ಕಿಡಿಗೇಡಿಗಳ ಕೃತ್ಯಕ್ಕೆ ಹೂವಿನ ಬೆಳೆಗೆ ಹಾಕಿದ್ದ ಡ್ರಿಪ್ ಪೈಪ್‌, ಸೇವಂತಿ ಹಾಗೂ ಬಟನ್ಸ್ ಸಸಿ ನಾಶ: ಸಂಕಷ್ಟಕ್ಕೀಡಾದ ರೈತ

ಹೂವಿನ ಬೆಳೆಗೆ ಅಳವಡಿಸಿದ್ದ ಡ್ರಿಪ್ ಪೈಪ್‌ ಹಾಗೂ ಸೇವಂತಿ ಹೂವಿನ ಸಸಿಗಳನ್ನು ನಾಶಪಡಿಸಿರುವ ಘಟನೆ ತಾಲೂಕಿನ ಕೆಳಗಿನಜೂಗಾನಹಳ್ಳಿ‌ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.

ಗ್ರಾಮದ ರೈತ ಗಂಗಪ್ಪ ಅವರು ತಮ್ಮ ಜಮೀನಿನಲ್ಲಿ ತಿಂಗಳ ಹಿಂದೆ ಸಾವಿರಾರು ರೂಪಾಯಿ‌ ಖರ್ಚು ಮಾಡಿ ಸೇವಂತಿ ಹಾಗೂ ಬಟನ್ಸ್ ಹೂ‌ವಿನ ಸಸಿಗಳನ್ನು ನಾಟಿ ಮಾಡಿದ್ದರು.

ಗ್ರಾಮದಿಂದ ಸುಮಾರು ಅರ್ಧ ಕಿ.ಮೀ‌ ದೂರದಲ್ಲಿ ಗಂಗಪ್ಪ ಅವರ ತೋಟವಿದೆ. ಈ ಭಾಗದಲ್ಲಿ ಚಿರತೆ ಕಾಟಕ್ಕೆ ಹೆದರಿ ರಾತ್ರಿ ಮನೆಯಿಂದ ತಡವಾಗಿ ತೋಟದ ಬಳಿ ಬಂದಿದ್ದಾರೆ. ಬೆಳಿಗ್ಗೆ ಎದ್ದು ನೋಡಿದಾಗ ಕಿಡಿಗೇಡಿಗಳು ಬೇಕಂತಲೇ ಹೂವಿನ ಬೆಳೆಗೆ ಹಾಕಿದ್ದ ಡ್ರಿಪ್ ಪೈಪ್‌ ಗಳನ್ನು‌ ಅಲ್ಲಲ್ಲಿ ಹೊಡೆದು ಹಾಕಿದ್ದು, ಸೇವಂತಿ ಮತ್ತು ಬಟನ್ಸ್ ಸಸಿಗಳನ್ನು ನಾಶಪಡಿಸಿದ್ದಾರೆ.

ರಾತ್ರಿ ಯಾರೂ ಇಲ್ಲದ ಸಮಯದಲ್ಲಿ ದುಷ್ಕರ್ಮಿಗಳು ಹೂವಿನ ಬೆಳೆ ಹಾಗೂ ಡ್ರಿಪ್ ಪೈಪ್ ಗಳನ್ನು ಹೊಡೆದು ಹಾಕಿದ್ದಾರೆ. ಬೆಳಿಗ್ಗೆ ಕಿಡಿಗೇಡಿಗಳ ಕೃತ್ಯ ಬೆಳಕಿಗೆ ಬಂದಿದೆ. ಒಂದು ಸಸಿಗೆ ಮೂರು ರೂಪಾಯಿ ಕೊಟ್ಟು ತಂದಿದ್ದೆ. ಈಗ ಕಿಡಿಗೇಡಿಗಳ ಕೃತ್ಯಕ್ಕೆ ಎಲ್ಲವೂ ನಾಶವಾಗಿದೆ. ಈಗ ಹೊಸದಾಗಿ ಡ್ರಿಪ್ ಪೈಪ್ ಅಳವಡಿಸಲು ಆಗುವುದಿಲ್ಲ, ಬೇಸಿಗೆ ಕಾಲದಲ್ಲಿ ಸಸಿಗಳಿಗೆ ನೀರು ಹಾಯಿಸದಿದ್ದರೆ ಬೆಳೆ ನಾಶ ಆಗುತ್ತದೆ. ಇದರಿಂದ ನನಗೆ ಸಾಕಷ್ಟು ನಷ್ಟವಾಗುವ ಸಂಭವವಿದೆ ಎಂದು ರೈತ ಗಂಗಪ್ಪ ಅಳಲು ತೋಡಿಕೊಂಡರು.

ಇವರ ತೋಟದಲ್ಲೇ ಇತ್ತೀಚೆಗೆ ಪಂಪ್, ಮೋಟರ್ ಹಾಗೂ ಕೇಬಲ್ ಕಳವಾಗಿತ್ತು. ಇದೀಗ ಡ್ರಿಪ್ ಪೈಪ್, ಸೇವಂತಿ ಸಸಿ ನಾಶ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಜೊತೆಗೆ ಕಿಡಿಗೇಡಿಗಳ ಈ ಕೃತ್ಯದಿಂದಾಗಿ ತೋಟದಲ್ಲಿ ಉಳಿದುಕೊಳ್ಳಲು ಭೀತಿ ಎದುರಾಗಿದೆ. ನಮಗೆ ನ್ಯಾಯ‌ ಮತ್ತು ರಕ್ಷಣೆ ಬೇಕಾಗಿದೆ ಎಂದು ಅಲವತ್ತುಕೊಂಡರು.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

8 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

12 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

15 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago