ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥಕ್ಕೆ ಅದ್ಧೂರಿ ಸ್ವಾಗತ

ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥ ದೊಡ್ಡಬಳ್ಳಾಪುರ ನಗರಕ್ಕೆ ಆಗಮಿಸಿತು. ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ  ವಿಜಯ ಜ್ಯೋತಿ ರಥವನ್ನು ಕಲಾತಂಡಗಳೊಂದಿಗೆ ಸ್ವಾಗತಿಸಲಾಯಿತು.

ದೊಡ್ಡಬಳ್ಳಾಪುರಕ್ಕೆ ಆಗಮಿಸಿದ ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥಕ್ಕೆ ಶಾಸಕ ಧೀರಜ್ ಮುನಿರಾಜು,  ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು, ನಗರಸಭೆ  ಪೌರಾಯುಕ್ತ ಕಾರ್ತಿಕಶ್ವರ್, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮೊದಲಾದವರು ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ  ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ,  ಕಿತ್ತೂರು ರಾಣಿ ಚೆನ್ನಮ್ಮ  ಬ್ರಿಟಿಷರ ವಿರುದ್ದ  ನಡೆಸಿದ ಹೋರಾಟದಲ್ಲಿ ವಿಜಯಗಳಿಸಿ 200 ವರ್ಷ ಪೂರೈಸಿರುವ ಹಿಲ್ಲೆಯಲ್ಲಿ ರಾಜ್ಯಾದ್ಯಂತ ನಡೆಯುವ ಕಿತ್ತೂರು ರಾಣಿ ಚೆನ್ನಮ್ಮ ವಿಜಯಯಾತ್ರೆ ನಡೆಯುತ್ತಿದೆ. 1824 ಅಕ್ಟೋಬರ್ 23 ರಂದು ಕಿತ್ತೂರು ರಾಣಿ ಚೆನ್ನಮ್ಮ ಸೈನ್ಯದೊಂದಿಗೆ ಕಿತ್ತೂರು ಕೋಟೆಯ ಹೊರಗೆ ಈಸ್ಟ್ ಇಂಡಿಯಾ ಕಂಪನಿಯ ಸೈನಿಕರನ್ನು ಸೋಲಿಸಿದ ದಿನವಾಗಿದೆ. ಬ್ರಿಟಿಷರ ವಿರುದ್ದ  ಮೊದಲ ಮಹಿಳಾ  ಹೋರಾಟಗಾರ್ತಿಗೆ 1824 ರಲ್ಲಿ  ದೊರೆತ ವಿಜಯವಾಗಿದೆ ಎಂದರು.

1857 ರಲ್ಲಿ ನಡೆದ ಸಿಪಾಯಿ ದಂಗೆಗೂ ಮೊದಲೇ 1824ರಲ್ಲಿ ಬ್ರಿಟಿಷರ ವಿರುದ್ದ ಹೋರಾಟ ನಡೆಸಿ ಗೆಲುವು ಸಾಧಿಸಿದ ಕಿತ್ತೂರು ರಾಣಿ ಚೆನ್ನಮ್ಮನ ಧೀರತ್ವ ಮತ್ತು ದೇಶಪ್ರೇಮ, ದಕ್ಷ ಆಡಳಿತ ವಿಧಾನ ಎಲ್ಲರಿಗೂ ಆದರ್ಶಪ್ರಾಯ ಎಂದರು.

ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರಿಗೆ ತೆರಿಗೆ ಕೊಡುವುದಿಲ್ಲ ಎಂದು ಹೇಳುವ ಮೂಲಕ ನಮಗೆ ಸ್ವಾಭಿಮಾನ ಪ್ರದರ್ಶನ ಮಾಡಿದರು. ಸಂಗೊಳ್ಳಿ ರಾಯಣ್ಣ ಅಂತಹ ಸ್ವಾತಂತ್ರ್ಯ ಸೇನಾನಿ ಕಿತ್ತೂರು ರಾಣಿ ಚೆನ್ನಮ್ಮನ ರಾಜ್ಯದಲ್ಲಿ ಇದ್ದರು.. ಮಹಿಳೆಯರು ಘನತೆ ಮತ್ತು ನ್ಯಾಯವನ್ನು ಕಾಪಾಡುವುದರಲ್ಲಿ ಮುಂಚೂಣಿಯಲ್ಲಿರಬಹುದು  ಎಂಬುದನ್ನು ತೋರಿಸಿಕೊಟ್ಟರು. ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ ದೇಶದ ಮಹಿಳೆಯರಿಗೆ ಸ್ಪೂರ್ತಿಯಾಗಿದೆ. ಇಂತಹ ವೀರ ಮಹಿಳೆಯ ನೆನಪಿನಲ್ಲಿ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಪ್ರತಿವರ್ಷ ಕಿತ್ತೂರು ಉತ್ಸವ ನಡೆಯುತ್ತದೆ. ಈ ವರ್ಷ ಕಿತ್ತೂರು ವಿಜಯಕ್ಕೆ 200 ವರ್ಷ ಆಗಿರುವ ಪ್ರಯುಕ್ತ  ಅಕ್ಟೋಬರ್ 23, 24, 25ರಂದು ಕಿತ್ತೂರಿನಲ್ಲಿ ವಿಜಯೋತ್ಸವ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಸಫೀರ್,  ಕಾಡನೂರು ಗ್ರಾಮಪಂಚಾಯಿತಿ ಅಧ್ಯಕ್ಷ ಮಧುಸೂದನ್, ಸಾಸಲು ಗ್ರಾಮಪಂಚಾಯಿತಿ ಸದಸ್ಯ ಪ್ರಸನ್ನಕುಮಾರ್,  ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು  ಭಾಗವಹಿಸಿದ್ದರು.

ದೊಡ್ಡಬಳ್ಳಾಪುರದಿಂದ ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥವನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿಗೆ ಕಳುಹಿಸಿ ಕೊಡಲಾಯಿತು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

10 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

10 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

12 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

12 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

19 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago