ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥ ದೊಡ್ಡಬಳ್ಳಾಪುರ ನಗರಕ್ಕೆ ಆಗಮಿಸಿತು. ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯ ಜ್ಯೋತಿ ರಥವನ್ನು ಕಲಾತಂಡಗಳೊಂದಿಗೆ ಸ್ವಾಗತಿಸಲಾಯಿತು.
ದೊಡ್ಡಬಳ್ಳಾಪುರಕ್ಕೆ ಆಗಮಿಸಿದ ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥಕ್ಕೆ ಶಾಸಕ ಧೀರಜ್ ಮುನಿರಾಜು, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು, ನಗರಸಭೆ ಪೌರಾಯುಕ್ತ ಕಾರ್ತಿಕಶ್ವರ್, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮೊದಲಾದವರು ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ದ ನಡೆಸಿದ ಹೋರಾಟದಲ್ಲಿ ವಿಜಯಗಳಿಸಿ 200 ವರ್ಷ ಪೂರೈಸಿರುವ ಹಿಲ್ಲೆಯಲ್ಲಿ ರಾಜ್ಯಾದ್ಯಂತ ನಡೆಯುವ ಕಿತ್ತೂರು ರಾಣಿ ಚೆನ್ನಮ್ಮ ವಿಜಯಯಾತ್ರೆ ನಡೆಯುತ್ತಿದೆ. 1824 ಅಕ್ಟೋಬರ್ 23 ರಂದು ಕಿತ್ತೂರು ರಾಣಿ ಚೆನ್ನಮ್ಮ ಸೈನ್ಯದೊಂದಿಗೆ ಕಿತ್ತೂರು ಕೋಟೆಯ ಹೊರಗೆ ಈಸ್ಟ್ ಇಂಡಿಯಾ ಕಂಪನಿಯ ಸೈನಿಕರನ್ನು ಸೋಲಿಸಿದ ದಿನವಾಗಿದೆ. ಬ್ರಿಟಿಷರ ವಿರುದ್ದ ಮೊದಲ ಮಹಿಳಾ ಹೋರಾಟಗಾರ್ತಿಗೆ 1824 ರಲ್ಲಿ ದೊರೆತ ವಿಜಯವಾಗಿದೆ ಎಂದರು.
1857 ರಲ್ಲಿ ನಡೆದ ಸಿಪಾಯಿ ದಂಗೆಗೂ ಮೊದಲೇ 1824ರಲ್ಲಿ ಬ್ರಿಟಿಷರ ವಿರುದ್ದ ಹೋರಾಟ ನಡೆಸಿ ಗೆಲುವು ಸಾಧಿಸಿದ ಕಿತ್ತೂರು ರಾಣಿ ಚೆನ್ನಮ್ಮನ ಧೀರತ್ವ ಮತ್ತು ದೇಶಪ್ರೇಮ, ದಕ್ಷ ಆಡಳಿತ ವಿಧಾನ ಎಲ್ಲರಿಗೂ ಆದರ್ಶಪ್ರಾಯ ಎಂದರು.
ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರಿಗೆ ತೆರಿಗೆ ಕೊಡುವುದಿಲ್ಲ ಎಂದು ಹೇಳುವ ಮೂಲಕ ನಮಗೆ ಸ್ವಾಭಿಮಾನ ಪ್ರದರ್ಶನ ಮಾಡಿದರು. ಸಂಗೊಳ್ಳಿ ರಾಯಣ್ಣ ಅಂತಹ ಸ್ವಾತಂತ್ರ್ಯ ಸೇನಾನಿ ಕಿತ್ತೂರು ರಾಣಿ ಚೆನ್ನಮ್ಮನ ರಾಜ್ಯದಲ್ಲಿ ಇದ್ದರು.. ಮಹಿಳೆಯರು ಘನತೆ ಮತ್ತು ನ್ಯಾಯವನ್ನು ಕಾಪಾಡುವುದರಲ್ಲಿ ಮುಂಚೂಣಿಯಲ್ಲಿರಬಹುದು ಎಂಬುದನ್ನು ತೋರಿಸಿಕೊಟ್ಟರು. ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ ದೇಶದ ಮಹಿಳೆಯರಿಗೆ ಸ್ಪೂರ್ತಿಯಾಗಿದೆ. ಇಂತಹ ವೀರ ಮಹಿಳೆಯ ನೆನಪಿನಲ್ಲಿ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಪ್ರತಿವರ್ಷ ಕಿತ್ತೂರು ಉತ್ಸವ ನಡೆಯುತ್ತದೆ. ಈ ವರ್ಷ ಕಿತ್ತೂರು ವಿಜಯಕ್ಕೆ 200 ವರ್ಷ ಆಗಿರುವ ಪ್ರಯುಕ್ತ ಅಕ್ಟೋಬರ್ 23, 24, 25ರಂದು ಕಿತ್ತೂರಿನಲ್ಲಿ ವಿಜಯೋತ್ಸವ ನಡೆಯಲಿದೆ ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಸಫೀರ್, ಕಾಡನೂರು ಗ್ರಾಮಪಂಚಾಯಿತಿ ಅಧ್ಯಕ್ಷ ಮಧುಸೂದನ್, ಸಾಸಲು ಗ್ರಾಮಪಂಚಾಯಿತಿ ಸದಸ್ಯ ಪ್ರಸನ್ನಕುಮಾರ್, ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರದಿಂದ ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥವನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿಗೆ ಕಳುಹಿಸಿ ಕೊಡಲಾಯಿತು.
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…