ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ನಡೆಸಿದ ಹೋರಾಟದಲ್ಲಿ ವಿಜಯಗಳಿಸಿ 200 ವರ್ಷ ಪೂರೈಕೆ-ಉಪನ್ಯಾಸಕಿ ಟಿ.ಎಸ್ ಸರಸ್ವತಿ

ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ನಡೆಸಿದ ಹೋರಾಟದಲ್ಲಿ ವಿಜಯಗಳಿಸಿ 200 ವರ್ಷ ಪೂರೈಸಿದೆ. ಬ್ರಿಟಿಷ ವಿರುದ್ಧ ಮಹಿಳಾ ಹೋರಾಟಗಾರ್ತಿಗೆ 1824 ರಲ್ಲಿ  ದೊರೆತ ವಿಜಯವು ಆಗಿದೆ ಎಂದು‌ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕಿ ಟಿ.ಎಸ್ ಸರಸ್ವತಿ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ  ಬಾಲಕಿಯರ ವಿದ್ಯಾರ್ಥಿನಿಲಯಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ವಿಜಯದಿನ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

1857 ರಲ್ಲಿ ನಡೆದ ಸಿಪಾಯಿ ದಂಗೆಗೂ ಮೊದಲೇ 1824 ರಲ್ಲಿ ಬ್ರಿಟಿಷರ ವಿರುದ್ದ ಹೋರಾಟ ನಡೆಸಿ ಗೆಲುವು ಸಾಧಿಸಿದ ಕಿತ್ತೂರು ರಾಣಿ ಚೆನ್ನಮ್ಮನ ಧೀರತ್ವ ಮತ್ತು ದೇಶಪ್ರೇಮ, ದಕ್ಷ ಆಡಳಿತ ವಿಧಾನ ಎಲ್ಲರಿಗೂ ಆದರ್ಶಪ್ರಾಯ ಎಂದರು.

ಕಿತ್ತೂರು ಸಂಸ್ಥಾನದ ದೇಸಾಯಿ ಧೂಳಪ್ಪ ದೇಸಾಯಿ‌ ಮಗಳಾದ ಚೆನ್ನಮ್ಮ ಎಳೆ ವಯಸ್ಸಿನಲ್ಲಿಯೆ ಕುದುರೆ ಸವಾರಿ ಹಾಗು ಬಿಲ್ಲುವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದಳು. ಚೆನ್ನಮ್ಮ ಅನಿವಾರ್ಯವಾಗಿ ಕಿತ್ತೂರು ‌ಸಂಸ್ಥಾನದ ಮುಖ್ಯ ಸ್ಥಾನದಲ್ಲಿ ಜವಾಬ್ದಾರಿ ನಿರ್ವಹಿಸಬೇಕಾದಗುತ್ತದೆ. ಅದನ್ನು ಚೆನ್ನಮ್ಮ ಧೈರ್ಯವಾಗಿ ಎದುರಿಸಿದ ರೀತಿ ಭಾರತದ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದೆ. ಕಿತ್ತೂರು ರಾಣಿ ಚೆನ್ನಮ್ಮ   ಬ್ರಿಟಿಷರಿಗೆ  ತೆರಿಗೆ ಕೊಡುವುದಿಲ್ಲ ಎಂದು ಹೇಳುವ ಮೂಲಕ ನಮಗೆ ಸ್ವಾಭಿಮಾನ ಪ್ರದರ್ಶನ ಮಾಡಿದರು.

ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ ದೇಶದ ಮಹಿಳೆಯರಿಗೆ ಸ್ಪೂರ್ತಿಯಾಗಿದೆ. ಹೆಣ್ಣಿನ ಧೈರ್ಯ, ಸಾಹಸ, ಮಾನಸಿಕ ಮತ್ತು ದೈಹಿಕ ಹೋರಾಟ, ಆಡಳಿತ, ಸ್ವಾಭಿಮಾನ ಮತ್ತು   ಸ್ವಾವಲಂಬನೆ‌ ಮುಂತಾದ ವಿಚಾರಗಳು ಬಂದಾಗ ಕಿತ್ತೂರು ರಾಣಿ ಚೆನ್ನಮ್ಮ ಅವರ ನೆನಪು ಬರುತ್ತದೆ. ‌ ಬ್ರಿಟಿಷರ ಬಲಿಷ್ಠವಾದ ಸೈನ್ಯದ ವಿರುದ್ದ ರಾಣಿ ಚೆನ್ನಮ್ಮ ತನ್ನ ಸಣ್ಣ ಸೈನ್ಯದೊಂದಿಗೆ ಕೆಚ್ಚೆದೆಯ ಧೈರ್ಯ ಮತ್ತು ಸಾಹಸದಿಂದ ಹೋರಾಡಿದರು. ಆಗ ಆಕೆಗೆ ಅಷ್ಟೇ ಸಮರ್ಥವಾಗಿ, ಅತ್ಯಂತ ನಿಷ್ಠೆಯಿಂದ, ಪ್ರಾಮಾಣಿಕತೆಯಿಂದ, ಕೆಚ್ಚೆದೆಯ ಧೈರ್ಯದಿಂದ ಬೆನ್ನೆಲುಬಾಗಿ ನಿಂತು ಹೋರಾಡಿದ್ದು ಸಂಗೊಳ್ಳಿ ರಾಯಣ್ಣ‌ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಭಾರತೀಯ ಮಹಿಳೆಯರು ಹಿಂದಿನಿಂದಲೂ ಸಾಧಕರ ಸಾಲಿನಲ್ಲಿ ತಮ್ಮದೇ ಹೆಜ್ಜೆ ಗುರುತು ಉಳಿಸಿದ್ದಾರೆ. ಇಂದಿಗೂ ಸಹ ಬಾಹ್ಯಾಕಾಶಯಾನದಲ್ಲಿ ಸಾಧನೆ ಮಾಡಿರುವ ಕಲ್ಪನಾ ಚಾವ್ಲಾ, ಸುನೀತಾ ವಿಲಿಯಂ ಇಬ್ಬರೂ ಭಾರತೀಯ ಮಹಿಳೆಯರೇ ಆಗಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಸಹ  ಮಹಿಳೆಯರ ಕೊಡುಗೆ ಅಪಾರವಾಗಿದೆ. ಬದುಕಿನಲ್ಲಿ ಎದುರಾಗುವ ಎಂತಹ ಪರಿಸ್ಥಿತಿಯಲ್ಲೂ  ಅಸಹಾಯಕರಾಗದೆ, ಧೈರ್ಯವಾಗಿ ಹೋರಾಡಬೇಕು ಎಂಬುದಕ್ಕೆ ಕಿತ್ತೂರು ರಾಣಿ ಚೆನ್ನಮ್ಮ  ಒಂದು ಮಾದರಿಯಾಗಿದ್ದಾರೆ. ಸಾಹಸಭರಿತ, ಧೈರ್ಯವಂತ, ಸಾವಿಗೆ ಅಂಜದ, ದೇಶಪ್ರೇಮದ ಮಹೋನ್ನತ ಹೆಜ್ಜೆಯಾಗಿದ್ದಾರೆ.
ಕಿತ್ತೂರು ರಾಣಿ ಚೆನ್ನಮ್ಮ ತಮ್ಮ‌ ವ್ಯಕ್ತಿತ್ವದಿಂದಲೇ ಎಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ರಾಧಮಣಿ, ಶಿಕ್ಷಣ ಇಲಾಖೆ ‌ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಬಿ.ಆರ್. ಗಂಗಾಧರ್,ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ‌‌ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಕೋಶಾಧ್ಯಕ್ಷ ಜಿ.ಸುರೇಶ್, ಕನ್ನಡಪರ ಹೋರಾಟಗಾರರಾದ ಗುರುರಾಜಪ್ಪ, ಚೌಡರಾಜು, ಹರೀಶ್, ನವೋದಯ ವಿದ್ಯಾಲಯ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ ವೆಂಕಟರಾಜು,  ಕಲಾವಿದರುಗಳಾದ ದರ್ಗಾಜೋಗಿಹಳ್ಳಿ, ಕುಮಾರ್,  ಎಂ.ರಾಮಕೃಷ್ಣ, ಶೋಭಾ, ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

8 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

9 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

11 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

12 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

17 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

20 hours ago