ಕಿಡಿಗೇಡಿಗಳ ಕೃತ್ಯಕ್ಕೆ ಹೂವಿನ ಬೆಳೆಗೆ ಹಾಕಿದ್ದ ಡ್ರಿಪ್ ಪೈಪ್‌, ಸೇವಂತಿ ಹಾಗೂ ಬಟನ್ಸ್ ಸಸಿ ನಾಶ: ಸಂಕಷ್ಟಕ್ಕೀಡಾದ ರೈತ

ಹೂವಿನ ಬೆಳೆಗೆ ಅಳವಡಿಸಿದ್ದ ಡ್ರಿಪ್ ಪೈಪ್‌ ಹಾಗೂ ಸೇವಂತಿ ಹೂವಿನ ಸಸಿಗಳನ್ನು ನಾಶಪಡಿಸಿರುವ ಘಟನೆ ತಾಲೂಕಿನ ಕೆಳಗಿನಜೂಗಾನಹಳ್ಳಿ‌ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.

ಗ್ರಾಮದ ರೈತ ಗಂಗಪ್ಪ ಅವರು ತಮ್ಮ ಜಮೀನಿನಲ್ಲಿ ತಿಂಗಳ ಹಿಂದೆ ಸಾವಿರಾರು ರೂಪಾಯಿ‌ ಖರ್ಚು ಮಾಡಿ ಸೇವಂತಿ ಹಾಗೂ ಬಟನ್ಸ್ ಹೂ‌ವಿನ ಸಸಿಗಳನ್ನು ನಾಟಿ ಮಾಡಿದ್ದರು.

ಗ್ರಾಮದಿಂದ ಸುಮಾರು ಅರ್ಧ ಕಿ.ಮೀ‌ ದೂರದಲ್ಲಿ ಗಂಗಪ್ಪ ಅವರ ತೋಟವಿದೆ. ಈ ಭಾಗದಲ್ಲಿ ಚಿರತೆ ಕಾಟಕ್ಕೆ ಹೆದರಿ ರಾತ್ರಿ ಮನೆಯಿಂದ ತಡವಾಗಿ ತೋಟದ ಬಳಿ ಬಂದಿದ್ದಾರೆ. ಬೆಳಿಗ್ಗೆ ಎದ್ದು ನೋಡಿದಾಗ ಕಿಡಿಗೇಡಿಗಳು ಬೇಕಂತಲೇ ಹೂವಿನ ಬೆಳೆಗೆ ಹಾಕಿದ್ದ ಡ್ರಿಪ್ ಪೈಪ್‌ ಗಳನ್ನು‌ ಅಲ್ಲಲ್ಲಿ ಹೊಡೆದು ಹಾಕಿದ್ದು, ಸೇವಂತಿ ಮತ್ತು ಬಟನ್ಸ್ ಸಸಿಗಳನ್ನು ನಾಶಪಡಿಸಿದ್ದಾರೆ.

ರಾತ್ರಿ ಯಾರೂ ಇಲ್ಲದ ಸಮಯದಲ್ಲಿ ದುಷ್ಕರ್ಮಿಗಳು ಹೂವಿನ ಬೆಳೆ ಹಾಗೂ ಡ್ರಿಪ್ ಪೈಪ್ ಗಳನ್ನು ಹೊಡೆದು ಹಾಕಿದ್ದಾರೆ. ಬೆಳಿಗ್ಗೆ ಕಿಡಿಗೇಡಿಗಳ ಕೃತ್ಯ ಬೆಳಕಿಗೆ ಬಂದಿದೆ. ಒಂದು ಸಸಿಗೆ ಮೂರು ರೂಪಾಯಿ ಕೊಟ್ಟು ತಂದಿದ್ದೆ. ಈಗ ಕಿಡಿಗೇಡಿಗಳ ಕೃತ್ಯಕ್ಕೆ ಎಲ್ಲವೂ ನಾಶವಾಗಿದೆ. ಈಗ ಹೊಸದಾಗಿ ಡ್ರಿಪ್ ಪೈಪ್ ಅಳವಡಿಸಲು ಆಗುವುದಿಲ್ಲ, ಬೇಸಿಗೆ ಕಾಲದಲ್ಲಿ ಸಸಿಗಳಿಗೆ ನೀರು ಹಾಯಿಸದಿದ್ದರೆ ಬೆಳೆ ನಾಶ ಆಗುತ್ತದೆ. ಇದರಿಂದ ನನಗೆ ಸಾಕಷ್ಟು ನಷ್ಟವಾಗುವ ಸಂಭವವಿದೆ ಎಂದು ರೈತ ಗಂಗಪ್ಪ ಅಳಲು ತೋಡಿಕೊಂಡರು.

ಇವರ ತೋಟದಲ್ಲೇ ಇತ್ತೀಚೆಗೆ ಪಂಪ್, ಮೋಟರ್ ಹಾಗೂ ಕೇಬಲ್ ಕಳವಾಗಿತ್ತು. ಇದೀಗ ಡ್ರಿಪ್ ಪೈಪ್, ಸೇವಂತಿ ಸಸಿ ನಾಶ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಜೊತೆಗೆ ಕಿಡಿಗೇಡಿಗಳ ಈ ಕೃತ್ಯದಿಂದಾಗಿ ತೋಟದಲ್ಲಿ ಉಳಿದುಕೊಳ್ಳಲು ಭೀತಿ ಎದುರಾಗಿದೆ. ನಮಗೆ ನ್ಯಾಯ‌ ಮತ್ತು ರಕ್ಷಣೆ ಬೇಕಾಗಿದೆ ಎಂದು ಅಲವತ್ತುಕೊಂಡರು.

Ramesh Babu

Journalist

Recent Posts

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

3 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

4 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

5 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

6 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

10 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

12 hours ago