ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ನಡೆಸಿದ ಹೋರಾಟದಲ್ಲಿ ವಿಜಯಗಳಿಸಿ 200 ವರ್ಷ ಪೂರೈಕೆ-ಉಪನ್ಯಾಸಕಿ ಟಿ.ಎಸ್ ಸರಸ್ವತಿ

ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ನಡೆಸಿದ ಹೋರಾಟದಲ್ಲಿ ವಿಜಯಗಳಿಸಿ 200 ವರ್ಷ ಪೂರೈಸಿದೆ. ಬ್ರಿಟಿಷ ವಿರುದ್ಧ ಮಹಿಳಾ ಹೋರಾಟಗಾರ್ತಿಗೆ 1824 ರಲ್ಲಿ  ದೊರೆತ ವಿಜಯವು ಆಗಿದೆ ಎಂದು‌ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕಿ ಟಿ.ಎಸ್ ಸರಸ್ವತಿ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ  ಬಾಲಕಿಯರ ವಿದ್ಯಾರ್ಥಿನಿಲಯಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ವಿಜಯದಿನ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

1857 ರಲ್ಲಿ ನಡೆದ ಸಿಪಾಯಿ ದಂಗೆಗೂ ಮೊದಲೇ 1824 ರಲ್ಲಿ ಬ್ರಿಟಿಷರ ವಿರುದ್ದ ಹೋರಾಟ ನಡೆಸಿ ಗೆಲುವು ಸಾಧಿಸಿದ ಕಿತ್ತೂರು ರಾಣಿ ಚೆನ್ನಮ್ಮನ ಧೀರತ್ವ ಮತ್ತು ದೇಶಪ್ರೇಮ, ದಕ್ಷ ಆಡಳಿತ ವಿಧಾನ ಎಲ್ಲರಿಗೂ ಆದರ್ಶಪ್ರಾಯ ಎಂದರು.

ಕಿತ್ತೂರು ಸಂಸ್ಥಾನದ ದೇಸಾಯಿ ಧೂಳಪ್ಪ ದೇಸಾಯಿ‌ ಮಗಳಾದ ಚೆನ್ನಮ್ಮ ಎಳೆ ವಯಸ್ಸಿನಲ್ಲಿಯೆ ಕುದುರೆ ಸವಾರಿ ಹಾಗು ಬಿಲ್ಲುವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದಳು. ಚೆನ್ನಮ್ಮ ಅನಿವಾರ್ಯವಾಗಿ ಕಿತ್ತೂರು ‌ಸಂಸ್ಥಾನದ ಮುಖ್ಯ ಸ್ಥಾನದಲ್ಲಿ ಜವಾಬ್ದಾರಿ ನಿರ್ವಹಿಸಬೇಕಾದಗುತ್ತದೆ. ಅದನ್ನು ಚೆನ್ನಮ್ಮ ಧೈರ್ಯವಾಗಿ ಎದುರಿಸಿದ ರೀತಿ ಭಾರತದ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದೆ. ಕಿತ್ತೂರು ರಾಣಿ ಚೆನ್ನಮ್ಮ   ಬ್ರಿಟಿಷರಿಗೆ  ತೆರಿಗೆ ಕೊಡುವುದಿಲ್ಲ ಎಂದು ಹೇಳುವ ಮೂಲಕ ನಮಗೆ ಸ್ವಾಭಿಮಾನ ಪ್ರದರ್ಶನ ಮಾಡಿದರು.

ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ ದೇಶದ ಮಹಿಳೆಯರಿಗೆ ಸ್ಪೂರ್ತಿಯಾಗಿದೆ. ಹೆಣ್ಣಿನ ಧೈರ್ಯ, ಸಾಹಸ, ಮಾನಸಿಕ ಮತ್ತು ದೈಹಿಕ ಹೋರಾಟ, ಆಡಳಿತ, ಸ್ವಾಭಿಮಾನ ಮತ್ತು   ಸ್ವಾವಲಂಬನೆ‌ ಮುಂತಾದ ವಿಚಾರಗಳು ಬಂದಾಗ ಕಿತ್ತೂರು ರಾಣಿ ಚೆನ್ನಮ್ಮ ಅವರ ನೆನಪು ಬರುತ್ತದೆ. ‌ ಬ್ರಿಟಿಷರ ಬಲಿಷ್ಠವಾದ ಸೈನ್ಯದ ವಿರುದ್ದ ರಾಣಿ ಚೆನ್ನಮ್ಮ ತನ್ನ ಸಣ್ಣ ಸೈನ್ಯದೊಂದಿಗೆ ಕೆಚ್ಚೆದೆಯ ಧೈರ್ಯ ಮತ್ತು ಸಾಹಸದಿಂದ ಹೋರಾಡಿದರು. ಆಗ ಆಕೆಗೆ ಅಷ್ಟೇ ಸಮರ್ಥವಾಗಿ, ಅತ್ಯಂತ ನಿಷ್ಠೆಯಿಂದ, ಪ್ರಾಮಾಣಿಕತೆಯಿಂದ, ಕೆಚ್ಚೆದೆಯ ಧೈರ್ಯದಿಂದ ಬೆನ್ನೆಲುಬಾಗಿ ನಿಂತು ಹೋರಾಡಿದ್ದು ಸಂಗೊಳ್ಳಿ ರಾಯಣ್ಣ‌ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಭಾರತೀಯ ಮಹಿಳೆಯರು ಹಿಂದಿನಿಂದಲೂ ಸಾಧಕರ ಸಾಲಿನಲ್ಲಿ ತಮ್ಮದೇ ಹೆಜ್ಜೆ ಗುರುತು ಉಳಿಸಿದ್ದಾರೆ. ಇಂದಿಗೂ ಸಹ ಬಾಹ್ಯಾಕಾಶಯಾನದಲ್ಲಿ ಸಾಧನೆ ಮಾಡಿರುವ ಕಲ್ಪನಾ ಚಾವ್ಲಾ, ಸುನೀತಾ ವಿಲಿಯಂ ಇಬ್ಬರೂ ಭಾರತೀಯ ಮಹಿಳೆಯರೇ ಆಗಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಸಹ  ಮಹಿಳೆಯರ ಕೊಡುಗೆ ಅಪಾರವಾಗಿದೆ. ಬದುಕಿನಲ್ಲಿ ಎದುರಾಗುವ ಎಂತಹ ಪರಿಸ್ಥಿತಿಯಲ್ಲೂ  ಅಸಹಾಯಕರಾಗದೆ, ಧೈರ್ಯವಾಗಿ ಹೋರಾಡಬೇಕು ಎಂಬುದಕ್ಕೆ ಕಿತ್ತೂರು ರಾಣಿ ಚೆನ್ನಮ್ಮ  ಒಂದು ಮಾದರಿಯಾಗಿದ್ದಾರೆ. ಸಾಹಸಭರಿತ, ಧೈರ್ಯವಂತ, ಸಾವಿಗೆ ಅಂಜದ, ದೇಶಪ್ರೇಮದ ಮಹೋನ್ನತ ಹೆಜ್ಜೆಯಾಗಿದ್ದಾರೆ.
ಕಿತ್ತೂರು ರಾಣಿ ಚೆನ್ನಮ್ಮ ತಮ್ಮ‌ ವ್ಯಕ್ತಿತ್ವದಿಂದಲೇ ಎಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ರಾಧಮಣಿ, ಶಿಕ್ಷಣ ಇಲಾಖೆ ‌ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಬಿ.ಆರ್. ಗಂಗಾಧರ್,ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ‌‌ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಕೋಶಾಧ್ಯಕ್ಷ ಜಿ.ಸುರೇಶ್, ಕನ್ನಡಪರ ಹೋರಾಟಗಾರರಾದ ಗುರುರಾಜಪ್ಪ, ಚೌಡರಾಜು, ಹರೀಶ್, ನವೋದಯ ವಿದ್ಯಾಲಯ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ ವೆಂಕಟರಾಜು,  ಕಲಾವಿದರುಗಳಾದ ದರ್ಗಾಜೋಗಿಹಳ್ಳಿ, ಕುಮಾರ್,  ಎಂ.ರಾಮಕೃಷ್ಣ, ಶೋಭಾ, ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

1 hour ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

11 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

13 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

18 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

20 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

23 hours ago