ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ನಡೆಸಿದ ಹೋರಾಟದಲ್ಲಿ ವಿಜಯಗಳಿಸಿ 200 ವರ್ಷ ಪೂರೈಕೆ-ಉಪನ್ಯಾಸಕಿ ಟಿ.ಎಸ್ ಸರಸ್ವತಿ

ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ನಡೆಸಿದ ಹೋರಾಟದಲ್ಲಿ ವಿಜಯಗಳಿಸಿ 200 ವರ್ಷ ಪೂರೈಸಿದೆ. ಬ್ರಿಟಿಷ ವಿರುದ್ಧ ಮಹಿಳಾ ಹೋರಾಟಗಾರ್ತಿಗೆ 1824 ರಲ್ಲಿ  ದೊರೆತ ವಿಜಯವು ಆಗಿದೆ ಎಂದು‌ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕಿ ಟಿ.ಎಸ್ ಸರಸ್ವತಿ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ  ಬಾಲಕಿಯರ ವಿದ್ಯಾರ್ಥಿನಿಲಯಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ವಿಜಯದಿನ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

1857 ರಲ್ಲಿ ನಡೆದ ಸಿಪಾಯಿ ದಂಗೆಗೂ ಮೊದಲೇ 1824 ರಲ್ಲಿ ಬ್ರಿಟಿಷರ ವಿರುದ್ದ ಹೋರಾಟ ನಡೆಸಿ ಗೆಲುವು ಸಾಧಿಸಿದ ಕಿತ್ತೂರು ರಾಣಿ ಚೆನ್ನಮ್ಮನ ಧೀರತ್ವ ಮತ್ತು ದೇಶಪ್ರೇಮ, ದಕ್ಷ ಆಡಳಿತ ವಿಧಾನ ಎಲ್ಲರಿಗೂ ಆದರ್ಶಪ್ರಾಯ ಎಂದರು.

ಕಿತ್ತೂರು ಸಂಸ್ಥಾನದ ದೇಸಾಯಿ ಧೂಳಪ್ಪ ದೇಸಾಯಿ‌ ಮಗಳಾದ ಚೆನ್ನಮ್ಮ ಎಳೆ ವಯಸ್ಸಿನಲ್ಲಿಯೆ ಕುದುರೆ ಸವಾರಿ ಹಾಗು ಬಿಲ್ಲುವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದಳು. ಚೆನ್ನಮ್ಮ ಅನಿವಾರ್ಯವಾಗಿ ಕಿತ್ತೂರು ‌ಸಂಸ್ಥಾನದ ಮುಖ್ಯ ಸ್ಥಾನದಲ್ಲಿ ಜವಾಬ್ದಾರಿ ನಿರ್ವಹಿಸಬೇಕಾದಗುತ್ತದೆ. ಅದನ್ನು ಚೆನ್ನಮ್ಮ ಧೈರ್ಯವಾಗಿ ಎದುರಿಸಿದ ರೀತಿ ಭಾರತದ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದೆ. ಕಿತ್ತೂರು ರಾಣಿ ಚೆನ್ನಮ್ಮ   ಬ್ರಿಟಿಷರಿಗೆ  ತೆರಿಗೆ ಕೊಡುವುದಿಲ್ಲ ಎಂದು ಹೇಳುವ ಮೂಲಕ ನಮಗೆ ಸ್ವಾಭಿಮಾನ ಪ್ರದರ್ಶನ ಮಾಡಿದರು.

ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ ದೇಶದ ಮಹಿಳೆಯರಿಗೆ ಸ್ಪೂರ್ತಿಯಾಗಿದೆ. ಹೆಣ್ಣಿನ ಧೈರ್ಯ, ಸಾಹಸ, ಮಾನಸಿಕ ಮತ್ತು ದೈಹಿಕ ಹೋರಾಟ, ಆಡಳಿತ, ಸ್ವಾಭಿಮಾನ ಮತ್ತು   ಸ್ವಾವಲಂಬನೆ‌ ಮುಂತಾದ ವಿಚಾರಗಳು ಬಂದಾಗ ಕಿತ್ತೂರು ರಾಣಿ ಚೆನ್ನಮ್ಮ ಅವರ ನೆನಪು ಬರುತ್ತದೆ. ‌ ಬ್ರಿಟಿಷರ ಬಲಿಷ್ಠವಾದ ಸೈನ್ಯದ ವಿರುದ್ದ ರಾಣಿ ಚೆನ್ನಮ್ಮ ತನ್ನ ಸಣ್ಣ ಸೈನ್ಯದೊಂದಿಗೆ ಕೆಚ್ಚೆದೆಯ ಧೈರ್ಯ ಮತ್ತು ಸಾಹಸದಿಂದ ಹೋರಾಡಿದರು. ಆಗ ಆಕೆಗೆ ಅಷ್ಟೇ ಸಮರ್ಥವಾಗಿ, ಅತ್ಯಂತ ನಿಷ್ಠೆಯಿಂದ, ಪ್ರಾಮಾಣಿಕತೆಯಿಂದ, ಕೆಚ್ಚೆದೆಯ ಧೈರ್ಯದಿಂದ ಬೆನ್ನೆಲುಬಾಗಿ ನಿಂತು ಹೋರಾಡಿದ್ದು ಸಂಗೊಳ್ಳಿ ರಾಯಣ್ಣ‌ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಭಾರತೀಯ ಮಹಿಳೆಯರು ಹಿಂದಿನಿಂದಲೂ ಸಾಧಕರ ಸಾಲಿನಲ್ಲಿ ತಮ್ಮದೇ ಹೆಜ್ಜೆ ಗುರುತು ಉಳಿಸಿದ್ದಾರೆ. ಇಂದಿಗೂ ಸಹ ಬಾಹ್ಯಾಕಾಶಯಾನದಲ್ಲಿ ಸಾಧನೆ ಮಾಡಿರುವ ಕಲ್ಪನಾ ಚಾವ್ಲಾ, ಸುನೀತಾ ವಿಲಿಯಂ ಇಬ್ಬರೂ ಭಾರತೀಯ ಮಹಿಳೆಯರೇ ಆಗಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಸಹ  ಮಹಿಳೆಯರ ಕೊಡುಗೆ ಅಪಾರವಾಗಿದೆ. ಬದುಕಿನಲ್ಲಿ ಎದುರಾಗುವ ಎಂತಹ ಪರಿಸ್ಥಿತಿಯಲ್ಲೂ  ಅಸಹಾಯಕರಾಗದೆ, ಧೈರ್ಯವಾಗಿ ಹೋರಾಡಬೇಕು ಎಂಬುದಕ್ಕೆ ಕಿತ್ತೂರು ರಾಣಿ ಚೆನ್ನಮ್ಮ  ಒಂದು ಮಾದರಿಯಾಗಿದ್ದಾರೆ. ಸಾಹಸಭರಿತ, ಧೈರ್ಯವಂತ, ಸಾವಿಗೆ ಅಂಜದ, ದೇಶಪ್ರೇಮದ ಮಹೋನ್ನತ ಹೆಜ್ಜೆಯಾಗಿದ್ದಾರೆ.
ಕಿತ್ತೂರು ರಾಣಿ ಚೆನ್ನಮ್ಮ ತಮ್ಮ‌ ವ್ಯಕ್ತಿತ್ವದಿಂದಲೇ ಎಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ರಾಧಮಣಿ, ಶಿಕ್ಷಣ ಇಲಾಖೆ ‌ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಬಿ.ಆರ್. ಗಂಗಾಧರ್,ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ‌‌ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಕೋಶಾಧ್ಯಕ್ಷ ಜಿ.ಸುರೇಶ್, ಕನ್ನಡಪರ ಹೋರಾಟಗಾರರಾದ ಗುರುರಾಜಪ್ಪ, ಚೌಡರಾಜು, ಹರೀಶ್, ನವೋದಯ ವಿದ್ಯಾಲಯ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ ವೆಂಕಟರಾಜು,  ಕಲಾವಿದರುಗಳಾದ ದರ್ಗಾಜೋಗಿಹಳ್ಳಿ, ಕುಮಾರ್,  ಎಂ.ರಾಮಕೃಷ್ಣ, ಶೋಭಾ, ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

10 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

19 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

22 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

23 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 days ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

2 days ago