ಕಿಡಿಗೇಡಿಗಳ ಕೃತ್ಯಕ್ಕೆ ಹೂವಿನ ಬೆಳೆಗೆ ಹಾಕಿದ್ದ ಡ್ರಿಪ್ ಪೈಪ್‌, ಸೇವಂತಿ ಹಾಗೂ ಬಟನ್ಸ್ ಸಸಿ ನಾಶ: ಸಂಕಷ್ಟಕ್ಕೀಡಾದ ರೈತ

ಹೂವಿನ ಬೆಳೆಗೆ ಅಳವಡಿಸಿದ್ದ ಡ್ರಿಪ್ ಪೈಪ್‌ ಹಾಗೂ ಸೇವಂತಿ ಹೂವಿನ ಸಸಿಗಳನ್ನು ನಾಶಪಡಿಸಿರುವ ಘಟನೆ ತಾಲೂಕಿನ ಕೆಳಗಿನಜೂಗಾನಹಳ್ಳಿ‌ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.

ಗ್ರಾಮದ ರೈತ ಗಂಗಪ್ಪ ಅವರು ತಮ್ಮ ಜಮೀನಿನಲ್ಲಿ ತಿಂಗಳ ಹಿಂದೆ ಸಾವಿರಾರು ರೂಪಾಯಿ‌ ಖರ್ಚು ಮಾಡಿ ಸೇವಂತಿ ಹಾಗೂ ಬಟನ್ಸ್ ಹೂ‌ವಿನ ಸಸಿಗಳನ್ನು ನಾಟಿ ಮಾಡಿದ್ದರು.

ಗ್ರಾಮದಿಂದ ಸುಮಾರು ಅರ್ಧ ಕಿ.ಮೀ‌ ದೂರದಲ್ಲಿ ಗಂಗಪ್ಪ ಅವರ ತೋಟವಿದೆ. ಈ ಭಾಗದಲ್ಲಿ ಚಿರತೆ ಕಾಟಕ್ಕೆ ಹೆದರಿ ರಾತ್ರಿ ಮನೆಯಿಂದ ತಡವಾಗಿ ತೋಟದ ಬಳಿ ಬಂದಿದ್ದಾರೆ. ಬೆಳಿಗ್ಗೆ ಎದ್ದು ನೋಡಿದಾಗ ಕಿಡಿಗೇಡಿಗಳು ಬೇಕಂತಲೇ ಹೂವಿನ ಬೆಳೆಗೆ ಹಾಕಿದ್ದ ಡ್ರಿಪ್ ಪೈಪ್‌ ಗಳನ್ನು‌ ಅಲ್ಲಲ್ಲಿ ಹೊಡೆದು ಹಾಕಿದ್ದು, ಸೇವಂತಿ ಮತ್ತು ಬಟನ್ಸ್ ಸಸಿಗಳನ್ನು ನಾಶಪಡಿಸಿದ್ದಾರೆ.

ರಾತ್ರಿ ಯಾರೂ ಇಲ್ಲದ ಸಮಯದಲ್ಲಿ ದುಷ್ಕರ್ಮಿಗಳು ಹೂವಿನ ಬೆಳೆ ಹಾಗೂ ಡ್ರಿಪ್ ಪೈಪ್ ಗಳನ್ನು ಹೊಡೆದು ಹಾಕಿದ್ದಾರೆ. ಬೆಳಿಗ್ಗೆ ಕಿಡಿಗೇಡಿಗಳ ಕೃತ್ಯ ಬೆಳಕಿಗೆ ಬಂದಿದೆ. ಒಂದು ಸಸಿಗೆ ಮೂರು ರೂಪಾಯಿ ಕೊಟ್ಟು ತಂದಿದ್ದೆ. ಈಗ ಕಿಡಿಗೇಡಿಗಳ ಕೃತ್ಯಕ್ಕೆ ಎಲ್ಲವೂ ನಾಶವಾಗಿದೆ. ಈಗ ಹೊಸದಾಗಿ ಡ್ರಿಪ್ ಪೈಪ್ ಅಳವಡಿಸಲು ಆಗುವುದಿಲ್ಲ, ಬೇಸಿಗೆ ಕಾಲದಲ್ಲಿ ಸಸಿಗಳಿಗೆ ನೀರು ಹಾಯಿಸದಿದ್ದರೆ ಬೆಳೆ ನಾಶ ಆಗುತ್ತದೆ. ಇದರಿಂದ ನನಗೆ ಸಾಕಷ್ಟು ನಷ್ಟವಾಗುವ ಸಂಭವವಿದೆ ಎಂದು ರೈತ ಗಂಗಪ್ಪ ಅಳಲು ತೋಡಿಕೊಂಡರು.

ಇವರ ತೋಟದಲ್ಲೇ ಇತ್ತೀಚೆಗೆ ಪಂಪ್, ಮೋಟರ್ ಹಾಗೂ ಕೇಬಲ್ ಕಳವಾಗಿತ್ತು. ಇದೀಗ ಡ್ರಿಪ್ ಪೈಪ್, ಸೇವಂತಿ ಸಸಿ ನಾಶ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಜೊತೆಗೆ ಕಿಡಿಗೇಡಿಗಳ ಈ ಕೃತ್ಯದಿಂದಾಗಿ ತೋಟದಲ್ಲಿ ಉಳಿದುಕೊಳ್ಳಲು ಭೀತಿ ಎದುರಾಗಿದೆ. ನಮಗೆ ನ್ಯಾಯ‌ ಮತ್ತು ರಕ್ಷಣೆ ಬೇಕಾಗಿದೆ ಎಂದು ಅಲವತ್ತುಕೊಂಡರು.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

6 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

12 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

13 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago