ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥಕ್ಕೆ ಅದ್ಧೂರಿ ಸ್ವಾಗತ

ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥ ದೊಡ್ಡಬಳ್ಳಾಪುರ ನಗರಕ್ಕೆ ಆಗಮಿಸಿತು. ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ  ವಿಜಯ ಜ್ಯೋತಿ ರಥವನ್ನು ಕಲಾತಂಡಗಳೊಂದಿಗೆ ಸ್ವಾಗತಿಸಲಾಯಿತು.

ದೊಡ್ಡಬಳ್ಳಾಪುರಕ್ಕೆ ಆಗಮಿಸಿದ ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥಕ್ಕೆ ಶಾಸಕ ಧೀರಜ್ ಮುನಿರಾಜು,  ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು, ನಗರಸಭೆ  ಪೌರಾಯುಕ್ತ ಕಾರ್ತಿಕಶ್ವರ್, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮೊದಲಾದವರು ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ  ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ,  ಕಿತ್ತೂರು ರಾಣಿ ಚೆನ್ನಮ್ಮ  ಬ್ರಿಟಿಷರ ವಿರುದ್ದ  ನಡೆಸಿದ ಹೋರಾಟದಲ್ಲಿ ವಿಜಯಗಳಿಸಿ 200 ವರ್ಷ ಪೂರೈಸಿರುವ ಹಿಲ್ಲೆಯಲ್ಲಿ ರಾಜ್ಯಾದ್ಯಂತ ನಡೆಯುವ ಕಿತ್ತೂರು ರಾಣಿ ಚೆನ್ನಮ್ಮ ವಿಜಯಯಾತ್ರೆ ನಡೆಯುತ್ತಿದೆ. 1824 ಅಕ್ಟೋಬರ್ 23 ರಂದು ಕಿತ್ತೂರು ರಾಣಿ ಚೆನ್ನಮ್ಮ ಸೈನ್ಯದೊಂದಿಗೆ ಕಿತ್ತೂರು ಕೋಟೆಯ ಹೊರಗೆ ಈಸ್ಟ್ ಇಂಡಿಯಾ ಕಂಪನಿಯ ಸೈನಿಕರನ್ನು ಸೋಲಿಸಿದ ದಿನವಾಗಿದೆ. ಬ್ರಿಟಿಷರ ವಿರುದ್ದ  ಮೊದಲ ಮಹಿಳಾ  ಹೋರಾಟಗಾರ್ತಿಗೆ 1824 ರಲ್ಲಿ  ದೊರೆತ ವಿಜಯವಾಗಿದೆ ಎಂದರು.

1857 ರಲ್ಲಿ ನಡೆದ ಸಿಪಾಯಿ ದಂಗೆಗೂ ಮೊದಲೇ 1824ರಲ್ಲಿ ಬ್ರಿಟಿಷರ ವಿರುದ್ದ ಹೋರಾಟ ನಡೆಸಿ ಗೆಲುವು ಸಾಧಿಸಿದ ಕಿತ್ತೂರು ರಾಣಿ ಚೆನ್ನಮ್ಮನ ಧೀರತ್ವ ಮತ್ತು ದೇಶಪ್ರೇಮ, ದಕ್ಷ ಆಡಳಿತ ವಿಧಾನ ಎಲ್ಲರಿಗೂ ಆದರ್ಶಪ್ರಾಯ ಎಂದರು.

ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರಿಗೆ ತೆರಿಗೆ ಕೊಡುವುದಿಲ್ಲ ಎಂದು ಹೇಳುವ ಮೂಲಕ ನಮಗೆ ಸ್ವಾಭಿಮಾನ ಪ್ರದರ್ಶನ ಮಾಡಿದರು. ಸಂಗೊಳ್ಳಿ ರಾಯಣ್ಣ ಅಂತಹ ಸ್ವಾತಂತ್ರ್ಯ ಸೇನಾನಿ ಕಿತ್ತೂರು ರಾಣಿ ಚೆನ್ನಮ್ಮನ ರಾಜ್ಯದಲ್ಲಿ ಇದ್ದರು.. ಮಹಿಳೆಯರು ಘನತೆ ಮತ್ತು ನ್ಯಾಯವನ್ನು ಕಾಪಾಡುವುದರಲ್ಲಿ ಮುಂಚೂಣಿಯಲ್ಲಿರಬಹುದು  ಎಂಬುದನ್ನು ತೋರಿಸಿಕೊಟ್ಟರು. ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ ದೇಶದ ಮಹಿಳೆಯರಿಗೆ ಸ್ಪೂರ್ತಿಯಾಗಿದೆ. ಇಂತಹ ವೀರ ಮಹಿಳೆಯ ನೆನಪಿನಲ್ಲಿ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಪ್ರತಿವರ್ಷ ಕಿತ್ತೂರು ಉತ್ಸವ ನಡೆಯುತ್ತದೆ. ಈ ವರ್ಷ ಕಿತ್ತೂರು ವಿಜಯಕ್ಕೆ 200 ವರ್ಷ ಆಗಿರುವ ಪ್ರಯುಕ್ತ  ಅಕ್ಟೋಬರ್ 23, 24, 25ರಂದು ಕಿತ್ತೂರಿನಲ್ಲಿ ವಿಜಯೋತ್ಸವ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಸಫೀರ್,  ಕಾಡನೂರು ಗ್ರಾಮಪಂಚಾಯಿತಿ ಅಧ್ಯಕ್ಷ ಮಧುಸೂದನ್, ಸಾಸಲು ಗ್ರಾಮಪಂಚಾಯಿತಿ ಸದಸ್ಯ ಪ್ರಸನ್ನಕುಮಾರ್,  ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು  ಭಾಗವಹಿಸಿದ್ದರು.

ದೊಡ್ಡಬಳ್ಳಾಪುರದಿಂದ ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥವನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿಗೆ ಕಳುಹಿಸಿ ಕೊಡಲಾಯಿತು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

6 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

6 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

9 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

10 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

14 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

18 hours ago