ಕಿಡಿಗೇಡಿಗಳ ಕೃತ್ಯಕ್ಕೆ ಹೂವಿನ ಬೆಳೆಗೆ ಹಾಕಿದ್ದ ಡ್ರಿಪ್ ಪೈಪ್‌, ಸೇವಂತಿ ಹಾಗೂ ಬಟನ್ಸ್ ಸಸಿ ನಾಶ: ಸಂಕಷ್ಟಕ್ಕೀಡಾದ ರೈತ

ಹೂವಿನ ಬೆಳೆಗೆ ಅಳವಡಿಸಿದ್ದ ಡ್ರಿಪ್ ಪೈಪ್‌ ಹಾಗೂ ಸೇವಂತಿ ಹೂವಿನ ಸಸಿಗಳನ್ನು ನಾಶಪಡಿಸಿರುವ ಘಟನೆ ತಾಲೂಕಿನ ಕೆಳಗಿನಜೂಗಾನಹಳ್ಳಿ‌ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.

ಗ್ರಾಮದ ರೈತ ಗಂಗಪ್ಪ ಅವರು ತಮ್ಮ ಜಮೀನಿನಲ್ಲಿ ತಿಂಗಳ ಹಿಂದೆ ಸಾವಿರಾರು ರೂಪಾಯಿ‌ ಖರ್ಚು ಮಾಡಿ ಸೇವಂತಿ ಹಾಗೂ ಬಟನ್ಸ್ ಹೂ‌ವಿನ ಸಸಿಗಳನ್ನು ನಾಟಿ ಮಾಡಿದ್ದರು.

ಗ್ರಾಮದಿಂದ ಸುಮಾರು ಅರ್ಧ ಕಿ.ಮೀ‌ ದೂರದಲ್ಲಿ ಗಂಗಪ್ಪ ಅವರ ತೋಟವಿದೆ. ಈ ಭಾಗದಲ್ಲಿ ಚಿರತೆ ಕಾಟಕ್ಕೆ ಹೆದರಿ ರಾತ್ರಿ ಮನೆಯಿಂದ ತಡವಾಗಿ ತೋಟದ ಬಳಿ ಬಂದಿದ್ದಾರೆ. ಬೆಳಿಗ್ಗೆ ಎದ್ದು ನೋಡಿದಾಗ ಕಿಡಿಗೇಡಿಗಳು ಬೇಕಂತಲೇ ಹೂವಿನ ಬೆಳೆಗೆ ಹಾಕಿದ್ದ ಡ್ರಿಪ್ ಪೈಪ್‌ ಗಳನ್ನು‌ ಅಲ್ಲಲ್ಲಿ ಹೊಡೆದು ಹಾಕಿದ್ದು, ಸೇವಂತಿ ಮತ್ತು ಬಟನ್ಸ್ ಸಸಿಗಳನ್ನು ನಾಶಪಡಿಸಿದ್ದಾರೆ.

ರಾತ್ರಿ ಯಾರೂ ಇಲ್ಲದ ಸಮಯದಲ್ಲಿ ದುಷ್ಕರ್ಮಿಗಳು ಹೂವಿನ ಬೆಳೆ ಹಾಗೂ ಡ್ರಿಪ್ ಪೈಪ್ ಗಳನ್ನು ಹೊಡೆದು ಹಾಕಿದ್ದಾರೆ. ಬೆಳಿಗ್ಗೆ ಕಿಡಿಗೇಡಿಗಳ ಕೃತ್ಯ ಬೆಳಕಿಗೆ ಬಂದಿದೆ. ಒಂದು ಸಸಿಗೆ ಮೂರು ರೂಪಾಯಿ ಕೊಟ್ಟು ತಂದಿದ್ದೆ. ಈಗ ಕಿಡಿಗೇಡಿಗಳ ಕೃತ್ಯಕ್ಕೆ ಎಲ್ಲವೂ ನಾಶವಾಗಿದೆ. ಈಗ ಹೊಸದಾಗಿ ಡ್ರಿಪ್ ಪೈಪ್ ಅಳವಡಿಸಲು ಆಗುವುದಿಲ್ಲ, ಬೇಸಿಗೆ ಕಾಲದಲ್ಲಿ ಸಸಿಗಳಿಗೆ ನೀರು ಹಾಯಿಸದಿದ್ದರೆ ಬೆಳೆ ನಾಶ ಆಗುತ್ತದೆ. ಇದರಿಂದ ನನಗೆ ಸಾಕಷ್ಟು ನಷ್ಟವಾಗುವ ಸಂಭವವಿದೆ ಎಂದು ರೈತ ಗಂಗಪ್ಪ ಅಳಲು ತೋಡಿಕೊಂಡರು.

ಇವರ ತೋಟದಲ್ಲೇ ಇತ್ತೀಚೆಗೆ ಪಂಪ್, ಮೋಟರ್ ಹಾಗೂ ಕೇಬಲ್ ಕಳವಾಗಿತ್ತು. ಇದೀಗ ಡ್ರಿಪ್ ಪೈಪ್, ಸೇವಂತಿ ಸಸಿ ನಾಶ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಜೊತೆಗೆ ಕಿಡಿಗೇಡಿಗಳ ಈ ಕೃತ್ಯದಿಂದಾಗಿ ತೋಟದಲ್ಲಿ ಉಳಿದುಕೊಳ್ಳಲು ಭೀತಿ ಎದುರಾಗಿದೆ. ನಮಗೆ ನ್ಯಾಯ‌ ಮತ್ತು ರಕ್ಷಣೆ ಬೇಕಾಗಿದೆ ಎಂದು ಅಲವತ್ತುಕೊಂಡರು.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

3 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

10 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

12 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

1 day ago