆ ಬಂದಿದೆ. ಒಂದು ಸಸಿಗೆ ಮೂರು ರೂಪಾಯಿ ಕೊಟ್ಟು ತಂದಿದ್ದೆ. ಈಗ ಕಿಡಿಗೇಡಿಗಳ ಕೃತ್ಯಕ್ಕೆ ಎಲ್ಲವೂ ನಾಶವಾಗಿದೆ. ಈಗ ಹೊಸದಾಗಿ ಡ್ರಿಪ್ ಪೈಪ್ ಅಳವಡಿಸಲು ಆಗುವುದಿಲ್ಲ, ಬೇಸಿಗೆ ಕಾಲದಲ್ಲಿ ಸಸಿಗಳಿಗೆ ನೀರು ಹಾಯಿಸದಿದ್ದರೆ ಬೆಳೆ ನಾಶ ಆಗುತ್ತದೆ. ಇದರಿಂದ ನನಗೆ ಸಾಕಷ್ಟು ನಷ್ಟವಾಗುವ ಸಂಭವವಿದೆ ಎಂದು ರೈತ ಗಂಗಪ್ಪ ಅಳಲು ತೋಡಿಕೊಂಡರು.

ಇವರ ತೋಟದಲ್ಲೇ ಇತ್ತೀಚೆಗೆ ಪಂಪ್, ಮೋಟರ್ ಹಾಗೂ ಕೇಬಲ್ ಕಳವಾಗಿತ್ತು. ಇದೀಗ ಡ್ರಿಪ್ ಪೈಪ್, ಸೇವಂತಿ ಸಸಿ ನಾಶ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಜೊತೆಗೆ ಕಿಡಿಗೇಡಿಗಳ ಈ ಕೃತ್ಯದಿಂದಾಗಿ ತೋಟದಲ್ಲಿ ಉಳಿದುಕೊಳ್ಳಲು ಭೀತಿ ಎದುರಾಗಿದೆ. ನಮಗೆ ನ್ಯಾಯ‌ ಮತ್ತು ರಕ್ಷಣೆ ಬೇಕಾಗಿದೆ ಎಂದು ಅಲವತ್ತುಕೊಂಡರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

10 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

11 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

11 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

11 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

13 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

17 hours ago